Homeರಾಷ್ಟ್ರೀಯಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆ ಇದು ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಜಹಾಂಗೀರ್‌‌‌ಪುರಿ ಹಿಂಸಾಚಾರದ ಕುರಿತು ದೆಹಲಿ ಪೊಲೀಸರು ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕ್ರಿಮಿನಲ್ ಪಿತೂರಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಂತಹ ವಿವಿಧ ಆರೋಪಗಳ ಅಡಿಯಲ್ಲಿ 45 ಜನರ ಮೇಲೆ ಆರೋಪ ಹೊರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

37 ಆರೋಪಿಗಳ ಪೈಕಿ 20 ವ್ಯಕ್ತಿಗಳನ್ನು ಸಿಸಿಟಿವಿ ಅಥವಾ ವೈರಲ್ ದೃಶ್ಯಗಳಲ್ಲಿ ನೋಡಿ ಬಂಧಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಆರೋಪಿಗಳನ್ನು ಗುರುತಿಸಲು ತಂತ್ರಜ್ಞಾನವನ್ನು ಬಳಸಲಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದುವರೆಗೆ ನಡೆಸಲಾದ ತನಿಖೆಯಿಂದ ಮತ್ತು ದಾಖಲೆಯಲ್ಲಿರುವ ವಸ್ತುಗಳಿಂದ, ಪ್ರಸ್ತುತ ಘಟನೆಯು 2019 ಮತ್ತು 2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ಮುಂದುವರಿಕೆಯಾಗಿದೆ ಎಂದು ದೃಢಪಡಿಸಲಾಗಿದೆ. ಇದು ಏಪ್ರಿಲ್ 10, 2022 ರಂದು ದೇಶದ ವಿವಿಧ ಭಾಗಗಳಲ್ಲಿ ರಾಮ ನವಮಿ ಘಟನೆಗಳ ನಂತರ ಉಲ್ಬಣಗೊಂಡಿದೆ” ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್

ವಿದ್ಯುನ್ಮಾನ ಮಾಧ್ಯಮದಿಂದ 34 ವೈರಲ್ ವೀಡಿಯೊಗಳು ಮತ್ತು 56 ವೀಡಿಯೊಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿದೆ ಎಂದು ಅದು ಹೇಳಿದೆ. ಇದರಲ್ಲಿ ಕುಸಲ್ ಸಿನಿಮಾ ರಸ್ತೆಯ ಸುತ್ತ ಅಳವಡಿಸಲಾಗಿರುವ 28 ಪಿಡಬ್ಲ್ಯುಡಿ ಕ್ಯಾಮೆರಾಗಳು ಮತ್ತು ಜಹಾಂಗೀರ್‌ಪುರಿಯ ಸಿ-ಬ್ಲಾಕ್ ಸುತ್ತಲೂ ಅಳವಡಿಸಲಾಗಿರುವ 30 ಪಿಡಬ್ಲ್ಯುಡಿ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಾವಳಿಗಳು ಸೇರಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಸಂಸ್ಥೆಯು 85 ಪೊಲೀಸರು ಮತ್ತು 47 ಸಾರ್ವಜನಿಕ ವ್ಯಕ್ತಿಗಳು/ವೈದ್ಯರು ಮತ್ತು ಇತರರು ಸೇರಿದಂತೆ 132 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಇಬ್ಬರು ಬಾಲಾಪರಾಧಿಗಳ ವಿರುದ್ಧ ಈಗಾಗಲೇ ಪ್ರಿನ್ಸಿಪಾಲ್ ಜುವೆನೈಲ್ ಜಸ್ಟಿಸ್ ಬೋರ್ಡ್ ಮುಂದೆ ಎಫ್ಐಆರ್ ದಾಖಲಿಸಲಾಗಿದೆ.

2063 ಪುಟದ ಚಾರ್ಜ್‌ಶೀಟ್‌‌ ಬಂಧಿತ 37 ಮತ್ತು ತಲೆಮರೆಸಿಕೊಂಡಿರುವ ಎಂಟು ಮಂದಿ ಆರೋಪಿಗಳನ್ನು ಹೆಸರಿಸಿದೆ. ಅವರ ವಿರುದ್ಧ ಕ್ರಿಮಿನಲ್ ಪಿತೂರಿ, 147 (ಗಲಭೆ), ಸಾರ್ವಜನಿಕ ನೌಕರನನ್ನು ಕೊಲೆ ಮಾಡುವ ಪ್ರಯತ್ನ ಮತ್ತು ಹಲ್ಲೆ ಮಾಡುವುದು ಮತ್ತು ಅವರ ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ತಡೆಯುವುದು ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ಒಟ್ಟು ಒಂಬತ್ತು ಬಂದೂಕುಗಳು, ಐದು ಜೀವಂತ ಕಾಟ್ರಿಡ್ಜ್‌ಗಳು, ಎರಡು ಖಾಲಿ ಕಾಟ್ರಿಡ್ಜ್‌ಗಳು, ಒಂಬತ್ತು ಕತ್ತಿಗಳು ಮತ್ತು ಘಟನೆಯ ಸಮಯದಲ್ಲಿ ಧರಿಸಿದ್ದ 11 ಆರೋಪಿಗಳ ಬಟ್ಟೆಗಳು ಮತ್ತು ವೀಡಿಯೊಗಳಲ್ಲಿ ಕಂಡುಬರುವ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಾರ್ಜ್‌ಶೀಟ್ ಹೇಳಿದೆ. ಆರೋಪಿಗಳಿಂದ 21 ಮೊಬೈಲ್ ಫೋನ್ ಗಳನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...