Homeಕರ್ನಾಟಕ'ಶೈಕ್ಷಣಿಕ ವಲಯದ ಮಹಾ ದುರಂತ': ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಸಭೆ ನಡೆಸಿರುವುದನ್ನು ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಖಂಡಿಸಿದೆ.

ಕೇಂದ್ರೀಯ ವಿಶ್ವ ವಿದ್ಯಾಲಯವನ್ನು ಕೋಮುವಾದದ ಆಡುಂಬೊಲ ಮಾಡಲು ಹೊರಟಿರುವ ಅಲ್ಲಿನ ಆಡಳಿತ ಮಂಡಳಿಯ ಈ ಕುಕೃತ್ಯ ಶೈಕ್ಷಣಿಕ ವಲಯದ ಮಹಾ ದುರಂತವಾಗಿದೆ. ವಿವಿಯಲ್ಲಿ ಸಂಘಿಗಳ ಸಭೆ, ಚಟುವಟಿಕೆ ನಡೆಸುವುದು, ಸಂಘದ ಗೀತೆಯಾಗಿರುವ ನಮಸ್ತೇ ಸದಾ ವತ್ಸಲೇ ಹಾಡಿಸುವುದು ದೇಶದ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಸಂಘಟನೆಯ ಕೆ. ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ವಿಜಯಾ, ಬಿ.ಶ್ರೀಪಾದ ಭಟ್, ಕೆ.ಎಸ್‌. ವಿಮಲಾ, ಟಿ ಸುರೇಂದ್ರ ರಾವ್, ಮೀನಾಕ್ಷಿ ಬಾಳಿ, ಬಿ.ಎನ್‌ ಯೋಗಾನಂದ, ಎನ್‌.ಗಾಯತ್ರಿ ಹೇಳಿದ್ದಾರೆ.

ವಿವಿಯಲ್ಲಿ ಉನ್ನತ ಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಜನೋಪಯೋಗಿ ಸಂಶೋಧನೆಗಳು, ವರ್ತಮಾನದ ತಲ್ಲಣಗಳ ಕುರಿತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಚಿಂತನ-ಮಂಥನಗಳನ್ನು ನಡೆಸುವುದು ಅದರ ಶ್ರೇಯಸ್ಸಿಗೆ ಅಗತ್ಯವಾಗಿರುತ್ತದೆ. ಇದರಿಂದ ವಿದ್ಯಾರ್ಥಿಗಳ ಬೆಳವಣಿಗೆಯಾಗುತ್ತದೆ. ಆದರೆ, ಇಲ್ಲಿ ಸಂಕುಚಿತ ಮನಸ್ಥಿತಿಯನ್ನು ಮೂಡಿಸುವ, ಧರ್ಮದ್ವೇಷ, ಹಗೆತನ, ದೇಶದ ಸಂವಿಧಾನ ಎಂದಿಗೂ ಒಪ್ಪಲಾರದ ಕೋಮುದ್ವೇಷಗಳನ್ನು ತುಂಬುವ ಆರ್‌ಎಸ್‌ಎಸ್‌ ಪ್ರತಿಪಾದಿಸುವ ದೇಶ ವಿಭಜಕ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ ಎಂಬುದು ಮತ್ತೆ ಮತ್ತೆ ದೃಢಪಡುತ್ತಿದೆ ಎಂದಿದ್ದಾರೆ.

ಈ ಮೊದಲೇ ಇಂಥಹ ಚಟುವಟಿಕೆಗಳು ನಡೆದಾಗ ಸ್ಥಳೀಯ ಸಂವಿಧಾನ ಪರ, ಪ್ರಗತಿಶೀಲರು ಬೃಹತ್ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದರು. ಸ್ವಲ್ಪ ದಿನ ಸಮ್ಮನಿದ್ದಂತೆ ನಟಿಸಿ, ಮತ್ತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದಿದೆ ಎಂಬ ಕಾರಣಕ್ಕೆ ತಮ್ಮ ಚಟುವಟಿಕೆಗಳನ್ನು ಶುರು ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರೀಯ ವಿಶ್ವ ವಿದ್ಯಾಲಯ ದೇಶದ ಆಸ್ಥಿಯೇ ಹೊರತು, ಯಾವುದೇ ಒಂದು ಪಕ್ಷದ ಅಥವಾ ಕೋಮುವಾದಿ ಸಿದ್ದಾಂತವನ್ನು ಪ್ರತಿಪಾದಿಸುವ ಸಂಘಟನೆಯ ಆಸ್ತಿಯಲ್ಲ. ವಿವಿ 140 ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆಯಾಗಿ ದೇಶದ ಸಂವಿಧಾನದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕೇ ಹೊರತು, ಕೇಶವ ಕೃಪಾ ಅಥವಾ ನಾಗಪುರದ ಕಛೇರಿಯಾಗಿ ಅಲ್ಲ ಎಂದಿರುವ ಸಂಘಟನೆಯ ಪ್ರಮುಖರು, ಕಲಬುರಗಿಯ ಪ್ರಜ್ಞಾವಂತ ಜನರು ಕೋಮುವಾದಿ ಸಂಘಿಗಳ ಹುನ್ನಾರದ ವಿರುದ್ಧ ನಡೆಸುವ ಎಲ್ಲಾ ಸಂವಿಧಾನ ಪರ, ನಿಜ ಭಾರತದ ಉಳಿವಿನ ಪರವಾದ ಕೆಲಸಗಳು, ಮತ್ತು ಪ್ರತಿಭಟನೆಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ.

ಜುಲೈ 18,2024ರಂದು ವಿಶ್ವ ವಿದ್ಯಾಲಯದ ಅತಿಥಿ ಗೃಹದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಸಭೆ ನಡೆದಿದ್ದು, ಇದನ್ನು ಖಂಡಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಕುರಿತು ಜುಲೈ 19ರಂದು ನಾನುಗೌರಿ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...