Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...