Homeರಾಷ್ಟ್ರೀಯಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆ ಇದು ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಜಹಾಂಗೀರ್‌‌‌ಪುರಿ ಹಿಂಸಾಚಾರದ ಕುರಿತು ದೆಹಲಿ ಪೊಲೀಸರು ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕ್ರಿಮಿನಲ್ ಪಿತೂರಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಂತಹ ವಿವಿಧ ಆರೋಪಗಳ ಅಡಿಯಲ್ಲಿ 45 ಜನರ ಮೇಲೆ ಆರೋಪ ಹೊರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

37 ಆರೋಪಿಗಳ ಪೈಕಿ 20 ವ್ಯಕ್ತಿಗಳನ್ನು ಸಿಸಿಟಿವಿ ಅಥವಾ ವೈರಲ್ ದೃಶ್ಯಗಳಲ್ಲಿ ನೋಡಿ ಬಂಧಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಆರೋಪಿಗಳನ್ನು ಗುರುತಿಸಲು ತಂತ್ರಜ್ಞಾನವನ್ನು ಬಳಸಲಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದುವರೆಗೆ ನಡೆಸಲಾದ ತನಿಖೆಯಿಂದ ಮತ್ತು ದಾಖಲೆಯಲ್ಲಿರುವ ವಸ್ತುಗಳಿಂದ, ಪ್ರಸ್ತುತ ಘಟನೆಯು 2019 ಮತ್ತು 2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆಯಾಗಿದೆ ಎಂದು ದೃಢಪಡಿಸಲಾಗಿದೆ. ಇದು ಏಪ್ರಿಲ್ 10, 2022 ರಂದು ದೇಶದ ವಿವಿಧ ಭಾಗಗಳಲ್ಲಿ ರಾಮ ನವಮಿ ಘಟನೆಗಳ ನಂತರ ಉಲ್ಬಣಗೊಂಡಿದೆ” ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್

ವಿದ್ಯುನ್ಮಾನ ಮಾಧ್ಯಮದಿಂದ 34 ವೈರಲ್ ವೀಡಿಯೊಗಳು ಮತ್ತು 56 ವೀಡಿಯೊಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿದೆ ಎಂದು ಅದು ಹೇಳಿದೆ. ಇದರಲ್ಲಿ ಕುಸಲ್ ಸಿನಿಮಾ ರಸ್ತೆಯ ಸುತ್ತ ಅಳವಡಿಸಲಾಗಿರುವ 28 ಪಿಡಬ್ಲ್ಯುಡಿ ಕ್ಯಾಮೆರಾಗಳು ಮತ್ತು ಜಹಾಂಗೀರ್‌ಪುರಿಯ ಸಿ-ಬ್ಲಾಕ್ ಸುತ್ತಲೂ ಅಳವಡಿಸಲಾಗಿರುವ 30 ಪಿಡಬ್ಲ್ಯುಡಿ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಾವಳಿಗಳು ಸೇರಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಸಂಸ್ಥೆಯು 85 ಪೊಲೀಸರು ಮತ್ತು 47 ಸಾರ್ವಜನಿಕ ವ್ಯಕ್ತಿಗಳು/ವೈದ್ಯರು ಮತ್ತು ಇತರರು ಸೇರಿದಂತೆ 132 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಇಬ್ಬರು ಬಾಲಾಪರಾಧಿಗಳ ವಿರುದ್ಧ ಈಗಾಗಲೇ ಪ್ರಿನ್ಸಿಪಾಲ್ ಜುವೆನೈಲ್ ಜಸ್ಟಿಸ್ ಬೋರ್ಡ್ ಮುಂದೆ ಎಫ್ಐಆರ್ ದಾಖಲಿಸಲಾಗಿದೆ.

2063 ಪುಟದ ಚಾರ್ಜ್‌ಶೀಟ್‌‌ ಬಂಧಿತ 37 ಮತ್ತು ತಲೆಮರೆಸಿಕೊಂಡಿರುವ ಎಂಟು ಮಂದಿ ಆರೋಪಿಗಳನ್ನು ಹೆಸರಿಸಿದೆ. ಅವರ ವಿರುದ್ಧ ಕ್ರಿಮಿನಲ್ ಪಿತೂರಿ, 147 (ಗಲಭೆ), ಸಾರ್ವಜನಿಕ ನೌಕರನನ್ನು ಕೊಲೆ ಮಾಡುವ ಪ್ರಯತ್ನ ಮತ್ತು ಹಲ್ಲೆ ಮಾಡುವುದು ಮತ್ತು ಅವರ ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ತಡೆಯುವುದು ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ಒಟ್ಟು ಒಂಬತ್ತು ಬಂದೂಕುಗಳು, ಐದು ಜೀವಂತ ಕಾಟ್ರಿಡ್ಜ್‌ಗಳು, ಎರಡು ಖಾಲಿ ಕಾಟ್ರಿಡ್ಜ್‌ಗಳು, ಒಂಬತ್ತು ಕತ್ತಿಗಳು ಮತ್ತು ಘಟನೆಯ ಸಮಯದಲ್ಲಿ ಧರಿಸಿದ್ದ 11 ಆರೋಪಿಗಳ ಬಟ್ಟೆಗಳು ಮತ್ತು ವೀಡಿಯೊಗಳಲ್ಲಿ ಕಂಡುಬರುವ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಾರ್ಜ್‌ಶೀಟ್ ಹೇಳಿದೆ. ಆರೋಪಿಗಳಿಂದ 21 ಮೊಬೈಲ್ ಫೋನ್ ಗಳನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...