Homeಮುಖಪುಟಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ವನ್ನಿಯಾರ್‌ ಸಂಘ ಆರೋಪಿಸಿದೆ. ನಟ ಸೂರ್ಯ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದಾರೆ.

ಇದನ್ನೂ ಓದಿರಿ: ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಿದೆ.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದಾರೆ.

ಪೊಲೀಸ್ ಪಾತ್ರವನ್ನು ವನ್ನಿಯಾರ್ ಸಮುದಾಯದ ಸದಸ್ಯ ಎಂದು ಬಿಂಬಿಸಲು ಇದನ್ನು ಮಾಡಲಾಗಿದೆ ಎಂದು ನೋಟಿಸ್ ಹೇಳಿಕೊಂಡಿದೆ. ಚಲನಚಿತ್ರ ನಿರ್ಮಾಪಕರು, “ವನ್ನಿಯಾರ್ ಸಂಗಮ್‌ನ ಸದಸ್ಯರನ್ನು ದೂಷಿಸುವ ಮತ್ತು ಇಡೀ ವನ್ನಿಯಾರ್ ಸಮುದಾಯದ ಇಮೇಜ್, ಪ್ರತಿಷ್ಠೆಗೆ ಹಾನಿ ಮಾಡುವ ದುರುದ್ದೇಶದಿಂದ ವರ್ತಿಸಿದ್ದಾರೆ” ಎಂದು ಅಧ್ಯಕ್ಷರು ದೂರಿದ್ದಾರೆ.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಬರುವ ರಾಜಾಕಣ್ಣು, ವಕೀಲ ಚಂದ್ರು ಮತ್ತು ಪೊಲೀಸ್ ಅಧಿಕಾರಿ ಪೆರುಮಾಳ್‌ಸಾಮಿ ಅವರ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ, ಲಾಕಪ್‌ ಡೆತ್‌ನಲ್ಲಿ ಭಾಗಿಯಾಗಿರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ನ ಹೆಸರನ್ನು ಉದ್ದೇಶಪೂರ್ವಕವಾಗಿ ಅಂತೋನಿಸಾಮಿಯ ಬದಲಾಗಿ ಗುರುಮೂರ್ತಿ ಎಂದು ಬದಲಾಯಿಸಲಾಗಿದೆ, ಅವರನ್ನು ಆಗಾಗ್ಗೆ ಗುರು ಕರೆಯಲಾಗುತ್ತದೆ. ಈ ಹೆಸರು ನಮ್ಮ ಸಮುದಾಯದ ಪ್ರಮುಖರೊಬ್ಬರನ್ನು ಪ್ರತಿನಿಧಿಸುತ್ತಿದೆ ಎಂದು ವನ್ನಿಯಾರ್‌ ಸಂಘಮ್‌ ಪ್ರತಿಪಾದಿಸಿದೆ.

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

“ಸಿನಿಮಾ ಮತ್ತು ನಿಜ ಜೀವನದಲ್ಲಿ ಖಳನಾಗಿರುವ ಗುರುಮೂರ್ತಿ ಎಂಬುವವರು ವನ್ನಿಯಾರ್‌ ಸಮುದಾಯಕ್ಕೆ ಸೇರಿದವರು ಎಂದು ವಿವಿಧ ಸಂಕೇತಗಳ ಮೂಲಕ ಸಿನಿಮಾದಲ್ಲಿ ಬಿಂಬಿಸಲು ಹೊರಟಿದ್ದೀರಿ ಎಂದು ನಮ್ಮ ಕಕ್ಷಿದಾರರು ಪ್ರತಿಪಾದಿಸಿದ್ದಾರೆ. ಆದರೆ, ನೈಜವಾಗಿ ಆ ಸಬ್ ಇನ್ಸ್‌ಪೆಕ್ಟರ್ ವನ್ನಿಯಾರ್ ಸಮುದಾಯಕ್ಕೆ ಸೇರಿರಲಿಲ್ಲ” ಎಂದು ನೋಟಿಸ್‌ನಲ್ಲಿ ವಕೀಲರು ಹೇಳಿದ್ದಾರೆ.

‘ಚಲನಚಿತ್ರದಲ್ಲಿ ಆಗಿರುವ ಈ ತಪ್ಪು, ಸಾಂದರ್ಭಿಕ, ಅಜಾಗರೂಕ ಆಥವಾ ಅರಿಯದೇ ಆದದ್ದಲ್ಲ. ಸಮಾಜದಲ್ಲಿ ವನ್ನಿಯಾರ್ ಸಮುದಾಯದ ಜನರ ಬಗೆಗಿನ ಇಮೇಜ್‌ಅನ್ನು ಹಾಳು ಮಾಡುವ ಉದ್ದೇಶದಿಂದ ಮತ್ತು ಇಡೀ ಸಮುದಾಯವನ್ನು ದೂಷಿಸುವ ದೃಷ್ಟಿಯಿಂದ ಮಾತ್ರ ದೃಶ್ಯವನ್ನು ಸೇರಿಸಲಾಗಿದೆ’ ಎಂದು ವಾದಿಸಲಾಗಿದೆ.

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವನ್ನಿಯಾರ್‌ಗಳನ್ನು ಅವಮಾನಿಸಿದ ಆರೋಪ ಮಾಡಿ ಸೂರ್ಯ ಮೇಲೆ ದಾಳಿ ಮಾಡಿದೆ. ಪಿಎಂಕೆ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ.

ಸೂರ್ಯ ಪ್ರತಿಕ್ರಿಯೆ

ಮಾಜಿ ಸಚಿವ ರಾಮದಾಸ್‌ ಅವರಿಗೆ ನಟ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

“ನಿಮ್ಮ ಪತ್ರದಲ್ಲಿ ನೀವು ಉಲ್ಲೇಖಿಸಿರುವಂತೆ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಮಾನಿಸುವ ಯಾವುದೇ ಉದ್ದೇಶವನ್ನು ನನ್ನ ತಂಡವಾಗಲಿ ಅಥವಾ ನಾನಾಗಲೀ ಹೊಂದಿಲ್ಲ. ತಪ್ಪುಗಳನ್ನು ತೋರಿಸಿದ ತಕ್ಷಣ ತಿದ್ದುಪಡಿಗಳನ್ನು ಕೈಗೊಳ್ಳಲಾಗಿದೆ. ಇದು ನಿಮಗೆ ತಿಳಿದಿದೆ ಎಂದು ಭಾವಿಸಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಕೆಲವರು ತೋರಿಸಿದ ಸಣ್ಣ ದೋಷವನ್ನು ಸಹ ನಾವು ಸರಿಪಡಿಸಿದ್ದೇವೆ ಎಂದು ನೀವು ನೆನಪಿಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿರುವ ಸೂರ್ಯ, ಕ್ಯಾಲೆಂಡರ್‌ನಲ್ಲಿ “ಅಗ್ನಿ ಕುಡಮ್” ಚಿಹ್ನೆಯನ್ನು ಬದಲಾಯಿಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾವುದೇ ಸಮುದಾಯವನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ ಎಂಬ ನಿಮ್ಮ ಪತ್ರದಲ್ಲಿನ ನಿಮ್ಮ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಅದೇ ರೀತಿಯಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯ ದಾಳಿಗೊಳಗಾದಂತೆ ಕಾಪಾಡಬೇಕೆಂಬುದನ್ನು ಎಂದು ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.


ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...