Homeಮುಖಪುಟಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ವನ್ನಿಯಾರ್‌ ಸಂಘ ಆರೋಪಿಸಿದೆ. ನಟ ಸೂರ್ಯ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದಾರೆ.

ಇದನ್ನೂ ಓದಿರಿ: ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಿದೆ.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದಾರೆ.

ಪೊಲೀಸ್ ಪಾತ್ರವನ್ನು ವನ್ನಿಯಾರ್ ಸಮುದಾಯದ ಸದಸ್ಯ ಎಂದು ಬಿಂಬಿಸಲು ಇದನ್ನು ಮಾಡಲಾಗಿದೆ ಎಂದು ನೋಟಿಸ್ ಹೇಳಿಕೊಂಡಿದೆ. ಚಲನಚಿತ್ರ ನಿರ್ಮಾಪಕರು, “ವನ್ನಿಯಾರ್ ಸಂಗಮ್‌ನ ಸದಸ್ಯರನ್ನು ದೂಷಿಸುವ ಮತ್ತು ಇಡೀ ವನ್ನಿಯಾರ್ ಸಮುದಾಯದ ಇಮೇಜ್, ಪ್ರತಿಷ್ಠೆಗೆ ಹಾನಿ ಮಾಡುವ ದುರುದ್ದೇಶದಿಂದ ವರ್ತಿಸಿದ್ದಾರೆ” ಎಂದು ಅಧ್ಯಕ್ಷರು ದೂರಿದ್ದಾರೆ.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಬರುವ ರಾಜಾಕಣ್ಣು, ವಕೀಲ ಚಂದ್ರು ಮತ್ತು ಪೊಲೀಸ್ ಅಧಿಕಾರಿ ಪೆರುಮಾಳ್‌ಸಾಮಿ ಅವರ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ, ಲಾಕಪ್‌ ಡೆತ್‌ನಲ್ಲಿ ಭಾಗಿಯಾಗಿರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ನ ಹೆಸರನ್ನು ಉದ್ದೇಶಪೂರ್ವಕವಾಗಿ ಅಂತೋನಿಸಾಮಿಯ ಬದಲಾಗಿ ಗುರುಮೂರ್ತಿ ಎಂದು ಬದಲಾಯಿಸಲಾಗಿದೆ, ಅವರನ್ನು ಆಗಾಗ್ಗೆ ಗುರು ಕರೆಯಲಾಗುತ್ತದೆ. ಈ ಹೆಸರು ನಮ್ಮ ಸಮುದಾಯದ ಪ್ರಮುಖರೊಬ್ಬರನ್ನು ಪ್ರತಿನಿಧಿಸುತ್ತಿದೆ ಎಂದು ವನ್ನಿಯಾರ್‌ ಸಂಘಮ್‌ ಪ್ರತಿಪಾದಿಸಿದೆ.

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

“ಸಿನಿಮಾ ಮತ್ತು ನಿಜ ಜೀವನದಲ್ಲಿ ಖಳನಾಗಿರುವ ಗುರುಮೂರ್ತಿ ಎಂಬುವವರು ವನ್ನಿಯಾರ್‌ ಸಮುದಾಯಕ್ಕೆ ಸೇರಿದವರು ಎಂದು ವಿವಿಧ ಸಂಕೇತಗಳ ಮೂಲಕ ಸಿನಿಮಾದಲ್ಲಿ ಬಿಂಬಿಸಲು ಹೊರಟಿದ್ದೀರಿ ಎಂದು ನಮ್ಮ ಕಕ್ಷಿದಾರರು ಪ್ರತಿಪಾದಿಸಿದ್ದಾರೆ. ಆದರೆ, ನೈಜವಾಗಿ ಆ ಸಬ್ ಇನ್ಸ್‌ಪೆಕ್ಟರ್ ವನ್ನಿಯಾರ್ ಸಮುದಾಯಕ್ಕೆ ಸೇರಿರಲಿಲ್ಲ” ಎಂದು ನೋಟಿಸ್‌ನಲ್ಲಿ ವಕೀಲರು ಹೇಳಿದ್ದಾರೆ.

‘ಚಲನಚಿತ್ರದಲ್ಲಿ ಆಗಿರುವ ಈ ತಪ್ಪು, ಸಾಂದರ್ಭಿಕ, ಅಜಾಗರೂಕ ಆಥವಾ ಅರಿಯದೇ ಆದದ್ದಲ್ಲ. ಸಮಾಜದಲ್ಲಿ ವನ್ನಿಯಾರ್ ಸಮುದಾಯದ ಜನರ ಬಗೆಗಿನ ಇಮೇಜ್‌ಅನ್ನು ಹಾಳು ಮಾಡುವ ಉದ್ದೇಶದಿಂದ ಮತ್ತು ಇಡೀ ಸಮುದಾಯವನ್ನು ದೂಷಿಸುವ ದೃಷ್ಟಿಯಿಂದ ಮಾತ್ರ ದೃಶ್ಯವನ್ನು ಸೇರಿಸಲಾಗಿದೆ’ ಎಂದು ವಾದಿಸಲಾಗಿದೆ.

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವನ್ನಿಯಾರ್‌ಗಳನ್ನು ಅವಮಾನಿಸಿದ ಆರೋಪ ಮಾಡಿ ಸೂರ್ಯ ಮೇಲೆ ದಾಳಿ ಮಾಡಿದೆ. ಪಿಎಂಕೆ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ.

ಸೂರ್ಯ ಪ್ರತಿಕ್ರಿಯೆ

ಮಾಜಿ ಸಚಿವ ರಾಮದಾಸ್‌ ಅವರಿಗೆ ನಟ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

“ನಿಮ್ಮ ಪತ್ರದಲ್ಲಿ ನೀವು ಉಲ್ಲೇಖಿಸಿರುವಂತೆ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಮಾನಿಸುವ ಯಾವುದೇ ಉದ್ದೇಶವನ್ನು ನನ್ನ ತಂಡವಾಗಲಿ ಅಥವಾ ನಾನಾಗಲೀ ಹೊಂದಿಲ್ಲ. ತಪ್ಪುಗಳನ್ನು ತೋರಿಸಿದ ತಕ್ಷಣ ತಿದ್ದುಪಡಿಗಳನ್ನು ಕೈಗೊಳ್ಳಲಾಗಿದೆ. ಇದು ನಿಮಗೆ ತಿಳಿದಿದೆ ಎಂದು ಭಾವಿಸಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಕೆಲವರು ತೋರಿಸಿದ ಸಣ್ಣ ದೋಷವನ್ನು ಸಹ ನಾವು ಸರಿಪಡಿಸಿದ್ದೇವೆ ಎಂದು ನೀವು ನೆನಪಿಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿರುವ ಸೂರ್ಯ, ಕ್ಯಾಲೆಂಡರ್‌ನಲ್ಲಿ “ಅಗ್ನಿ ಕುಡಮ್” ಚಿಹ್ನೆಯನ್ನು ಬದಲಾಯಿಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾವುದೇ ಸಮುದಾಯವನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ ಎಂಬ ನಿಮ್ಮ ಪತ್ರದಲ್ಲಿನ ನಿಮ್ಮ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಅದೇ ರೀತಿಯಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯ ದಾಳಿಗೊಳಗಾದಂತೆ ಕಾಪಾಡಬೇಕೆಂಬುದನ್ನು ಎಂದು ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.


ಇದನ್ನೂ ಓದಿರಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...