Homeಮುಖಪುಟಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ತಾಳ್ಮೆಯ ಬಗ್ಗೆ ಜಗ್ಗಿ ಅನೇಕ ಸಂದರ್ಭಗಳಲ್ಲಿ ಬೋಧಿಸಿದ್ದಾರೆ. ಆದರೆ ಬಿಬಿಸಿ ಸಂದರ್ಶನದ ವೇಳೆ ಸ್ವತಃ ತಾಳ್ಮೆ ಕಳೆದುಕೊಂಡರು. ಮೂರು ಕ್ಯಾಮೆರಾಗಳನ್ನು ಇಶಾ ಸಂಸ್ಥೆ ಆಫ್ ಮಾಡಿಸಿತು.

- Advertisement -
- Advertisement -

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡರು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಮಾತನಾಡುವ ಮೂಲಕ ಸಂದರ್ಶನ ಆರಂಭವಾಗುತ್ತದೆ. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದಾರೆ. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಇಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾರೆ. “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳುತ್ತಾರೆ.

ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎನ್ನುತ್ತಾರೆ. ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳುತ್ತಾರೆ. ಸುಬಗುಣಂ ಏನನ್ನೋ ಹೇಳಲು ಪ್ರಯತ್ನಿಸುತ್ತಿರುವಾಗ, ಜಗ್ಗಿ ಮತ್ತೆ ಮಾತನಾಡುವುದಕ್ಕೆ ತಡೆದು ಪ್ರಶ್ನೆಗಳನ್ನು ಪುನರಾವರ್ತಿಸುತ್ತಾರೆ.

ಇದನ್ನೂ ಓದಿರಿ: ನೂಪುರ್ ಮತ್ತು ನವೀನ್‌ರನ್ನು ಉಚ್ಚಾಟಿಸಿದ್ದು ಬಿಜೆಪಿಯ ನಿಜವಾದ ಮುಖವೇ?

“ನಾವು ಯಾವುದೇ ಅತಿಕ್ರಮಣ ಮಾಡಿಲ್ಲ ಎಂದು ಇಲಾಖೆ ಹೇಳುತ್ತಿದೆ. ಎಲ್ಲವೂ ಸರಿಯಾಗಿದೆ” ಎನ್ನುತ್ತಾರೆ ಜಗ್ಗಿ. ಪತ್ರಕರ್ತ ತನ್ನ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದಾಗ, ಜಗ್ಗಿ ಮಧ್ಯಪ್ರವೇಶಿಸಿ, “ಈ ದೇಶದಲ್ಲಿ ಕಾನೂನು ಇದೆಯೇ? ಸರ್ಕಾರ ಇದೆಯೇ? ಅವರ ಕೆಲಸ ಮಾಡಲಿ. ಬಿಟ್ಟುಬಿಡು. ನೀವು ಯಾಕೆ ಮಾಡುತ್ತಿದ್ದೀರಿ?” ಎಂದು ಹರಿಹಾಯುತ್ತಾರೆ.

ಸುಬಗುಣಂ ಅವರು ಮತ್ತೆ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದರು. “ಇಶಾ ಫೌಂಡೇಷನ್‌‌ ಅನುಮತಿ ಪಡೆದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದ್ದೀರಿ” ಎಂದು ಸಂದರ್ಶಕ ಪ್ರಶ್ನಿಸಿದಾಗ ಜಗ್ಗಿ, ”ನೀವು ಹೇಳುತ್ತಿರುವುದು ಮೂರ್ಖತನದಿಂದ ಕೂಡಿದೆ. ಈ ಕ್ಯಾಮೆರಾವನ್ನು ಆಫ್ ಮಾಡಿ, ಸಾಕು” ಎಂದು ಕಿಡಿಕಾರುತ್ತಾರೆ.

“Listen man” ಎಂದು ಜಗ್ಗಿ ವಾಸುದೇವ್ ಮುಂದುವರಿಸಿದರು. “ನನ್ನ ಮಾತನ್ನು ಕೇಳಿ, ದೇಶದಲ್ಲಿ ಇರುವ ಪ್ರತಿಯೊಂದು ಕಾನೂನನ್ನು ಅನುಸರಿಸಲಾಗಿದೆ. ಯಾವುದೇ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿದ್ದೇವೆ. ಬಹಳ ಹಿಂದೆ,  20 ವರ್ಷಗಳ ಹಿಂದೆ… ಕೆಲವು ಸಣ್ಣ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿಪಡಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡುತ್ತಾರೆ.

“ಸುಬಗುಣಂ ತಮ್ಮ ಪ್ರತಿಕ್ರಿಯೆಯನ್ನು ನೀಡಲು ಮುಂದಾದರು. ಈ ಸಮಯದಲ್ಲಿ, ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಇದ್ದವರು ಬಲವಂತವಾಗಿ ಮೂರು ಕ್ಯಾಮೆರಾಗಳ ರೆಕಾರ್ಡಿಂಗ್ ನಿಲ್ಲಿಸಿದರು” ಎಂದು ಬಿಬಿಸಿ ಹೇಳಿಕೊಂಡಿದೆ.

ಕೆಲವು ದಿನಗಳ ಹಿಂದೆ, ಜಗ್ಗಿ ವಾಸುದೇವ್ ಅವರು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು. ನಂತರ ಅದನ್ನು BOOM ವೆಬ್‌ಸೈಟ್‌ ಫ್ಯಾಕ್ಟ್‌ ಚೆಕ್ ಮಾಡಿತ್ತು.

ಭಾರತದಲ್ಲಿ ಅಸಹಿಷ್ಣುತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗ್ಗಿ, “ಕಳೆದ 25 ವರ್ಷಗಳಲ್ಲಿ ಈ ವಿಷಯಗಳು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ 25 ವರ್ಷಗಳ ಹಿಂದೆ, ನಾವು ವಿಶ್ವವಿದ್ಯಾನಿಲಯದಲ್ಲಿದ್ದಾಗ ಗಲಭೆಯನ್ನು ನೋಡದ ವರ್ಷವೇ ಇರಲಿಲ್ಲ. ದೇಶದಲ್ಲಿ ಕೋಮುಗಲಭೆಗಳು ಪ್ರತಿ ವರ್ಷ ಎಲ್ಲೋ ಒಂದು ಕಡೆ ನಡೆಯುತ್ತಿದ್ದವು. ಕಳೆದ 5-6 ವರ್ಷಗಳಲ್ಲಾಗಲಿ 10 ವರ್ಷಗಳಲ್ಲಾಗಲಿ ನೀವು ಅದರ ಬಗ್ಗೆ ಕೇಳಿಲ್ಲ” ಎಂದಿದ್ದರು.

ಆದರೆ, ಗೃಹ ವ್ಯವಹಾರಗಳ ಸಚಿವಾಲಯದ ಡೇಟಾವನ್ನು ಉಲ್ಲೇಖಿಸಿ 2012 ಮತ್ತು 2020 ರ ನಡುವೆ ಕನಿಷ್ಠ 6,285 ಕೋಮು ಗಲಭೆಗಳು ನಡೆದಿವೆ ಎಂದು BOOM ವರದಿ ಮಾಡಿತು. 2014 ಮತ್ತು 2020ರ ನಡುವೆ ದೇಶದಲ್ಲಿ 5,415 ಕೋಮು ಗಲಭೆಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶವನ್ನು ವರದಿ ಉಲ್ಲೇಖಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...