Homeಮುಖಪುಟಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ವನ್ನಿಯಾರ್‌ ಸಂಘ ಆರೋಪಿಸಿದೆ. ನಟ ಸೂರ್ಯ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದಾರೆ.

ಇದನ್ನೂ ಓದಿರಿ: ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಿದೆ.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದಾರೆ.

ಪೊಲೀಸ್ ಪಾತ್ರವನ್ನು ವನ್ನಿಯಾರ್ ಸಮುದಾಯದ ಸದಸ್ಯ ಎಂದು ಬಿಂಬಿಸಲು ಇದನ್ನು ಮಾಡಲಾಗಿದೆ ಎಂದು ನೋಟಿಸ್ ಹೇಳಿಕೊಂಡಿದೆ. ಚಲನಚಿತ್ರ ನಿರ್ಮಾಪಕರು, “ವನ್ನಿಯಾರ್ ಸಂಗಮ್‌ನ ಸದಸ್ಯರನ್ನು ದೂಷಿಸುವ ಮತ್ತು ಇಡೀ ವನ್ನಿಯಾರ್ ಸಮುದಾಯದ ಇಮೇಜ್, ಪ್ರತಿಷ್ಠೆಗೆ ಹಾನಿ ಮಾಡುವ ದುರುದ್ದೇಶದಿಂದ ವರ್ತಿಸಿದ್ದಾರೆ” ಎಂದು ಅಧ್ಯಕ್ಷರು ದೂರಿದ್ದಾರೆ.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಬರುವ ರಾಜಾಕಣ್ಣು, ವಕೀಲ ಚಂದ್ರು ಮತ್ತು ಪೊಲೀಸ್ ಅಧಿಕಾರಿ ಪೆರುಮಾಳ್‌ಸಾಮಿ ಅವರ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ, ಲಾಕಪ್‌ ಡೆತ್‌ನಲ್ಲಿ ಭಾಗಿಯಾಗಿರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ನ ಹೆಸರನ್ನು ಉದ್ದೇಶಪೂರ್ವಕವಾಗಿ ಅಂತೋನಿಸಾಮಿಯ ಬದಲಾಗಿ ಗುರುಮೂರ್ತಿ ಎಂದು ಬದಲಾಯಿಸಲಾಗಿದೆ, ಅವರನ್ನು ಆಗಾಗ್ಗೆ ಗುರು ಕರೆಯಲಾಗುತ್ತದೆ. ಈ ಹೆಸರು ನಮ್ಮ ಸಮುದಾಯದ ಪ್ರಮುಖರೊಬ್ಬರನ್ನು ಪ್ರತಿನಿಧಿಸುತ್ತಿದೆ ಎಂದು ವನ್ನಿಯಾರ್‌ ಸಂಘಮ್‌ ಪ್ರತಿಪಾದಿಸಿದೆ.

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

“ಸಿನಿಮಾ ಮತ್ತು ನಿಜ ಜೀವನದಲ್ಲಿ ಖಳನಾಗಿರುವ ಗುರುಮೂರ್ತಿ ಎಂಬುವವರು ವನ್ನಿಯಾರ್‌ ಸಮುದಾಯಕ್ಕೆ ಸೇರಿದವರು ಎಂದು ವಿವಿಧ ಸಂಕೇತಗಳ ಮೂಲಕ ಸಿನಿಮಾದಲ್ಲಿ ಬಿಂಬಿಸಲು ಹೊರಟಿದ್ದೀರಿ ಎಂದು ನಮ್ಮ ಕಕ್ಷಿದಾರರು ಪ್ರತಿಪಾದಿಸಿದ್ದಾರೆ. ಆದರೆ, ನೈಜವಾಗಿ ಆ ಸಬ್ ಇನ್ಸ್‌ಪೆಕ್ಟರ್ ವನ್ನಿಯಾರ್ ಸಮುದಾಯಕ್ಕೆ ಸೇರಿರಲಿಲ್ಲ” ಎಂದು ನೋಟಿಸ್‌ನಲ್ಲಿ ವಕೀಲರು ಹೇಳಿದ್ದಾರೆ.

‘ಚಲನಚಿತ್ರದಲ್ಲಿ ಆಗಿರುವ ಈ ತಪ್ಪು, ಸಾಂದರ್ಭಿಕ, ಅಜಾಗರೂಕ ಆಥವಾ ಅರಿಯದೇ ಆದದ್ದಲ್ಲ. ಸಮಾಜದಲ್ಲಿ ವನ್ನಿಯಾರ್ ಸಮುದಾಯದ ಜನರ ಬಗೆಗಿನ ಇಮೇಜ್‌ಅನ್ನು ಹಾಳು ಮಾಡುವ ಉದ್ದೇಶದಿಂದ ಮತ್ತು ಇಡೀ ಸಮುದಾಯವನ್ನು ದೂಷಿಸುವ ದೃಷ್ಟಿಯಿಂದ ಮಾತ್ರ ದೃಶ್ಯವನ್ನು ಸೇರಿಸಲಾಗಿದೆ’ ಎಂದು ವಾದಿಸಲಾಗಿದೆ.

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವನ್ನಿಯಾರ್‌ಗಳನ್ನು ಅವಮಾನಿಸಿದ ಆರೋಪ ಮಾಡಿ ಸೂರ್ಯ ಮೇಲೆ ದಾಳಿ ಮಾಡಿದೆ. ಪಿಎಂಕೆ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ.

ಸೂರ್ಯ ಪ್ರತಿಕ್ರಿಯೆ

ಮಾಜಿ ಸಚಿವ ರಾಮದಾಸ್‌ ಅವರಿಗೆ ನಟ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

“ನಿಮ್ಮ ಪತ್ರದಲ್ಲಿ ನೀವು ಉಲ್ಲೇಖಿಸಿರುವಂತೆ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಮಾನಿಸುವ ಯಾವುದೇ ಉದ್ದೇಶವನ್ನು ನನ್ನ ತಂಡವಾಗಲಿ ಅಥವಾ ನಾನಾಗಲೀ ಹೊಂದಿಲ್ಲ. ತಪ್ಪುಗಳನ್ನು ತೋರಿಸಿದ ತಕ್ಷಣ ತಿದ್ದುಪಡಿಗಳನ್ನು ಕೈಗೊಳ್ಳಲಾಗಿದೆ. ಇದು ನಿಮಗೆ ತಿಳಿದಿದೆ ಎಂದು ಭಾವಿಸಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಕೆಲವರು ತೋರಿಸಿದ ಸಣ್ಣ ದೋಷವನ್ನು ಸಹ ನಾವು ಸರಿಪಡಿಸಿದ್ದೇವೆ ಎಂದು ನೀವು ನೆನಪಿಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿರುವ ಸೂರ್ಯ, ಕ್ಯಾಲೆಂಡರ್‌ನಲ್ಲಿ “ಅಗ್ನಿ ಕುಡಮ್” ಚಿಹ್ನೆಯನ್ನು ಬದಲಾಯಿಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾವುದೇ ಸಮುದಾಯವನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ ಎಂಬ ನಿಮ್ಮ ಪತ್ರದಲ್ಲಿನ ನಿಮ್ಮ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಅದೇ ರೀತಿಯಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯ ದಾಳಿಗೊಳಗಾದಂತೆ ಕಾಪಾಡಬೇಕೆಂಬುದನ್ನು ಎಂದು ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.


ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...