Homeಮುಖಪುಟಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ತಾಳ್ಮೆಯ ಬಗ್ಗೆ ಜಗ್ಗಿ ಅನೇಕ ಸಂದರ್ಭಗಳಲ್ಲಿ ಬೋಧಿಸಿದ್ದಾರೆ. ಆದರೆ ಬಿಬಿಸಿ ಸಂದರ್ಶನದ ವೇಳೆ ಸ್ವತಃ ತಾಳ್ಮೆ ಕಳೆದುಕೊಂಡರು. ಮೂರು ಕ್ಯಾಮೆರಾಗಳನ್ನು ಇಶಾ ಸಂಸ್ಥೆ ಆಫ್ ಮಾಡಿಸಿತು.

- Advertisement -
- Advertisement -

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡರು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಮಾತನಾಡುವ ಮೂಲಕ ಸಂದರ್ಶನ ಆರಂಭವಾಗುತ್ತದೆ. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದಾರೆ. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಇಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾರೆ. “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳುತ್ತಾರೆ.

ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎನ್ನುತ್ತಾರೆ. ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳುತ್ತಾರೆ. ಸುಬಗುಣಂ ಏನನ್ನೋ ಹೇಳಲು ಪ್ರಯತ್ನಿಸುತ್ತಿರುವಾಗ, ಜಗ್ಗಿ ಮತ್ತೆ ಮಾತನಾಡುವುದಕ್ಕೆ ತಡೆದು ಪ್ರಶ್ನೆಗಳನ್ನು ಪುನರಾವರ್ತಿಸುತ್ತಾರೆ.

ಇದನ್ನೂ ಓದಿರಿ: ನೂಪುರ್ ಮತ್ತು ನವೀನ್‌ರನ್ನು ಉಚ್ಚಾಟಿಸಿದ್ದು ಬಿಜೆಪಿಯ ನಿಜವಾದ ಮುಖವೇ?

“ನಾವು ಯಾವುದೇ ಅತಿಕ್ರಮಣ ಮಾಡಿಲ್ಲ ಎಂದು ಇಲಾಖೆ ಹೇಳುತ್ತಿದೆ. ಎಲ್ಲವೂ ಸರಿಯಾಗಿದೆ” ಎನ್ನುತ್ತಾರೆ ಜಗ್ಗಿ. ಪತ್ರಕರ್ತ ತನ್ನ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದಾಗ, ಜಗ್ಗಿ ಮಧ್ಯಪ್ರವೇಶಿಸಿ, “ಈ ದೇಶದಲ್ಲಿ ಕಾನೂನು ಇದೆಯೇ? ಸರ್ಕಾರ ಇದೆಯೇ? ಅವರ ಕೆಲಸ ಮಾಡಲಿ. ಬಿಟ್ಟುಬಿಡು. ನೀವು ಯಾಕೆ ಮಾಡುತ್ತಿದ್ದೀರಿ?” ಎಂದು ಹರಿಹಾಯುತ್ತಾರೆ.

ಸುಬಗುಣಂ ಅವರು ಮತ್ತೆ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದರು. “ಇಶಾ ಫೌಂಡೇಷನ್‌‌ ಅನುಮತಿ ಪಡೆದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದ್ದೀರಿ” ಎಂದು ಸಂದರ್ಶಕ ಪ್ರಶ್ನಿಸಿದಾಗ ಜಗ್ಗಿ, ”ನೀವು ಹೇಳುತ್ತಿರುವುದು ಮೂರ್ಖತನದಿಂದ ಕೂಡಿದೆ. ಈ ಕ್ಯಾಮೆರಾವನ್ನು ಆಫ್ ಮಾಡಿ, ಸಾಕು” ಎಂದು ಕಿಡಿಕಾರುತ್ತಾರೆ.

“Listen man” ಎಂದು ಜಗ್ಗಿ ವಾಸುದೇವ್ ಮುಂದುವರಿಸಿದರು. “ನನ್ನ ಮಾತನ್ನು ಕೇಳಿ, ದೇಶದಲ್ಲಿ ಇರುವ ಪ್ರತಿಯೊಂದು ಕಾನೂನನ್ನು ಅನುಸರಿಸಲಾಗಿದೆ. ಯಾವುದೇ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿದ್ದೇವೆ. ಬಹಳ ಹಿಂದೆ,  20 ವರ್ಷಗಳ ಹಿಂದೆ… ಕೆಲವು ಸಣ್ಣ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿಪಡಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡುತ್ತಾರೆ.

“ಸುಬಗುಣಂ ತಮ್ಮ ಪ್ರತಿಕ್ರಿಯೆಯನ್ನು ನೀಡಲು ಮುಂದಾದರು. ಈ ಸಮಯದಲ್ಲಿ, ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಇದ್ದವರು ಬಲವಂತವಾಗಿ ಮೂರು ಕ್ಯಾಮೆರಾಗಳ ರೆಕಾರ್ಡಿಂಗ್ ನಿಲ್ಲಿಸಿದರು” ಎಂದು ಬಿಬಿಸಿ ಹೇಳಿಕೊಂಡಿದೆ.

ಕೆಲವು ದಿನಗಳ ಹಿಂದೆ, ಜಗ್ಗಿ ವಾಸುದೇವ್ ಅವರು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು. ನಂತರ ಅದನ್ನು BOOM ವೆಬ್‌ಸೈಟ್‌ ಫ್ಯಾಕ್ಟ್‌ ಚೆಕ್ ಮಾಡಿತ್ತು.

ಭಾರತದಲ್ಲಿ ಅಸಹಿಷ್ಣುತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗ್ಗಿ, “ಕಳೆದ 25 ವರ್ಷಗಳಲ್ಲಿ ಈ ವಿಷಯಗಳು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ 25 ವರ್ಷಗಳ ಹಿಂದೆ, ನಾವು ವಿಶ್ವವಿದ್ಯಾನಿಲಯದಲ್ಲಿದ್ದಾಗ ಗಲಭೆಯನ್ನು ನೋಡದ ವರ್ಷವೇ ಇರಲಿಲ್ಲ. ದೇಶದಲ್ಲಿ ಕೋಮುಗಲಭೆಗಳು ಪ್ರತಿ ವರ್ಷ ಎಲ್ಲೋ ಒಂದು ಕಡೆ ನಡೆಯುತ್ತಿದ್ದವು. ಕಳೆದ 5-6 ವರ್ಷಗಳಲ್ಲಾಗಲಿ 10 ವರ್ಷಗಳಲ್ಲಾಗಲಿ ನೀವು ಅದರ ಬಗ್ಗೆ ಕೇಳಿಲ್ಲ” ಎಂದಿದ್ದರು.

ಆದರೆ, ಗೃಹ ವ್ಯವಹಾರಗಳ ಸಚಿವಾಲಯದ ಡೇಟಾವನ್ನು ಉಲ್ಲೇಖಿಸಿ 2012 ಮತ್ತು 2020 ರ ನಡುವೆ ಕನಿಷ್ಠ 6,285 ಕೋಮು ಗಲಭೆಗಳು ನಡೆದಿವೆ ಎಂದು BOOM ವರದಿ ಮಾಡಿತು. 2014 ಮತ್ತು 2020ರ ನಡುವೆ ದೇಶದಲ್ಲಿ 5,415 ಕೋಮು ಗಲಭೆಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶವನ್ನು ವರದಿ ಉಲ್ಲೇಖಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....