Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...