Homeಮುಖಪುಟ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

- Advertisement -
- Advertisement -

ನವೆಂಬರ್‌ 2ರಂದು ಬಹು ನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ. ನಿರೀಕ್ಷೆಯನ್ನು ಹುಸಿಗೊಳಿಸದೆ ಸಮತಾ ಸಮಾಜದ ನಿರ್ಮಾಣಕ್ಕೆ ಮಿಡಿದಿದೆ.

ಜ್ಯೋತಿಕಾ-ಸೂರಿಯ ಅವರ 2ಡಿ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್‌ನಲ್ಲಿ ತಯಾರಾದ, ನಿಜ ಘಟನೆಯನ್ನು ಆಧರಿಸಿದ ತಮಿಳು ಸಿನಿಮಾ ‘ಜೈ ಭೀಮ್‌’, ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗೂ ಡಬ್‌ ಆಗಿರುವುದರಿಂದ ಅದ್ಭುತ ಕಥನವೊಂದು ಬಹುಭಾಷಾ ಸಮುದಾಯವನ್ನು ಪರಿಣಾಮಕಾರಿಯಾಗಿ ತಲುಪಲು ಕಾರಣವಾಗಿದೆ.

ಟಿ.ಜೆ.ಜ್ಞಾನವೇಲ್‌ ನಿರ್ದೇಶನಕ್ಕೆ ಸಂವೇದನಾಶೀಲ ಮನಸ್ಸುಗಳು ಮಿಡಿದಿವೆ. ಸೂರಿಯ, ಪ್ರಕಾಶ್‌ ರಾಜ್‌, ಕೆ.ಮಣಿಕಂದನ್‌, ಲಿಜೊಮೊಲ್‌ ಜೋಸ್‌‌, ರಾವ್‌ ರಮೇಶ್‌, ರಜಿಶಾ ವಿಜಯನ್‌ ಮೊದಲಾದವರು ನಟಿಸಿರುವ ಜೈ ಭೀಮ್‌, ನ್ಯಾಯಾಂಗದ ಸುತ್ತ ನಡೆಯುವ ಕಥೆಯನ್ನು ಒಳಗೊಂಡಿದೆ. ಅಧಿಕಾರಶಾಹಿ ಕ್ರೌರ್ಯವನ್ನು ಬಿಚ್ಚಿಡುತ್ತಾ ನ್ಯಾಯಾಂಗದ ಮೇಲಿನ ಭರವಸೆಯನ್ನು ಎತ್ತಿ ಹಿಡಿಯುತ್ತದೆ. ಸಿನಿಮಾ ನೋಡಿದವರು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿನಂದನೆಯ ಮಹಾಪೂರವನ್ನೇ ಹರಿಸಿದ್ದಾರೆ. ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಮೂಡಿಬರಬೇಕೆಂದು ಪ್ರೋತ್ಸಾಹಿಸಿದ್ದಾರೆ.

ಅಲಕ್ಷಿತ ಸಮುದಾಯಗಳ ಕುರಿತು ತಮಿಳು ಚಿತ್ರದಲ್ಲಿ ಮೂಡಿಬರುತ್ತಿರುವ ಸಾಲು ಸಾಲು ಸಿನಿಮಾಗಳ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಪ.ರಂಜಿತ್‌ ಅವರ ‘ಕಾಲಾ’, ‘ಮದ್ರಾಸ್‌’, ‘ಸರಪಟ್ಟ ಪರಂಬರೈ’, ವೆಟ್ಟಿಮಾರನ್‌ ಅವರ ‘ಅಸುರನ್‌’, ‘ವಿಸಾರಣೈ’, ಮಾರಿ ಸೆಲ್ವರಾಜ್‌ ಅವರ ‘ಪೆರಿಯೇರುಮ್‌ ಪೆರುಮಾಳ್‌’, ‘ಕರ್ಣ‌ನ್‌’ ಸಾಲಿಗೆ ಟಿ.ಜೆ.ಜ್ಞಾನವೇಲ್‌‌ ಅವರ ‘ಜೈಭೀಮ್‌’ ಸೇರಿದೆ ಎಂದು ಕನ್ನಡದ ಮನಸ್ಸುಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದ್ದು, ಸಾಂಕೇತಿಕವಾಗಿ ಕೆಲವು ಲೇಖಕರ ಟಿಪ್ಪಣಿಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ಜಗದೀಶ್‌ ಕೊಪ್ಪ ಅವರ ಅಭಿಪ್ರಾಯ

“…. ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ತಮಿಳು ಚಿತ್ರ ಜೈ ಭೀಮ್ ನಾಯಕ ನಟ ಸೂರ್ಯನ ಪ್ರತಿಭೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ತಮಿಳು ಚಿತ್ರರಂಗದಲ್ಲಿ ದುಬಾರಿ ಎನಿಸಬಹುದಾದ ಸಂಭಾವನೆ ಪಡೆಯುವ ನಟರಲ್ಲಿ ಧನುಷ್ ಮತ್ತು ಸೂರ್ಯ ಮುಖ್ಯರಾದವರು. ಆದರೆ, ಚಿತ್ರಕಥೆಗೆ ಸರಿ ಸಮಾನರಾಗಿ ತಮ್ಮ ಸ್ಟಾರ್ ಗಿರಿಯ ಇಮೇಜ್ ಅನ್ನು ಪಕ್ಕಕ್ಕೆ ಇಟ್ಟು ಅಭಿನಯಿಸುವುದರಲ್ಲಿ ಈ ಇಬ್ಬರು ನಾಯಕರು ಇಡೀ ದಕ್ಷಿಣ ಭಾರತಕ್ಕೆ ಮಾದರಿಯಾಗಿದ್ದಾರೆ. ಇತ್ತೀಚೆಗೆ ವಿಜಯ್ ಸೇತುಪತಿ ಹೆಸರನ್ನು ಸಹ ಸೇರಿಸಬಹುದು.”

ನಿನ್ನೆ ಬೆಳಿಗ್ಗೆ ಚೆನ್ನೈ ನಗರದಲ್ಲಿ ನಡೆದ ಪ್ರೀಮಿಯರ್ ಷೋ ನಂತರ ಸಂಜೆ ವೇಳೆಗೆ ದಿ ಹಿಂದೂ, ಟೈಮ್ಸ್ ಆಫ್ ಇಂಡಿಯಾ, ಇಂಡಿಯನ್ ಎಕ್ಸ್‌ಪ್ರೆಸ್‌ ಹಾಗೂ ಎನ್.ಡಿ.ಟಿ.ವಿ. ಮಾಧ್ಯಮಗಳ ಜಾಲತಾಣಗಳಲ್ಲಿ ಹರಿದು ಬಂದ ವಿಮರ್ಶೆ ನೋಡಿ ಆಶ್ಚರ್ಯಪಟ್ಟೆ. ಇತ್ತೀಚಿನ ದಿನಗಳಲ್ಲಿ ಬಂದ ಶ್ರೇಷ್ಠ ಮಟ್ಟದ ವಿಮರ್ಶೆ ಅದಾಗಿತ್ತು. ಕಳೆದ ವರ್ಷ ನಮ್ಮ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಕಥೆ ಆದರಿಸಿದ ಸಿನಿಮಾ ನಿರ್ಮಿಸಿ ಯಶಸ್ವಿಯಾಗಿದ್ದ ಸೂರಿಯ, ಈಗ 1995ರ ನೈಜ ಘಟನೆ ಆದರಿಸಿದ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರಶಂಸೆಗೆ ಪಾತ್ರನಾಗಿದ್ದಾನೆ. ನಮ್ಮ ಅಪ್ಪುವಿನ ವಯಸ್ಸು ಸೂರ್ಯನದು. (46) ಆದರೆ, ಪೇರಳಗನ್ ಹಾಗೂ ಸಿಂಘಂ ಸರಣಿಯ ಚಿತ್ರಗಳ ಮೂಲಕ ತಮಿಳು ರಸಿಕರ ಮನಗೆದ್ದ ನಟ.

ಇಲಿ, ಹಾವು ಹಿಡಿದು ಬದುಕುವ ಇರುಳರು ಎಂಬ ಮುಗ್ದ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ ಇತಿಹಾಸವನ್ನು ಈ ಚಿತ್ರದಲ್ಲಿ ನಿರ್ದೇಶಕ ಜ್ಞಾನವೇಲ್ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾನೆ. ಈ ಹಿಂದೆ ರಾಷ್ಟ್ರಪ್ರಶಸ್ತಿ ಪಡೆದ ವಿಸಾರಣೈ ಸಿನಿಮಾದ ಹಾಗೆ ಈ ಸಿನಿಮಾ ಕೂಡ ಪ್ರೇಕ್ಷರನ್ನು ಗಂಭೀರ ಚಿಂತನೆಗೆ ದೂಡುತ್ತದೆ.

ನತದೃಷ್ಟರಿಗೆ ನ್ಯಾಯ ದೊರಕಿಸಿಕೊಡುವ ವಕೀಲನ ಪಾತ್ರದಲ್ಲಿ ಸೂರಿಯ ಅಭಿನಯ ಬಹುಕಾಲ ನಮ್ಮಲ್ಲಿ ಉಳಿಯುವಂತಹದ್ದು. ನಾಯಕಿ, ಹಾಡು, ಡ್ಯಾನ್ಸ್ , ಪೈಟಿಂಗ್ ಗಳಿಲ್ಲದ ಚಿತ್ರಗಳಲ್ಲಿ ಸ್ಟಾರ್ ನಟರು ಅಭಿನಯಿಸಬಲ್ಲರೆ? ಎಂಬ ಪ್ರಶ್ನೆಗೆ ಈ ಸಿನಿಮಾ ಸಾಕ್ಷಿಯಾಗಿದೆ.

ಧನುಷ್ ಅಭಿನಯದ ಅಸುರನ್ ಸಿನಿಮಾ ನಂತರ ನಾನು ನೋಡಿದ ಅತ್ಯುತ್ತಮ ತಮಿಳು ಚಿತ್ರಗಳಲ್ಲಿ ಜೈ ಭೀಮ್ ಒಂದು. ತಪ್ಪದೇ ಪ್ರಜ್ಞಾವಂತರು ನೋಡಬೇಕಾದ ಸಿನಿಮಾ ಇದು.

ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ರಘೋತ್ತಮ ಹೋ.ಬ. ಅವರ ಅಭಿಪ್ರಾಯ

“…ಬುಡಕಟ್ಟು ಸಮುದಾಯದ ಆ ವ್ಯಕ್ತಿಯ ಹತ್ಯೆಯ ಆ ಪ್ರಕರಣವನ್ನು ಚಿತ್ರದುದ್ದಕ್ಕು ವಕೀಲ ಚಂದ್ರು ಎತ್ತಿಕೊಂಡು ಸಾಗುವ ಪರಿ ಸಿಂಪ್ಲಿ ಥ್ರಿಲ್ಲಿಂಗ್, ನ್ಯಾಯಾಲಯದ ಹೋರಾಟದ ಜೊತೆಗೆ ಕಮ್ಯುನಿಸ್ಟ್ ಪಕ್ಷವೊಂದರ ಅಡಿಯಲ್ಲು ಚಂದ್ರು ಹೋರಾಟಕ್ಕೆ ಅಣಿಯಾಗುತ್ತಾರೆ ಎಂದರೆ ಚಿತ್ರದ ಬಿರುಸು ಎಂತಹದ್ದು ಎಂಬುದನ್ನು ಯಾರಾದರೂ ಊಹಿಸಬಹುದು. ಈ ನಡುವೆ ಹಾದಿ ತಪ್ಪುತ್ತಿದ್ದ ತನಿಖೆಯನ್ನು ಸರಿ ದಾರಿಗೆ ತರುವ ಮೂಲಕ ಚಂದ್ರು ತನಿಖೆಯನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಯೊಬ್ಬರ ಕೈಗೆ ಕೊಡಿಸುವಲ್ಲಿ ಯಶಸ್ವಿಯಾಗುತ್ತಾನೆ. ಆ ಉನ್ನತ ಅಧಿಕಾರಿಯ ಪಾತ್ರ ನಮ್ಮ ಕನ್ನಡದ ಪ್ರಕಾಶ್ ರೈ ರದ್ದು ಎಂದರೆ ಅದರ ಕಟ್ಟುವಿಕೆ ಹೇಗಿರುತ್ತದೆ ಎಂಬುದನ್ನು ಇಲ್ಲಿ ಬಿಡಿಸಿ ಹೇಳುವ ಅಗತ್ಯವಿಲ್ಲ…”

***

ವಿ.ಎಲ್‌.ನರಸಿಂಹಮೂರ್ತಿಯವರ ಅಭಿಪ್ರಾಯ

“Felt ashamed and guilty after watching this movie. Hats off to ‘Jai Bhim’ team. ಇಂತಹ ಎಷ್ಟು ತಬ್ಬಲಿ ಸಮುದಾಯಗಳ ಅಸಹಾಯಕತೆಯ ನಿಟ್ಟುಸಿರನ್ನ ಉಸಿರಾಡಿಕೊಂಡು ಬದುಕಿದೆ ಈ ದೇಶ !”

***

ಹರ್ಷಕುಮಾರ್‌ ಕುಗ್ವೆ ಹೀಗೆ ಬರೆಯುತ್ತಾರೆ:

“ಬುಡಕಟ್ಟು ಅಲೆಮಾರಿ ಜನರಿಗೂ ಸುಂದರವಾದ ಕನಸುಗಳಿರುತ್ತವೆ ಮತ್ತು ಆ ಕನಸುಗಳನ್ನು ನಮ್ಮ ಸೋ ಕಾಲ್ಡ್ ನಾಗರಿಕ ವ್ಯವಸ್ಥೆ ಮತ್ತು ಪ್ರಭುತ್ವಗಳು ಕ್ರೂರವಾಗಿ ಹೊಸಕಿ ಹಾಕುತ್ತವೆ ಎಂಬ ಸಾಮಾಜಿಕ ವಾಸ್ತವವನ್ನು ತೋರಿಸುವ ಸಿನಿಮಾ. ಬಹುದಿನಗಳ ವರೆಗೆ ನಮ್ಮನ್ನು ಕಾಡಬಲ್ಲ ಸಿನಿಮಾ ಇದು.

ಸಿನಿಮೀಯ ಹೀರೋಯಿಸಂನಿಂದಾಚೆಗೆ ನಿಜ ಜೀವನದ ನಿಜವಾದ ಹೀರೋ ಒಬ್ಬನ ಕೆಚ್ಚೆದೆಯ ಹೋರಾಟವನ್ನು ತಮಿಳು ಸೂಪರ್ ಸ್ಟಾರ್ ಸೂರ್ಯ ತೆರೆಯ ಮೇಲೆ ಅಭಿನಯಿಸಿ ತೋರಿಸಿರುವ ರೀತಿಯೂ ಅನನ್ಯ. ನಿರ್ದೇಶಕ ಟಿ ಜೆ ಜ್ಞಾನವೇಲುಗೆ ಕೋಟಿ ವಂದನೆ. ಪರಭಾಷೆಯ ಅದ್ಭುತ ಸಿನಿಮಾವೊಂದನ್ನು ಅಷ್ಟೇ ಒರಿಜಿನಲ್ ಆದ ರೀತಿಯಲ್ಲಿ ಡಬ್ಬಿಂಗ್ ನಿಂದಾಗಿ ಕನ್ನಡದಲ್ಲೇ ನೋಡುವಂತಾಗಿದ್ದು ಬಹಳ ಖುಷಿ. ಅಮೇಜಾನ್ ಪ್ರೈಂ ನಲ್ಲಿ JAI BHIM ಸಿನಿಮಾವನ್ನು ಕನ್ನಡದಲ್ಲೇ ನೋಡಿ. (Audio Language – ಕನ್ನಡ ಆಯ್ಕೆ ಮಾಡಿಕೊಳ್ಳಬೇಕು) ಇಂದು ಸಂಜೆ 6.30 ಕ್ಕೆ ಈ ಸಿನಿಮಾ ಕುರಿತು ಒಂದು ಕ್ಲಬ್ ಹೌಸ್ ಚರ್ಚೆ ಇದೆ. ಭಾಗವಹಿಸಿ.

***

ನಾಗೇಗೌಡ ಕೀಲಾರ ಅವರ ಅಭಿಪ್ರಾಯ

ಕನ್ನಡ ಪಿಚ್ಚರ್ ಬಂದರೆ ಮೂಗು ಮುರಿಯುತ್ತಾರೆ ಅದೇ ತಮಿಳು, ಮಲಯಾಳಂ ಪಿಚ್ಚರ್ ಬರಲಿ ಅಪ್ಪಿ ಮುದ್ದಾಡುತ್ತಾರೆ ಅಂತ ಒಂದು ಕಂಪ್ಲೈಂಟ್ ಇದೆ. ಹಿಂಗೇ ಕಂಪ್ಲೈಂಟ್ ಮಾಡುವವರು ಈ ಸಿನಿಮಾ ನೋಡ್ರಪ್ಪಾ ಆಮೇಲೆ ಅರ್ಥ ಆಗುತ್ತೆ ಕನ್ನಡ ಸಿನಿಮಾ ಮೇಲೆ ಕಂಪ್ಲೈಂಟ್ ಮಾಡುವವರು ನಮ್ಮ ಕನ್ನಡದಲ್ಲೂ ಏಕೆ ಇಂತಹ ಸಿನಿಮಾಗಳು ಬರುತ್ತಿಲ್ಲ ಅನ್ನುವ ನೋವು ಹತಾಶೆಯಿಂದ ಕಂಪ್ಲೈಂಟ್ ಮಾಡುತ್ತಾರೆ ಅನ್ನುವುದು.


ಇದನ್ನೂ ಓದಿರಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...