Homeಮುಖಪುಟಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ವನ್ನಿಯಾರ್‌ ಸಂಘ ಆರೋಪಿಸಿದೆ. ನಟ ಸೂರ್ಯ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದಾರೆ.

ಇದನ್ನೂ ಓದಿರಿ: ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಿದೆ.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದಾರೆ.

ಪೊಲೀಸ್ ಪಾತ್ರವನ್ನು ವನ್ನಿಯಾರ್ ಸಮುದಾಯದ ಸದಸ್ಯ ಎಂದು ಬಿಂಬಿಸಲು ಇದನ್ನು ಮಾಡಲಾಗಿದೆ ಎಂದು ನೋಟಿಸ್ ಹೇಳಿಕೊಂಡಿದೆ. ಚಲನಚಿತ್ರ ನಿರ್ಮಾಪಕರು, “ವನ್ನಿಯಾರ್ ಸಂಗಮ್‌ನ ಸದಸ್ಯರನ್ನು ದೂಷಿಸುವ ಮತ್ತು ಇಡೀ ವನ್ನಿಯಾರ್ ಸಮುದಾಯದ ಇಮೇಜ್, ಪ್ರತಿಷ್ಠೆಗೆ ಹಾನಿ ಮಾಡುವ ದುರುದ್ದೇಶದಿಂದ ವರ್ತಿಸಿದ್ದಾರೆ” ಎಂದು ಅಧ್ಯಕ್ಷರು ದೂರಿದ್ದಾರೆ.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಬರುವ ರಾಜಾಕಣ್ಣು, ವಕೀಲ ಚಂದ್ರು ಮತ್ತು ಪೊಲೀಸ್ ಅಧಿಕಾರಿ ಪೆರುಮಾಳ್‌ಸಾಮಿ ಅವರ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ, ಲಾಕಪ್‌ ಡೆತ್‌ನಲ್ಲಿ ಭಾಗಿಯಾಗಿರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ನ ಹೆಸರನ್ನು ಉದ್ದೇಶಪೂರ್ವಕವಾಗಿ ಅಂತೋನಿಸಾಮಿಯ ಬದಲಾಗಿ ಗುರುಮೂರ್ತಿ ಎಂದು ಬದಲಾಯಿಸಲಾಗಿದೆ, ಅವರನ್ನು ಆಗಾಗ್ಗೆ ಗುರು ಕರೆಯಲಾಗುತ್ತದೆ. ಈ ಹೆಸರು ನಮ್ಮ ಸಮುದಾಯದ ಪ್ರಮುಖರೊಬ್ಬರನ್ನು ಪ್ರತಿನಿಧಿಸುತ್ತಿದೆ ಎಂದು ವನ್ನಿಯಾರ್‌ ಸಂಘಮ್‌ ಪ್ರತಿಪಾದಿಸಿದೆ.

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

“ಸಿನಿಮಾ ಮತ್ತು ನಿಜ ಜೀವನದಲ್ಲಿ ಖಳನಾಗಿರುವ ಗುರುಮೂರ್ತಿ ಎಂಬುವವರು ವನ್ನಿಯಾರ್‌ ಸಮುದಾಯಕ್ಕೆ ಸೇರಿದವರು ಎಂದು ವಿವಿಧ ಸಂಕೇತಗಳ ಮೂಲಕ ಸಿನಿಮಾದಲ್ಲಿ ಬಿಂಬಿಸಲು ಹೊರಟಿದ್ದೀರಿ ಎಂದು ನಮ್ಮ ಕಕ್ಷಿದಾರರು ಪ್ರತಿಪಾದಿಸಿದ್ದಾರೆ. ಆದರೆ, ನೈಜವಾಗಿ ಆ ಸಬ್ ಇನ್ಸ್‌ಪೆಕ್ಟರ್ ವನ್ನಿಯಾರ್ ಸಮುದಾಯಕ್ಕೆ ಸೇರಿರಲಿಲ್ಲ” ಎಂದು ನೋಟಿಸ್‌ನಲ್ಲಿ ವಕೀಲರು ಹೇಳಿದ್ದಾರೆ.

‘ಚಲನಚಿತ್ರದಲ್ಲಿ ಆಗಿರುವ ಈ ತಪ್ಪು, ಸಾಂದರ್ಭಿಕ, ಅಜಾಗರೂಕ ಆಥವಾ ಅರಿಯದೇ ಆದದ್ದಲ್ಲ. ಸಮಾಜದಲ್ಲಿ ವನ್ನಿಯಾರ್ ಸಮುದಾಯದ ಜನರ ಬಗೆಗಿನ ಇಮೇಜ್‌ಅನ್ನು ಹಾಳು ಮಾಡುವ ಉದ್ದೇಶದಿಂದ ಮತ್ತು ಇಡೀ ಸಮುದಾಯವನ್ನು ದೂಷಿಸುವ ದೃಷ್ಟಿಯಿಂದ ಮಾತ್ರ ದೃಶ್ಯವನ್ನು ಸೇರಿಸಲಾಗಿದೆ’ ಎಂದು ವಾದಿಸಲಾಗಿದೆ.

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವನ್ನಿಯಾರ್‌ಗಳನ್ನು ಅವಮಾನಿಸಿದ ಆರೋಪ ಮಾಡಿ ಸೂರ್ಯ ಮೇಲೆ ದಾಳಿ ಮಾಡಿದೆ. ಪಿಎಂಕೆ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ.

ಸೂರ್ಯ ಪ್ರತಿಕ್ರಿಯೆ

ಮಾಜಿ ಸಚಿವ ರಾಮದಾಸ್‌ ಅವರಿಗೆ ನಟ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

“ನಿಮ್ಮ ಪತ್ರದಲ್ಲಿ ನೀವು ಉಲ್ಲೇಖಿಸಿರುವಂತೆ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಮಾನಿಸುವ ಯಾವುದೇ ಉದ್ದೇಶವನ್ನು ನನ್ನ ತಂಡವಾಗಲಿ ಅಥವಾ ನಾನಾಗಲೀ ಹೊಂದಿಲ್ಲ. ತಪ್ಪುಗಳನ್ನು ತೋರಿಸಿದ ತಕ್ಷಣ ತಿದ್ದುಪಡಿಗಳನ್ನು ಕೈಗೊಳ್ಳಲಾಗಿದೆ. ಇದು ನಿಮಗೆ ತಿಳಿದಿದೆ ಎಂದು ಭಾವಿಸಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಕೆಲವರು ತೋರಿಸಿದ ಸಣ್ಣ ದೋಷವನ್ನು ಸಹ ನಾವು ಸರಿಪಡಿಸಿದ್ದೇವೆ ಎಂದು ನೀವು ನೆನಪಿಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿರುವ ಸೂರ್ಯ, ಕ್ಯಾಲೆಂಡರ್‌ನಲ್ಲಿ “ಅಗ್ನಿ ಕುಡಮ್” ಚಿಹ್ನೆಯನ್ನು ಬದಲಾಯಿಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾವುದೇ ಸಮುದಾಯವನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ ಎಂಬ ನಿಮ್ಮ ಪತ್ರದಲ್ಲಿನ ನಿಮ್ಮ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಅದೇ ರೀತಿಯಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯ ದಾಳಿಗೊಳಗಾದಂತೆ ಕಾಪಾಡಬೇಕೆಂಬುದನ್ನು ಎಂದು ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.


ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...