Homeಮುಖಪುಟಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್, ನಿರ್ಮಾಪಕಿ ಜ್ಯೋತಿಕಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ವನ್ನಿಯಾರ್‌ ಸಮುದಾಯಕ್ಕೆ ಜೈ ಭೀಮ್‌ ಸಿನಿಮಾದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪ ಬಂದಿತ್ತು. ಅದರ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ. ರುದ್ರ ವನ್ನಿಯಾರ್ ಸೇನೆ ಎಂಬ ವನ್ನಿಯಾರ್ ಗುಂಪು ಅರ್ಜಿ ಸಲ್ಲಿಸಿದ್ದು, ಸಿನಿಮಾದಲ್ಲಿ ಸಮುದಾಯದ ಜನರನ್ನು ಅತ್ಯಂತ ಕಳಪೆಯಾಗಿ ತೋರಿಸಲಾಗಿದೆ ಎಂದು ಆಕ್ಷೇಪ ಎತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರು ನವೆಂಬರ್ 2021ರಲ್ಲಿ ಚೆನ್ನೈ ಸೈದಾಪೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದು, ಪ್ರಕರಣ ದಾಖಲಿಸುವಂತೆ ಕೋರಲಾಗಿತ್ತು. “ಸಿನಿಮಾದಲ್ಲಿನ ಹಲವಾರು ದೃಶ್ಯಗಳು, ನೆಗೆಟಿವ್‌ ಪಾತ್ರಗಳ ಹೆಸರುಗಳು ನಮ್ಮ ಸಮುದಾಯವನ್ನು ಉಲ್ಲೇಖಿಸುತ್ತವೆ. ಈ ಚಲನಚಿತ್ರದಲ್ಲಿ ‘ವನ್ನಿಯಾರ್ ಫೋಬಿಯಾ’ವಿದೆ. ಸಮುದಾಯಗಳ ನಡುವೆ ಕೋಮುಗಲಭೆಯನ್ನು ಪ್ರಚೋದಿಸುವ ಉದ್ದೇಶವಿದೆ” ಎಂದು ದೂರಿದ್ದಾರೆ.

ಅರ್ಜಿಯು ಏಪ್ರಿಲ್ 29, 2022 ರಂದು ವಿಚಾರಣೆಗೆ ಬಂದಿತು. ನಟ ಸೂರ್ಯ, ಜ್ಯೋತಿಕಾ ಹಾಗೂ ಜ್ಞಾನವೇಲ್ ಯಾರೊಬ್ಬರೂ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ. ‘ವನ್ನಿಯಾರ್ ಸಮುದಾಯವನ್ನು ಕೆಟ್ಟದಾಗಿ ತೋರಿಸುವುದಕ್ಕಾಗಿಯೇ ಸಿನಿಮಾದ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ’ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿದಾರರ ವಾದವನ್ನು ಒಪ್ಪಿಕೊಂಡ ನ್ಯಾಯಾಲಯ, ಆರೋಪಿಗಳೆಂದು ಹೆಸರಿಸಲಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚೆನ್ನೈ ಪೊಲೀಸರಿಗೆ ಸೂಚಿಸಿದೆ. ದೂರಿನಲ್ಲಿ “ಕೆಲವು ಗುರುತಿಸಬಹುದಾದ ಅಪರಾಧವನ್ನು ಬಹಿರಂಗಪಡಿಸಲಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ. ಕಾನೂನಿನ ಪ್ರಕಾರ ಎಫ್‌ಐಆರ್ ದಾಖಲಿಸಿ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯವು ವೇಲಾಚೇರಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ದೂರನ್ನು ರವಾನಿಸಲಾಗಿದೆ. ಮೇ 20ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಕಳೆದ ವರ್ಷ ಜೈ ಭೀಮ್ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅನ್ಬುಮಣಿ ರಾಮದಾಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕೂಡ ಕಳುಹಿಸಿದ್ದರು.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿರಿ: ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಲಾಗಿತ್ತು.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದರು.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...