Homeಮುಖಪುಟಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್, ನಿರ್ಮಾಪಕಿ ಜ್ಯೋತಿಕಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ವನ್ನಿಯಾರ್‌ ಸಮುದಾಯಕ್ಕೆ ಜೈ ಭೀಮ್‌ ಸಿನಿಮಾದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪ ಬಂದಿತ್ತು. ಅದರ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ. ರುದ್ರ ವನ್ನಿಯಾರ್ ಸೇನೆ ಎಂಬ ವನ್ನಿಯಾರ್ ಗುಂಪು ಅರ್ಜಿ ಸಲ್ಲಿಸಿದ್ದು, ಸಿನಿಮಾದಲ್ಲಿ ಸಮುದಾಯದ ಜನರನ್ನು ಅತ್ಯಂತ ಕಳಪೆಯಾಗಿ ತೋರಿಸಲಾಗಿದೆ ಎಂದು ಆಕ್ಷೇಪ ಎತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರು ನವೆಂಬರ್ 2021ರಲ್ಲಿ ಚೆನ್ನೈ ಸೈದಾಪೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದು, ಪ್ರಕರಣ ದಾಖಲಿಸುವಂತೆ ಕೋರಲಾಗಿತ್ತು. “ಸಿನಿಮಾದಲ್ಲಿನ ಹಲವಾರು ದೃಶ್ಯಗಳು, ನೆಗೆಟಿವ್‌ ಪಾತ್ರಗಳ ಹೆಸರುಗಳು ನಮ್ಮ ಸಮುದಾಯವನ್ನು ಉಲ್ಲೇಖಿಸುತ್ತವೆ. ಈ ಚಲನಚಿತ್ರದಲ್ಲಿ ‘ವನ್ನಿಯಾರ್ ಫೋಬಿಯಾ’ವಿದೆ. ಸಮುದಾಯಗಳ ನಡುವೆ ಕೋಮುಗಲಭೆಯನ್ನು ಪ್ರಚೋದಿಸುವ ಉದ್ದೇಶವಿದೆ” ಎಂದು ದೂರಿದ್ದಾರೆ.

ಅರ್ಜಿಯು ಏಪ್ರಿಲ್ 29, 2022 ರಂದು ವಿಚಾರಣೆಗೆ ಬಂದಿತು. ನಟ ಸೂರ್ಯ, ಜ್ಯೋತಿಕಾ ಹಾಗೂ ಜ್ಞಾನವೇಲ್ ಯಾರೊಬ್ಬರೂ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ. ‘ವನ್ನಿಯಾರ್ ಸಮುದಾಯವನ್ನು ಕೆಟ್ಟದಾಗಿ ತೋರಿಸುವುದಕ್ಕಾಗಿಯೇ ಸಿನಿಮಾದ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ’ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿದಾರರ ವಾದವನ್ನು ಒಪ್ಪಿಕೊಂಡ ನ್ಯಾಯಾಲಯ, ಆರೋಪಿಗಳೆಂದು ಹೆಸರಿಸಲಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚೆನ್ನೈ ಪೊಲೀಸರಿಗೆ ಸೂಚಿಸಿದೆ. ದೂರಿನಲ್ಲಿ “ಕೆಲವು ಗುರುತಿಸಬಹುದಾದ ಅಪರಾಧವನ್ನು ಬಹಿರಂಗಪಡಿಸಲಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ. ಕಾನೂನಿನ ಪ್ರಕಾರ ಎಫ್‌ಐಆರ್ ದಾಖಲಿಸಿ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯವು ವೇಲಾಚೇರಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ದೂರನ್ನು ರವಾನಿಸಲಾಗಿದೆ. ಮೇ 20ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಕಳೆದ ವರ್ಷ ಜೈ ಭೀಮ್ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅನ್ಬುಮಣಿ ರಾಮದಾಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕೂಡ ಕಳುಹಿಸಿದ್ದರು.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿರಿ: ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಲಾಗಿತ್ತು.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದರು.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...