Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...