Homeಮುಖಪುಟಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ತಾಳ್ಮೆಯ ಬಗ್ಗೆ ಜಗ್ಗಿ ಅನೇಕ ಸಂದರ್ಭಗಳಲ್ಲಿ ಬೋಧಿಸಿದ್ದಾರೆ. ಆದರೆ ಬಿಬಿಸಿ ಸಂದರ್ಶನದ ವೇಳೆ ಸ್ವತಃ ತಾಳ್ಮೆ ಕಳೆದುಕೊಂಡರು. ಮೂರು ಕ್ಯಾಮೆರಾಗಳನ್ನು ಇಶಾ ಸಂಸ್ಥೆ ಆಫ್ ಮಾಡಿಸಿತು.

- Advertisement -
- Advertisement -

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡರು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಮಾತನಾಡುವ ಮೂಲಕ ಸಂದರ್ಶನ ಆರಂಭವಾಗುತ್ತದೆ. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದಾರೆ. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಇಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾರೆ. “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳುತ್ತಾರೆ.

ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎನ್ನುತ್ತಾರೆ. ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳುತ್ತಾರೆ. ಸುಬಗುಣಂ ಏನನ್ನೋ ಹೇಳಲು ಪ್ರಯತ್ನಿಸುತ್ತಿರುವಾಗ, ಜಗ್ಗಿ ಮತ್ತೆ ಮಾತನಾಡುವುದಕ್ಕೆ ತಡೆದು ಪ್ರಶ್ನೆಗಳನ್ನು ಪುನರಾವರ್ತಿಸುತ್ತಾರೆ.

ಇದನ್ನೂ ಓದಿರಿ: ನೂಪುರ್ ಮತ್ತು ನವೀನ್‌ರನ್ನು ಉಚ್ಚಾಟಿಸಿದ್ದು ಬಿಜೆಪಿಯ ನಿಜವಾದ ಮುಖವೇ?

“ನಾವು ಯಾವುದೇ ಅತಿಕ್ರಮಣ ಮಾಡಿಲ್ಲ ಎಂದು ಇಲಾಖೆ ಹೇಳುತ್ತಿದೆ. ಎಲ್ಲವೂ ಸರಿಯಾಗಿದೆ” ಎನ್ನುತ್ತಾರೆ ಜಗ್ಗಿ. ಪತ್ರಕರ್ತ ತನ್ನ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದಾಗ, ಜಗ್ಗಿ ಮಧ್ಯಪ್ರವೇಶಿಸಿ, “ಈ ದೇಶದಲ್ಲಿ ಕಾನೂನು ಇದೆಯೇ? ಸರ್ಕಾರ ಇದೆಯೇ? ಅವರ ಕೆಲಸ ಮಾಡಲಿ. ಬಿಟ್ಟುಬಿಡು. ನೀವು ಯಾಕೆ ಮಾಡುತ್ತಿದ್ದೀರಿ?” ಎಂದು ಹರಿಹಾಯುತ್ತಾರೆ.

ಸುಬಗುಣಂ ಅವರು ಮತ್ತೆ ಪ್ರಶ್ನೆಯನ್ನು ವಿವರಿಸಲು ಪ್ರಯತ್ನಿಸಿದರು. “ಇಶಾ ಫೌಂಡೇಷನ್‌‌ ಅನುಮತಿ ಪಡೆದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದ್ದೀರಿ” ಎಂದು ಸಂದರ್ಶಕ ಪ್ರಶ್ನಿಸಿದಾಗ ಜಗ್ಗಿ, ”ನೀವು ಹೇಳುತ್ತಿರುವುದು ಮೂರ್ಖತನದಿಂದ ಕೂಡಿದೆ. ಈ ಕ್ಯಾಮೆರಾವನ್ನು ಆಫ್ ಮಾಡಿ, ಸಾಕು” ಎಂದು ಕಿಡಿಕಾರುತ್ತಾರೆ.

“Listen man” ಎಂದು ಜಗ್ಗಿ ವಾಸುದೇವ್ ಮುಂದುವರಿಸಿದರು. “ನನ್ನ ಮಾತನ್ನು ಕೇಳಿ, ದೇಶದಲ್ಲಿ ಇರುವ ಪ್ರತಿಯೊಂದು ಕಾನೂನನ್ನು ಅನುಸರಿಸಲಾಗಿದೆ. ಯಾವುದೇ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿದ್ದೇವೆ. ಬಹಳ ಹಿಂದೆ,  20 ವರ್ಷಗಳ ಹಿಂದೆ… ಕೆಲವು ಸಣ್ಣ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿಪಡಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡುತ್ತಾರೆ.

“ಸುಬಗುಣಂ ತಮ್ಮ ಪ್ರತಿಕ್ರಿಯೆಯನ್ನು ನೀಡಲು ಮುಂದಾದರು. ಈ ಸಮಯದಲ್ಲಿ, ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಇದ್ದವರು ಬಲವಂತವಾಗಿ ಮೂರು ಕ್ಯಾಮೆರಾಗಳ ರೆಕಾರ್ಡಿಂಗ್ ನಿಲ್ಲಿಸಿದರು” ಎಂದು ಬಿಬಿಸಿ ಹೇಳಿಕೊಂಡಿದೆ.

ಕೆಲವು ದಿನಗಳ ಹಿಂದೆ, ಜಗ್ಗಿ ವಾಸುದೇವ್ ಅವರು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು. ನಂತರ ಅದನ್ನು BOOM ವೆಬ್‌ಸೈಟ್‌ ಫ್ಯಾಕ್ಟ್‌ ಚೆಕ್ ಮಾಡಿತ್ತು.

ಭಾರತದಲ್ಲಿ ಅಸಹಿಷ್ಣುತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗ್ಗಿ, “ಕಳೆದ 25 ವರ್ಷಗಳಲ್ಲಿ ಈ ವಿಷಯಗಳು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ 25 ವರ್ಷಗಳ ಹಿಂದೆ, ನಾವು ವಿಶ್ವವಿದ್ಯಾನಿಲಯದಲ್ಲಿದ್ದಾಗ ಗಲಭೆಯನ್ನು ನೋಡದ ವರ್ಷವೇ ಇರಲಿಲ್ಲ. ದೇಶದಲ್ಲಿ ಕೋಮುಗಲಭೆಗಳು ಪ್ರತಿ ವರ್ಷ ಎಲ್ಲೋ ಒಂದು ಕಡೆ ನಡೆಯುತ್ತಿದ್ದವು. ಕಳೆದ 5-6 ವರ್ಷಗಳಲ್ಲಾಗಲಿ 10 ವರ್ಷಗಳಲ್ಲಾಗಲಿ ನೀವು ಅದರ ಬಗ್ಗೆ ಕೇಳಿಲ್ಲ” ಎಂದಿದ್ದರು.

ಆದರೆ, ಗೃಹ ವ್ಯವಹಾರಗಳ ಸಚಿವಾಲಯದ ಡೇಟಾವನ್ನು ಉಲ್ಲೇಖಿಸಿ 2012 ಮತ್ತು 2020 ರ ನಡುವೆ ಕನಿಷ್ಠ 6,285 ಕೋಮು ಗಲಭೆಗಳು ನಡೆದಿವೆ ಎಂದು BOOM ವರದಿ ಮಾಡಿತು. 2014 ಮತ್ತು 2020ರ ನಡುವೆ ದೇಶದಲ್ಲಿ 5,415 ಕೋಮು ಗಲಭೆಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶವನ್ನು ವರದಿ ಉಲ್ಲೇಖಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...