Homeಕರ್ನಾಟಕ'ಶೈಕ್ಷಣಿಕ ವಲಯದ ಮಹಾ ದುರಂತ': ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಸಭೆ ನಡೆಸಿರುವುದನ್ನು ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಖಂಡಿಸಿದೆ.

ಕೇಂದ್ರೀಯ ವಿಶ್ವ ವಿದ್ಯಾಲಯವನ್ನು ಕೋಮುವಾದದ ಆಡುಂಬೊಲ ಮಾಡಲು ಹೊರಟಿರುವ ಅಲ್ಲಿನ ಆಡಳಿತ ಮಂಡಳಿಯ ಈ ಕುಕೃತ್ಯ ಶೈಕ್ಷಣಿಕ ವಲಯದ ಮಹಾ ದುರಂತವಾಗಿದೆ. ವಿವಿಯಲ್ಲಿ ಸಂಘಿಗಳ ಸಭೆ, ಚಟುವಟಿಕೆ ನಡೆಸುವುದು, ಸಂಘದ ಗೀತೆಯಾಗಿರುವ ನಮಸ್ತೇ ಸದಾ ವತ್ಸಲೇ ಹಾಡಿಸುವುದು ದೇಶದ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಸಂಘಟನೆಯ ಕೆ. ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ವಿಜಯಾ, ಬಿ.ಶ್ರೀಪಾದ ಭಟ್, ಕೆ.ಎಸ್‌. ವಿಮಲಾ, ಟಿ ಸುರೇಂದ್ರ ರಾವ್, ಮೀನಾಕ್ಷಿ ಬಾಳಿ, ಬಿ.ಎನ್‌ ಯೋಗಾನಂದ, ಎನ್‌.ಗಾಯತ್ರಿ ಹೇಳಿದ್ದಾರೆ.

ವಿವಿಯಲ್ಲಿ ಉನ್ನತ ಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಜನೋಪಯೋಗಿ ಸಂಶೋಧನೆಗಳು, ವರ್ತಮಾನದ ತಲ್ಲಣಗಳ ಕುರಿತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಚಿಂತನ-ಮಂಥನಗಳನ್ನು ನಡೆಸುವುದು ಅದರ ಶ್ರೇಯಸ್ಸಿಗೆ ಅಗತ್ಯವಾಗಿರುತ್ತದೆ. ಇದರಿಂದ ವಿದ್ಯಾರ್ಥಿಗಳ ಬೆಳವಣಿಗೆಯಾಗುತ್ತದೆ. ಆದರೆ, ಇಲ್ಲಿ ಸಂಕುಚಿತ ಮನಸ್ಥಿತಿಯನ್ನು ಮೂಡಿಸುವ, ಧರ್ಮದ್ವೇಷ, ಹಗೆತನ, ದೇಶದ ಸಂವಿಧಾನ ಎಂದಿಗೂ ಒಪ್ಪಲಾರದ ಕೋಮುದ್ವೇಷಗಳನ್ನು ತುಂಬುವ ಆರ್‌ಎಸ್‌ಎಸ್‌ ಪ್ರತಿಪಾದಿಸುವ ದೇಶ ವಿಭಜಕ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ ಎಂಬುದು ಮತ್ತೆ ಮತ್ತೆ ದೃಢಪಡುತ್ತಿದೆ ಎಂದಿದ್ದಾರೆ.

ಈ ಮೊದಲೇ ಇಂಥಹ ಚಟುವಟಿಕೆಗಳು ನಡೆದಾಗ ಸ್ಥಳೀಯ ಸಂವಿಧಾನ ಪರ, ಪ್ರಗತಿಶೀಲರು ಬೃಹತ್ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದರು. ಸ್ವಲ್ಪ ದಿನ ಸಮ್ಮನಿದ್ದಂತೆ ನಟಿಸಿ, ಮತ್ತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದಿದೆ ಎಂಬ ಕಾರಣಕ್ಕೆ ತಮ್ಮ ಚಟುವಟಿಕೆಗಳನ್ನು ಶುರು ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರೀಯ ವಿಶ್ವ ವಿದ್ಯಾಲಯ ದೇಶದ ಆಸ್ಥಿಯೇ ಹೊರತು, ಯಾವುದೇ ಒಂದು ಪಕ್ಷದ ಅಥವಾ ಕೋಮುವಾದಿ ಸಿದ್ದಾಂತವನ್ನು ಪ್ರತಿಪಾದಿಸುವ ಸಂಘಟನೆಯ ಆಸ್ತಿಯಲ್ಲ. ವಿವಿ 140 ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆಯಾಗಿ ದೇಶದ ಸಂವಿಧಾನದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕೇ ಹೊರತು, ಕೇಶವ ಕೃಪಾ ಅಥವಾ ನಾಗಪುರದ ಕಛೇರಿಯಾಗಿ ಅಲ್ಲ ಎಂದಿರುವ ಸಂಘಟನೆಯ ಪ್ರಮುಖರು, ಕಲಬುರಗಿಯ ಪ್ರಜ್ಞಾವಂತ ಜನರು ಕೋಮುವಾದಿ ಸಂಘಿಗಳ ಹುನ್ನಾರದ ವಿರುದ್ಧ ನಡೆಸುವ ಎಲ್ಲಾ ಸಂವಿಧಾನ ಪರ, ನಿಜ ಭಾರತದ ಉಳಿವಿನ ಪರವಾದ ಕೆಲಸಗಳು, ಮತ್ತು ಪ್ರತಿಭಟನೆಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ.

ಜುಲೈ 18,2024ರಂದು ವಿಶ್ವ ವಿದ್ಯಾಲಯದ ಅತಿಥಿ ಗೃಹದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಸಭೆ ನಡೆದಿದ್ದು, ಇದನ್ನು ಖಂಡಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಕುರಿತು ಜುಲೈ 19ರಂದು ನಾನುಗೌರಿ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...