Homeಮುಖಪುಟಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್, ನಿರ್ಮಾಪಕಿ ಜ್ಯೋತಿಕಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ವನ್ನಿಯಾರ್‌ ಸಮುದಾಯಕ್ಕೆ ಜೈ ಭೀಮ್‌ ಸಿನಿಮಾದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪ ಬಂದಿತ್ತು. ಅದರ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ. ರುದ್ರ ವನ್ನಿಯಾರ್ ಸೇನೆ ಎಂಬ ವನ್ನಿಯಾರ್ ಗುಂಪು ಅರ್ಜಿ ಸಲ್ಲಿಸಿದ್ದು, ಸಿನಿಮಾದಲ್ಲಿ ಸಮುದಾಯದ ಜನರನ್ನು ಅತ್ಯಂತ ಕಳಪೆಯಾಗಿ ತೋರಿಸಲಾಗಿದೆ ಎಂದು ಆಕ್ಷೇಪ ಎತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರು ನವೆಂಬರ್ 2021ರಲ್ಲಿ ಚೆನ್ನೈ ಸೈದಾಪೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದು, ಪ್ರಕರಣ ದಾಖಲಿಸುವಂತೆ ಕೋರಲಾಗಿತ್ತು. “ಸಿನಿಮಾದಲ್ಲಿನ ಹಲವಾರು ದೃಶ್ಯಗಳು, ನೆಗೆಟಿವ್‌ ಪಾತ್ರಗಳ ಹೆಸರುಗಳು ನಮ್ಮ ಸಮುದಾಯವನ್ನು ಉಲ್ಲೇಖಿಸುತ್ತವೆ. ಈ ಚಲನಚಿತ್ರದಲ್ಲಿ ‘ವನ್ನಿಯಾರ್ ಫೋಬಿಯಾ’ವಿದೆ. ಸಮುದಾಯಗಳ ನಡುವೆ ಕೋಮುಗಲಭೆಯನ್ನು ಪ್ರಚೋದಿಸುವ ಉದ್ದೇಶವಿದೆ” ಎಂದು ದೂರಿದ್ದಾರೆ.

ಅರ್ಜಿಯು ಏಪ್ರಿಲ್ 29, 2022 ರಂದು ವಿಚಾರಣೆಗೆ ಬಂದಿತು. ನಟ ಸೂರ್ಯ, ಜ್ಯೋತಿಕಾ ಹಾಗೂ ಜ್ಞಾನವೇಲ್ ಯಾರೊಬ್ಬರೂ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ. ‘ವನ್ನಿಯಾರ್ ಸಮುದಾಯವನ್ನು ಕೆಟ್ಟದಾಗಿ ತೋರಿಸುವುದಕ್ಕಾಗಿಯೇ ಸಿನಿಮಾದ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ’ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿದಾರರ ವಾದವನ್ನು ಒಪ್ಪಿಕೊಂಡ ನ್ಯಾಯಾಲಯ, ಆರೋಪಿಗಳೆಂದು ಹೆಸರಿಸಲಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚೆನ್ನೈ ಪೊಲೀಸರಿಗೆ ಸೂಚಿಸಿದೆ. ದೂರಿನಲ್ಲಿ “ಕೆಲವು ಗುರುತಿಸಬಹುದಾದ ಅಪರಾಧವನ್ನು ಬಹಿರಂಗಪಡಿಸಲಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ. ಕಾನೂನಿನ ಪ್ರಕಾರ ಎಫ್‌ಐಆರ್ ದಾಖಲಿಸಿ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯವು ವೇಲಾಚೇರಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ದೂರನ್ನು ರವಾನಿಸಲಾಗಿದೆ. ಮೇ 20ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಕಳೆದ ವರ್ಷ ಜೈ ಭೀಮ್ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅನ್ಬುಮಣಿ ರಾಮದಾಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕೂಡ ಕಳುಹಿಸಿದ್ದರು.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿರಿ: ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಲಾಗಿತ್ತು.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದರು.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...