Homeಮುಖಪುಟ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

- Advertisement -
- Advertisement -

ನವೆಂಬರ್‌ 2ರಂದು ಬಹು ನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ. ನಿರೀಕ್ಷೆಯನ್ನು ಹುಸಿಗೊಳಿಸದೆ ಸಮತಾ ಸಮಾಜದ ನಿರ್ಮಾಣಕ್ಕೆ ಮಿಡಿದಿದೆ.

ಜ್ಯೋತಿಕಾ-ಸೂರಿಯ ಅವರ 2ಡಿ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್‌ನಲ್ಲಿ ತಯಾರಾದ, ನಿಜ ಘಟನೆಯನ್ನು ಆಧರಿಸಿದ ತಮಿಳು ಸಿನಿಮಾ ‘ಜೈ ಭೀಮ್‌’, ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗೂ ಡಬ್‌ ಆಗಿರುವುದರಿಂದ ಅದ್ಭುತ ಕಥನವೊಂದು ಬಹುಭಾಷಾ ಸಮುದಾಯವನ್ನು ಪರಿಣಾಮಕಾರಿಯಾಗಿ ತಲುಪಲು ಕಾರಣವಾಗಿದೆ.

ಟಿ.ಜೆ.ಜ್ಞಾನವೇಲ್‌ ನಿರ್ದೇಶನಕ್ಕೆ ಸಂವೇದನಾಶೀಲ ಮನಸ್ಸುಗಳು ಮಿಡಿದಿವೆ. ಸೂರಿಯ, ಪ್ರಕಾಶ್‌ ರಾಜ್‌, ಕೆ.ಮಣಿಕಂದನ್‌, ಲಿಜೊಮೊಲ್‌ ಜೋಸ್‌‌, ರಾವ್‌ ರಮೇಶ್‌, ರಜಿಶಾ ವಿಜಯನ್‌ ಮೊದಲಾದವರು ನಟಿಸಿರುವ ಜೈ ಭೀಮ್‌, ನ್ಯಾಯಾಂಗದ ಸುತ್ತ ನಡೆಯುವ ಕಥೆಯನ್ನು ಒಳಗೊಂಡಿದೆ. ಅಧಿಕಾರಶಾಹಿ ಕ್ರೌರ್ಯವನ್ನು ಬಿಚ್ಚಿಡುತ್ತಾ ನ್ಯಾಯಾಂಗದ ಮೇಲಿನ ಭರವಸೆಯನ್ನು ಎತ್ತಿ ಹಿಡಿಯುತ್ತದೆ. ಸಿನಿಮಾ ನೋಡಿದವರು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿನಂದನೆಯ ಮಹಾಪೂರವನ್ನೇ ಹರಿಸಿದ್ದಾರೆ. ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಮೂಡಿಬರಬೇಕೆಂದು ಪ್ರೋತ್ಸಾಹಿಸಿದ್ದಾರೆ.

ಅಲಕ್ಷಿತ ಸಮುದಾಯಗಳ ಕುರಿತು ತಮಿಳು ಚಿತ್ರದಲ್ಲಿ ಮೂಡಿಬರುತ್ತಿರುವ ಸಾಲು ಸಾಲು ಸಿನಿಮಾಗಳ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಪ.ರಂಜಿತ್‌ ಅವರ ‘ಕಾಲಾ’, ‘ಮದ್ರಾಸ್‌’, ‘ಸರಪಟ್ಟ ಪರಂಬರೈ’, ವೆಟ್ಟಿಮಾರನ್‌ ಅವರ ‘ಅಸುರನ್‌’, ‘ವಿಸಾರಣೈ’, ಮಾರಿ ಸೆಲ್ವರಾಜ್‌ ಅವರ ‘ಪೆರಿಯೇರುಮ್‌ ಪೆರುಮಾಳ್‌’, ‘ಕರ್ಣ‌ನ್‌’ ಸಾಲಿಗೆ ಟಿ.ಜೆ.ಜ್ಞಾನವೇಲ್‌‌ ಅವರ ‘ಜೈಭೀಮ್‌’ ಸೇರಿದೆ ಎಂದು ಕನ್ನಡದ ಮನಸ್ಸುಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದ್ದು, ಸಾಂಕೇತಿಕವಾಗಿ ಕೆಲವು ಲೇಖಕರ ಟಿಪ್ಪಣಿಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ಜಗದೀಶ್‌ ಕೊಪ್ಪ ಅವರ ಅಭಿಪ್ರಾಯ

“…. ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ತಮಿಳು ಚಿತ್ರ ಜೈ ಭೀಮ್ ನಾಯಕ ನಟ ಸೂರ್ಯನ ಪ್ರತಿಭೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ತಮಿಳು ಚಿತ್ರರಂಗದಲ್ಲಿ ದುಬಾರಿ ಎನಿಸಬಹುದಾದ ಸಂಭಾವನೆ ಪಡೆಯುವ ನಟರಲ್ಲಿ ಧನುಷ್ ಮತ್ತು ಸೂರ್ಯ ಮುಖ್ಯರಾದವರು. ಆದರೆ, ಚಿತ್ರಕಥೆಗೆ ಸರಿ ಸಮಾನರಾಗಿ ತಮ್ಮ ಸ್ಟಾರ್ ಗಿರಿಯ ಇಮೇಜ್ ಅನ್ನು ಪಕ್ಕಕ್ಕೆ ಇಟ್ಟು ಅಭಿನಯಿಸುವುದರಲ್ಲಿ ಈ ಇಬ್ಬರು ನಾಯಕರು ಇಡೀ ದಕ್ಷಿಣ ಭಾರತಕ್ಕೆ ಮಾದರಿಯಾಗಿದ್ದಾರೆ. ಇತ್ತೀಚೆಗೆ ವಿಜಯ್ ಸೇತುಪತಿ ಹೆಸರನ್ನು ಸಹ ಸೇರಿಸಬಹುದು.”

ನಿನ್ನೆ ಬೆಳಿಗ್ಗೆ ಚೆನ್ನೈ ನಗರದಲ್ಲಿ ನಡೆದ ಪ್ರೀಮಿಯರ್ ಷೋ ನಂತರ ಸಂಜೆ ವೇಳೆಗೆ ದಿ ಹಿಂದೂ, ಟೈಮ್ಸ್ ಆಫ್ ಇಂಡಿಯಾ, ಇಂಡಿಯನ್ ಎಕ್ಸ್‌ಪ್ರೆಸ್‌ ಹಾಗೂ ಎನ್.ಡಿ.ಟಿ.ವಿ. ಮಾಧ್ಯಮಗಳ ಜಾಲತಾಣಗಳಲ್ಲಿ ಹರಿದು ಬಂದ ವಿಮರ್ಶೆ ನೋಡಿ ಆಶ್ಚರ್ಯಪಟ್ಟೆ. ಇತ್ತೀಚಿನ ದಿನಗಳಲ್ಲಿ ಬಂದ ಶ್ರೇಷ್ಠ ಮಟ್ಟದ ವಿಮರ್ಶೆ ಅದಾಗಿತ್ತು. ಕಳೆದ ವರ್ಷ ನಮ್ಮ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಕಥೆ ಆದರಿಸಿದ ಸಿನಿಮಾ ನಿರ್ಮಿಸಿ ಯಶಸ್ವಿಯಾಗಿದ್ದ ಸೂರಿಯ, ಈಗ 1995ರ ನೈಜ ಘಟನೆ ಆದರಿಸಿದ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರಶಂಸೆಗೆ ಪಾತ್ರನಾಗಿದ್ದಾನೆ. ನಮ್ಮ ಅಪ್ಪುವಿನ ವಯಸ್ಸು ಸೂರ್ಯನದು. (46) ಆದರೆ, ಪೇರಳಗನ್ ಹಾಗೂ ಸಿಂಘಂ ಸರಣಿಯ ಚಿತ್ರಗಳ ಮೂಲಕ ತಮಿಳು ರಸಿಕರ ಮನಗೆದ್ದ ನಟ.

ಇಲಿ, ಹಾವು ಹಿಡಿದು ಬದುಕುವ ಇರುಳರು ಎಂಬ ಮುಗ್ದ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ ಇತಿಹಾಸವನ್ನು ಈ ಚಿತ್ರದಲ್ಲಿ ನಿರ್ದೇಶಕ ಜ್ಞಾನವೇಲ್ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾನೆ. ಈ ಹಿಂದೆ ರಾಷ್ಟ್ರಪ್ರಶಸ್ತಿ ಪಡೆದ ವಿಸಾರಣೈ ಸಿನಿಮಾದ ಹಾಗೆ ಈ ಸಿನಿಮಾ ಕೂಡ ಪ್ರೇಕ್ಷರನ್ನು ಗಂಭೀರ ಚಿಂತನೆಗೆ ದೂಡುತ್ತದೆ.

ನತದೃಷ್ಟರಿಗೆ ನ್ಯಾಯ ದೊರಕಿಸಿಕೊಡುವ ವಕೀಲನ ಪಾತ್ರದಲ್ಲಿ ಸೂರಿಯ ಅಭಿನಯ ಬಹುಕಾಲ ನಮ್ಮಲ್ಲಿ ಉಳಿಯುವಂತಹದ್ದು. ನಾಯಕಿ, ಹಾಡು, ಡ್ಯಾನ್ಸ್ , ಪೈಟಿಂಗ್ ಗಳಿಲ್ಲದ ಚಿತ್ರಗಳಲ್ಲಿ ಸ್ಟಾರ್ ನಟರು ಅಭಿನಯಿಸಬಲ್ಲರೆ? ಎಂಬ ಪ್ರಶ್ನೆಗೆ ಈ ಸಿನಿಮಾ ಸಾಕ್ಷಿಯಾಗಿದೆ.

ಧನುಷ್ ಅಭಿನಯದ ಅಸುರನ್ ಸಿನಿಮಾ ನಂತರ ನಾನು ನೋಡಿದ ಅತ್ಯುತ್ತಮ ತಮಿಳು ಚಿತ್ರಗಳಲ್ಲಿ ಜೈ ಭೀಮ್ ಒಂದು. ತಪ್ಪದೇ ಪ್ರಜ್ಞಾವಂತರು ನೋಡಬೇಕಾದ ಸಿನಿಮಾ ಇದು.

ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ರಘೋತ್ತಮ ಹೋ.ಬ. ಅವರ ಅಭಿಪ್ರಾಯ

“…ಬುಡಕಟ್ಟು ಸಮುದಾಯದ ಆ ವ್ಯಕ್ತಿಯ ಹತ್ಯೆಯ ಆ ಪ್ರಕರಣವನ್ನು ಚಿತ್ರದುದ್ದಕ್ಕು ವಕೀಲ ಚಂದ್ರು ಎತ್ತಿಕೊಂಡು ಸಾಗುವ ಪರಿ ಸಿಂಪ್ಲಿ ಥ್ರಿಲ್ಲಿಂಗ್, ನ್ಯಾಯಾಲಯದ ಹೋರಾಟದ ಜೊತೆಗೆ ಕಮ್ಯುನಿಸ್ಟ್ ಪಕ್ಷವೊಂದರ ಅಡಿಯಲ್ಲು ಚಂದ್ರು ಹೋರಾಟಕ್ಕೆ ಅಣಿಯಾಗುತ್ತಾರೆ ಎಂದರೆ ಚಿತ್ರದ ಬಿರುಸು ಎಂತಹದ್ದು ಎಂಬುದನ್ನು ಯಾರಾದರೂ ಊಹಿಸಬಹುದು. ಈ ನಡುವೆ ಹಾದಿ ತಪ್ಪುತ್ತಿದ್ದ ತನಿಖೆಯನ್ನು ಸರಿ ದಾರಿಗೆ ತರುವ ಮೂಲಕ ಚಂದ್ರು ತನಿಖೆಯನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಯೊಬ್ಬರ ಕೈಗೆ ಕೊಡಿಸುವಲ್ಲಿ ಯಶಸ್ವಿಯಾಗುತ್ತಾನೆ. ಆ ಉನ್ನತ ಅಧಿಕಾರಿಯ ಪಾತ್ರ ನಮ್ಮ ಕನ್ನಡದ ಪ್ರಕಾಶ್ ರೈ ರದ್ದು ಎಂದರೆ ಅದರ ಕಟ್ಟುವಿಕೆ ಹೇಗಿರುತ್ತದೆ ಎಂಬುದನ್ನು ಇಲ್ಲಿ ಬಿಡಿಸಿ ಹೇಳುವ ಅಗತ್ಯವಿಲ್ಲ…”

***

ವಿ.ಎಲ್‌.ನರಸಿಂಹಮೂರ್ತಿಯವರ ಅಭಿಪ್ರಾಯ

“Felt ashamed and guilty after watching this movie. Hats off to ‘Jai Bhim’ team. ಇಂತಹ ಎಷ್ಟು ತಬ್ಬಲಿ ಸಮುದಾಯಗಳ ಅಸಹಾಯಕತೆಯ ನಿಟ್ಟುಸಿರನ್ನ ಉಸಿರಾಡಿಕೊಂಡು ಬದುಕಿದೆ ಈ ದೇಶ !”

***

ಹರ್ಷಕುಮಾರ್‌ ಕುಗ್ವೆ ಹೀಗೆ ಬರೆಯುತ್ತಾರೆ:

“ಬುಡಕಟ್ಟು ಅಲೆಮಾರಿ ಜನರಿಗೂ ಸುಂದರವಾದ ಕನಸುಗಳಿರುತ್ತವೆ ಮತ್ತು ಆ ಕನಸುಗಳನ್ನು ನಮ್ಮ ಸೋ ಕಾಲ್ಡ್ ನಾಗರಿಕ ವ್ಯವಸ್ಥೆ ಮತ್ತು ಪ್ರಭುತ್ವಗಳು ಕ್ರೂರವಾಗಿ ಹೊಸಕಿ ಹಾಕುತ್ತವೆ ಎಂಬ ಸಾಮಾಜಿಕ ವಾಸ್ತವವನ್ನು ತೋರಿಸುವ ಸಿನಿಮಾ. ಬಹುದಿನಗಳ ವರೆಗೆ ನಮ್ಮನ್ನು ಕಾಡಬಲ್ಲ ಸಿನಿಮಾ ಇದು.

ಸಿನಿಮೀಯ ಹೀರೋಯಿಸಂನಿಂದಾಚೆಗೆ ನಿಜ ಜೀವನದ ನಿಜವಾದ ಹೀರೋ ಒಬ್ಬನ ಕೆಚ್ಚೆದೆಯ ಹೋರಾಟವನ್ನು ತಮಿಳು ಸೂಪರ್ ಸ್ಟಾರ್ ಸೂರ್ಯ ತೆರೆಯ ಮೇಲೆ ಅಭಿನಯಿಸಿ ತೋರಿಸಿರುವ ರೀತಿಯೂ ಅನನ್ಯ. ನಿರ್ದೇಶಕ ಟಿ ಜೆ ಜ್ಞಾನವೇಲುಗೆ ಕೋಟಿ ವಂದನೆ. ಪರಭಾಷೆಯ ಅದ್ಭುತ ಸಿನಿಮಾವೊಂದನ್ನು ಅಷ್ಟೇ ಒರಿಜಿನಲ್ ಆದ ರೀತಿಯಲ್ಲಿ ಡಬ್ಬಿಂಗ್ ನಿಂದಾಗಿ ಕನ್ನಡದಲ್ಲೇ ನೋಡುವಂತಾಗಿದ್ದು ಬಹಳ ಖುಷಿ. ಅಮೇಜಾನ್ ಪ್ರೈಂ ನಲ್ಲಿ JAI BHIM ಸಿನಿಮಾವನ್ನು ಕನ್ನಡದಲ್ಲೇ ನೋಡಿ. (Audio Language – ಕನ್ನಡ ಆಯ್ಕೆ ಮಾಡಿಕೊಳ್ಳಬೇಕು) ಇಂದು ಸಂಜೆ 6.30 ಕ್ಕೆ ಈ ಸಿನಿಮಾ ಕುರಿತು ಒಂದು ಕ್ಲಬ್ ಹೌಸ್ ಚರ್ಚೆ ಇದೆ. ಭಾಗವಹಿಸಿ.

***

ನಾಗೇಗೌಡ ಕೀಲಾರ ಅವರ ಅಭಿಪ್ರಾಯ

ಕನ್ನಡ ಪಿಚ್ಚರ್ ಬಂದರೆ ಮೂಗು ಮುರಿಯುತ್ತಾರೆ ಅದೇ ತಮಿಳು, ಮಲಯಾಳಂ ಪಿಚ್ಚರ್ ಬರಲಿ ಅಪ್ಪಿ ಮುದ್ದಾಡುತ್ತಾರೆ ಅಂತ ಒಂದು ಕಂಪ್ಲೈಂಟ್ ಇದೆ. ಹಿಂಗೇ ಕಂಪ್ಲೈಂಟ್ ಮಾಡುವವರು ಈ ಸಿನಿಮಾ ನೋಡ್ರಪ್ಪಾ ಆಮೇಲೆ ಅರ್ಥ ಆಗುತ್ತೆ ಕನ್ನಡ ಸಿನಿಮಾ ಮೇಲೆ ಕಂಪ್ಲೈಂಟ್ ಮಾಡುವವರು ನಮ್ಮ ಕನ್ನಡದಲ್ಲೂ ಏಕೆ ಇಂತಹ ಸಿನಿಮಾಗಳು ಬರುತ್ತಿಲ್ಲ ಅನ್ನುವ ನೋವು ಹತಾಶೆಯಿಂದ ಕಂಪ್ಲೈಂಟ್ ಮಾಡುತ್ತಾರೆ ಅನ್ನುವುದು.


ಇದನ್ನೂ ಓದಿರಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...