Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...