Homeಮುಖಪುಟಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್, ನಿರ್ಮಾಪಕಿ ಜ್ಯೋತಿಕಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ವನ್ನಿಯಾರ್‌ ಸಮುದಾಯಕ್ಕೆ ಜೈ ಭೀಮ್‌ ಸಿನಿಮಾದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪ ಬಂದಿತ್ತು. ಅದರ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ. ರುದ್ರ ವನ್ನಿಯಾರ್ ಸೇನೆ ಎಂಬ ವನ್ನಿಯಾರ್ ಗುಂಪು ಅರ್ಜಿ ಸಲ್ಲಿಸಿದ್ದು, ಸಿನಿಮಾದಲ್ಲಿ ಸಮುದಾಯದ ಜನರನ್ನು ಅತ್ಯಂತ ಕಳಪೆಯಾಗಿ ತೋರಿಸಲಾಗಿದೆ ಎಂದು ಆಕ್ಷೇಪ ಎತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರು ನವೆಂಬರ್ 2021ರಲ್ಲಿ ಚೆನ್ನೈ ಸೈದಾಪೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದು, ಪ್ರಕರಣ ದಾಖಲಿಸುವಂತೆ ಕೋರಲಾಗಿತ್ತು. “ಸಿನಿಮಾದಲ್ಲಿನ ಹಲವಾರು ದೃಶ್ಯಗಳು, ನೆಗೆಟಿವ್‌ ಪಾತ್ರಗಳ ಹೆಸರುಗಳು ನಮ್ಮ ಸಮುದಾಯವನ್ನು ಉಲ್ಲೇಖಿಸುತ್ತವೆ. ಈ ಚಲನಚಿತ್ರದಲ್ಲಿ ‘ವನ್ನಿಯಾರ್ ಫೋಬಿಯಾ’ವಿದೆ. ಸಮುದಾಯಗಳ ನಡುವೆ ಕೋಮುಗಲಭೆಯನ್ನು ಪ್ರಚೋದಿಸುವ ಉದ್ದೇಶವಿದೆ” ಎಂದು ದೂರಿದ್ದಾರೆ.

ಅರ್ಜಿಯು ಏಪ್ರಿಲ್ 29, 2022 ರಂದು ವಿಚಾರಣೆಗೆ ಬಂದಿತು. ನಟ ಸೂರ್ಯ, ಜ್ಯೋತಿಕಾ ಹಾಗೂ ಜ್ಞಾನವೇಲ್ ಯಾರೊಬ್ಬರೂ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ. ‘ವನ್ನಿಯಾರ್ ಸಮುದಾಯವನ್ನು ಕೆಟ್ಟದಾಗಿ ತೋರಿಸುವುದಕ್ಕಾಗಿಯೇ ಸಿನಿಮಾದ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ’ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿದಾರರ ವಾದವನ್ನು ಒಪ್ಪಿಕೊಂಡ ನ್ಯಾಯಾಲಯ, ಆರೋಪಿಗಳೆಂದು ಹೆಸರಿಸಲಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚೆನ್ನೈ ಪೊಲೀಸರಿಗೆ ಸೂಚಿಸಿದೆ. ದೂರಿನಲ್ಲಿ “ಕೆಲವು ಗುರುತಿಸಬಹುದಾದ ಅಪರಾಧವನ್ನು ಬಹಿರಂಗಪಡಿಸಲಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ. ಕಾನೂನಿನ ಪ್ರಕಾರ ಎಫ್‌ಐಆರ್ ದಾಖಲಿಸಿ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯವು ವೇಲಾಚೇರಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ದೂರನ್ನು ರವಾನಿಸಲಾಗಿದೆ. ಮೇ 20ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಕಳೆದ ವರ್ಷ ಜೈ ಭೀಮ್ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅನ್ಬುಮಣಿ ರಾಮದಾಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕೂಡ ಕಳುಹಿಸಿದ್ದರು.

ಜೈ ಭೀಮ್‌ ಸಿನಿಮಾ ನಿಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಇರುಳಿಗ ಸಮುದಾಯದ ವ್ಯಕ್ತಿ ರಾಜಾಕಣ್ಣು ಪೊಲೀಸ್‌ ಬಂಧನದಲ್ಲಿದ್ದಾಗ ಕೊಲೆಯಾಗಿದ್ದರ ಕುರಿತು ಚಿತ್ರಿಸಲಾಗಿದ್ದು, ವಿಶ್ಯಾದ್ಯಾಂತ ಅಪಾರ ಜನಮನ್ನಣೆಗೆ ‘ಜೈಭೀಮ್‌’ ಪಾತ್ರವಾಗಿದೆ. ಜಸ್ಟೀಸ್‌ ಕೆ.ಚಂದ್ರು ಅವರು 1993ರಲ್ಲಿ ವಕೀಲರಾಗಿದ್ದಾಗ ಹೋರಾಡಿದ ಕಥನವನ್ನು ಈ ಸಿನಿಮಾ ತೆರೆದಿಟ್ಟಿದೆ.

ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿರಿ: ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

“ನೈಜ ಘಟನೆಯಲ್ಲಿನ ನಿಜವಾದ ಹೆಸರುಗಳನ್ನೇ ಉಳಿಸಿಕೊಂಡಿರುವುದಾಗಿ ಹೇಳಲಾಗುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಸಬ್ ಇನ್‌ಸ್ಪೆಕ್ಟರ್ ಹೆಸರನ್ನು ಬದಲಾಯಿಸಲಾಗಿದೆ. ನೈಜ ಕಥೆಯಲ್ಲಿ ರಾಜಾಕಣ್ಣು ಸಾವಿಗೆ ಕಾರಣವಾಗುವ ಸಬ್-ಇನ್‌ಸ್ಪೆಕ್ಟರ್ ಹೆಸರು ಆಂಥೋನಿಸಾಮಿ ಎಂಬುದಾಗಿದೆ. ಆದರೆ ಇಲ್ಲಿ ತಿರುಚಲಾಗಿದೆ” ಎಂದು ನೋಟೀಸ್ ಉಲ್ಲೇಖಿಸಲಾಗಿತ್ತು.

ಚಿತ್ರ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಜಾತಿಯನ್ನು ಉಲ್ಲೇಖಿಸಲು ಯತ್ನಿಸಿದ್ದಾರೆ. ವನ್ನಿಯಾರ್‌ ಸಮುದಾಯವನ್ನು ಪ್ರತಿನಿಧಿಸುವ “ಅಗ್ನಿ ಕುಡಮ್” ಚಿಹ್ನೆಯನ್ನು ಕ್ಯಾಲೆಂಡರ್‌ನೊಂದಿಗೆ ತೋರಿಸಲಾಗಿದೆ ಎಂದು ಸಂಗಮ್ ಅಧ್ಯಕ್ಷರು ಆರೋಪಿಸಿದ್ದರು.

ನಟ ಸೂರ್ಯ ಅವರ ಪತ್ನಿ ನಟಿ ಜ್ಯೋತಿಕಾ ಅವರು ಚಲನಚಿತ್ರದ ನಿರ್ಮಾಪಕರಾಗಿದ್ದು, 2D ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯನ್ನು ಸೂರ್ಯ ಮತ್ತು ಜ್ಯೋತಿಕಾ ನಡೆಸುತ್ತಿದ್ದಾರೆ. ಜೈ ಭೀಮ್‌ ಸಿನಿಮಾವು ಅಮೇಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....