Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...