Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...