Homeಮುಖಪುಟಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ತಾಳ್ಮೆಯ ಬಗ್ಗೆ ಜಗ್ಗಿ ಅನೇಕ ಸಂದರ್ಭಗಳಲ್ಲಿ ಬೋಧಿಸಿದ್ದಾರೆ. ಆದರೆ ಬಿಬಿಸಿ ಸಂದರ್ಶನದ ವೇಳೆ ಸ್ವತಃ ತಾಳ್ಮೆ ಕಳೆದುಕೊಂಡರು. ಮೂರು ಕ್ಯಾಮೆರಾಗಳನ್ನು ಇಶಾ ಸಂಸ್ಥೆ ಆಫ್ ಮಾಡಿಸಿತು.

- Advertisement -
- Advertisement -

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡರು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಮಾತನಾಡುವ ಮೂಲಕ ಸಂದರ್ಶನ ಆರಂಭವಾಗುತ್ತದೆ. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದಾರೆ. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಇಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾರೆ. “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳುತ್ತಾರೆ.

ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎನ್ನುತ್ತಾರೆ. ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳುತ್ತಾರೆ. ಸುಬಗುಣಂ ಏನನ್ನೋ ಹೇಳಲು ಪ್ರಯತ್ನಿಸುತ್ತಿರುವಾಗ, ಜಗ್ಗಿ ಮತ್ತೆ ಮಾತನಾಡುವುದಕ್ಕೆ ತಡೆದು ಪ್ರಶ್ನೆಗಳನ್ನು ಪುನರಾವರ್ತಿಸುತ್ತಾರೆ.

ಇದನ್ನೂ ಓದಿರಿ: ನೂಪುರ್ ಮತ್ತು ನವೀನ್‌ರನ್ನು ಉಚ್ಚಾಟಿಸಿದ್ದು ಬಿಜೆಪಿಯ ನಿಜವಾದ ಮುಖವೇ?

“ನಾವು ಯಾವುದೇ ಅತಿಕ್ರಮಣ ಮಾಡಿಲ್ಲ ಎಂದು ಇಲಾಖೆ ಹೇಳುತ್ತಿದೆ. ಎಲ್ಲವೂ ಸರಿಯಾಗಿದೆ” ಎನ್ನುತ್ತಾರೆ ಜಗ್ಗಿ. ಪತ್ರಕರ್ತ ತನ್ನ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದಾಗ, ಜಗ್ಗಿ ಮಧ್ಯಪ್ರವೇಶಿಸಿ, “ಈ ದೇಶದಲ್ಲಿ ಕಾನೂನು ಇದೆಯೇ? ಸರ್ಕಾರ ಇದೆಯೇ? ಅವರ ಕೆಲಸ ಮಾಡಲಿ. ಬಿಟ್ಟುಬಿಡು. ನೀವು ಯಾಕೆ ಮಾಡುತ್ತಿದ್ದೀರಿ?” ಎಂದು ಹರಿಹಾಯುತ್ತಾರೆ.

ಸುಬಗುಣಂ ಅವರು ಮತ್ತೆ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದರು. “ಇಶಾ ಫೌಂಡೇಷನ್‌‌ ಅನುಮತಿ ಪಡೆದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದ್ದೀರಿ” ಎಂದು ಸಂದರ್ಶಕ ಪ್ರಶ್ನಿಸಿದಾಗ ಜಗ್ಗಿ, ”ನೀವು ಹೇಳುತ್ತಿರುವುದು ಮೂರ್ಖತನದಿಂದ ಕೂಡಿದೆ. ಈ ಕ್ಯಾಮೆರಾವನ್ನು ಆಫ್ ಮಾಡಿ, ಸಾಕು” ಎಂದು ಕಿಡಿಕಾರುತ್ತಾರೆ.

“Listen man” ಎಂದು ಜಗ್ಗಿ ವಾಸುದೇವ್ ಮುಂದುವರಿಸಿದರು. “ನನ್ನ ಮಾತನ್ನು ಕೇಳಿ, ದೇಶದಲ್ಲಿ ಇರುವ ಪ್ರತಿಯೊಂದು ಕಾನೂನನ್ನು ಅನುಸರಿಸಲಾಗಿದೆ. ಯಾವುದೇ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿದ್ದೇವೆ. ಬಹಳ ಹಿಂದೆ,  20 ವರ್ಷಗಳ ಹಿಂದೆ… ಕೆಲವು ಸಣ್ಣ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿಪಡಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡುತ್ತಾರೆ.

“ಸುಬಗುಣಂ ತಮ್ಮ ಪ್ರತಿಕ್ರಿಯೆಯನ್ನು ನೀಡಲು ಮುಂದಾದರು. ಈ ಸಮಯದಲ್ಲಿ, ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಇದ್ದವರು ಬಲವಂತವಾಗಿ ಮೂರು ಕ್ಯಾಮೆರಾಗಳ ರೆಕಾರ್ಡಿಂಗ್ ನಿಲ್ಲಿಸಿದರು” ಎಂದು ಬಿಬಿಸಿ ಹೇಳಿಕೊಂಡಿದೆ.

ಕೆಲವು ದಿನಗಳ ಹಿಂದೆ, ಜಗ್ಗಿ ವಾಸುದೇವ್ ಅವರು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು. ನಂತರ ಅದನ್ನು BOOM ವೆಬ್‌ಸೈಟ್‌ ಫ್ಯಾಕ್ಟ್‌ ಚೆಕ್ ಮಾಡಿತ್ತು.

ಭಾರತದಲ್ಲಿ ಅಸಹಿಷ್ಣುತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗ್ಗಿ, “ಕಳೆದ 25 ವರ್ಷಗಳಲ್ಲಿ ಈ ವಿಷಯಗಳು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ 25 ವರ್ಷಗಳ ಹಿಂದೆ, ನಾವು ವಿಶ್ವವಿದ್ಯಾನಿಲಯದಲ್ಲಿದ್ದಾಗ ಗಲಭೆಯನ್ನು ನೋಡದ ವರ್ಷವೇ ಇರಲಿಲ್ಲ. ದೇಶದಲ್ಲಿ ಕೋಮುಗಲಭೆಗಳು ಪ್ರತಿ ವರ್ಷ ಎಲ್ಲೋ ಒಂದು ಕಡೆ ನಡೆಯುತ್ತಿದ್ದವು. ಕಳೆದ 5-6 ವರ್ಷಗಳಲ್ಲಾಗಲಿ 10 ವರ್ಷಗಳಲ್ಲಾಗಲಿ ನೀವು ಅದರ ಬಗ್ಗೆ ಕೇಳಿಲ್ಲ” ಎಂದಿದ್ದರು.

ಆದರೆ, ಗೃಹ ವ್ಯವಹಾರಗಳ ಸಚಿವಾಲಯದ ಡೇಟಾವನ್ನು ಉಲ್ಲೇಖಿಸಿ 2012 ಮತ್ತು 2020 ರ ನಡುವೆ ಕನಿಷ್ಠ 6,285 ಕೋಮು ಗಲಭೆಗಳು ನಡೆದಿವೆ ಎಂದು BOOM ವರದಿ ಮಾಡಿತು. 2014 ಮತ್ತು 2020ರ ನಡುವೆ ದೇಶದಲ್ಲಿ 5,415 ಕೋಮು ಗಲಭೆಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶವನ್ನು ವರದಿ ಉಲ್ಲೇಖಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...