Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...