Homeಕರ್ನಾಟಕ'ಶೈಕ್ಷಣಿಕ ವಲಯದ ಮಹಾ ದುರಂತ': ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಸಭೆ ನಡೆಸಿರುವುದನ್ನು ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಖಂಡಿಸಿದೆ.

ಕೇಂದ್ರೀಯ ವಿಶ್ವ ವಿದ್ಯಾಲಯವನ್ನು ಕೋಮುವಾದದ ಆಡುಂಬೊಲ ಮಾಡಲು ಹೊರಟಿರುವ ಅಲ್ಲಿನ ಆಡಳಿತ ಮಂಡಳಿಯ ಈ ಕುಕೃತ್ಯ ಶೈಕ್ಷಣಿಕ ವಲಯದ ಮಹಾ ದುರಂತವಾಗಿದೆ. ವಿವಿಯಲ್ಲಿ ಸಂಘಿಗಳ ಸಭೆ, ಚಟುವಟಿಕೆ ನಡೆಸುವುದು, ಸಂಘದ ಗೀತೆಯಾಗಿರುವ ನಮಸ್ತೇ ಸದಾ ವತ್ಸಲೇ ಹಾಡಿಸುವುದು ದೇಶದ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಸಂಘಟನೆಯ ಕೆ. ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ವಿಜಯಾ, ಬಿ.ಶ್ರೀಪಾದ ಭಟ್, ಕೆ.ಎಸ್‌. ವಿಮಲಾ, ಟಿ ಸುರೇಂದ್ರ ರಾವ್, ಮೀನಾಕ್ಷಿ ಬಾಳಿ, ಬಿ.ಎನ್‌ ಯೋಗಾನಂದ, ಎನ್‌.ಗಾಯತ್ರಿ ಹೇಳಿದ್ದಾರೆ.

ವಿವಿಯಲ್ಲಿ ಉನ್ನತ ಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಜನೋಪಯೋಗಿ ಸಂಶೋಧನೆಗಳು, ವರ್ತಮಾನದ ತಲ್ಲಣಗಳ ಕುರಿತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಚಿಂತನ-ಮಂಥನಗಳನ್ನು ನಡೆಸುವುದು ಅದರ ಶ್ರೇಯಸ್ಸಿಗೆ ಅಗತ್ಯವಾಗಿರುತ್ತದೆ. ಇದರಿಂದ ವಿದ್ಯಾರ್ಥಿಗಳ ಬೆಳವಣಿಗೆಯಾಗುತ್ತದೆ. ಆದರೆ, ಇಲ್ಲಿ ಸಂಕುಚಿತ ಮನಸ್ಥಿತಿಯನ್ನು ಮೂಡಿಸುವ, ಧರ್ಮದ್ವೇಷ, ಹಗೆತನ, ದೇಶದ ಸಂವಿಧಾನ ಎಂದಿಗೂ ಒಪ್ಪಲಾರದ ಕೋಮುದ್ವೇಷಗಳನ್ನು ತುಂಬುವ ಆರ್‌ಎಸ್‌ಎಸ್‌ ಪ್ರತಿಪಾದಿಸುವ ದೇಶ ವಿಭಜಕ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ ಎಂಬುದು ಮತ್ತೆ ಮತ್ತೆ ದೃಢಪಡುತ್ತಿದೆ ಎಂದಿದ್ದಾರೆ.

ಈ ಮೊದಲೇ ಇಂಥಹ ಚಟುವಟಿಕೆಗಳು ನಡೆದಾಗ ಸ್ಥಳೀಯ ಸಂವಿಧಾನ ಪರ, ಪ್ರಗತಿಶೀಲರು ಬೃಹತ್ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದರು. ಸ್ವಲ್ಪ ದಿನ ಸಮ್ಮನಿದ್ದಂತೆ ನಟಿಸಿ, ಮತ್ತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದಿದೆ ಎಂಬ ಕಾರಣಕ್ಕೆ ತಮ್ಮ ಚಟುವಟಿಕೆಗಳನ್ನು ಶುರು ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರೀಯ ವಿಶ್ವ ವಿದ್ಯಾಲಯ ದೇಶದ ಆಸ್ಥಿಯೇ ಹೊರತು, ಯಾವುದೇ ಒಂದು ಪಕ್ಷದ ಅಥವಾ ಕೋಮುವಾದಿ ಸಿದ್ದಾಂತವನ್ನು ಪ್ರತಿಪಾದಿಸುವ ಸಂಘಟನೆಯ ಆಸ್ತಿಯಲ್ಲ. ವಿವಿ 140 ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆಯಾಗಿ ದೇಶದ ಸಂವಿಧಾನದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕೇ ಹೊರತು, ಕೇಶವ ಕೃಪಾ ಅಥವಾ ನಾಗಪುರದ ಕಛೇರಿಯಾಗಿ ಅಲ್ಲ ಎಂದಿರುವ ಸಂಘಟನೆಯ ಪ್ರಮುಖರು, ಕಲಬುರಗಿಯ ಪ್ರಜ್ಞಾವಂತ ಜನರು ಕೋಮುವಾದಿ ಸಂಘಿಗಳ ಹುನ್ನಾರದ ವಿರುದ್ಧ ನಡೆಸುವ ಎಲ್ಲಾ ಸಂವಿಧಾನ ಪರ, ನಿಜ ಭಾರತದ ಉಳಿವಿನ ಪರವಾದ ಕೆಲಸಗಳು, ಮತ್ತು ಪ್ರತಿಭಟನೆಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ.

ಜುಲೈ 18,2024ರಂದು ವಿಶ್ವ ವಿದ್ಯಾಲಯದ ಅತಿಥಿ ಗೃಹದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಸಭೆ ನಡೆದಿದ್ದು, ಇದನ್ನು ಖಂಡಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಕುರಿತು ಜುಲೈ 19ರಂದು ನಾನುಗೌರಿ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...