Homeಮುಖಪುಟ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

- Advertisement -
- Advertisement -

ನವೆಂಬರ್‌ 2ರಂದು ಬಹು ನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲಿ ಬಿಡುಗಡೆಯಾಗಿದೆ. ನಿರೀಕ್ಷೆಯನ್ನು ಹುಸಿಗೊಳಿಸದೆ ಸಮತಾ ಸಮಾಜದ ನಿರ್ಮಾಣಕ್ಕೆ ಮಿಡಿದಿದೆ.

ಜ್ಯೋತಿಕಾ-ಸೂರಿಯ ಅವರ 2ಡಿ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್‌ನಲ್ಲಿ ತಯಾರಾದ, ನಿಜ ಘಟನೆಯನ್ನು ಆಧರಿಸಿದ ತಮಿಳು ಸಿನಿಮಾ ‘ಜೈ ಭೀಮ್‌’, ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗೂ ಡಬ್‌ ಆಗಿರುವುದರಿಂದ ಅದ್ಭುತ ಕಥನವೊಂದು ಬಹುಭಾಷಾ ಸಮುದಾಯವನ್ನು ಪರಿಣಾಮಕಾರಿಯಾಗಿ ತಲುಪಲು ಕಾರಣವಾಗಿದೆ.

ಟಿ.ಜೆ.ಜ್ಞಾನವೇಲ್‌ ನಿರ್ದೇಶನಕ್ಕೆ ಸಂವೇದನಾಶೀಲ ಮನಸ್ಸುಗಳು ಮಿಡಿದಿವೆ. ಸೂರಿಯ, ಪ್ರಕಾಶ್‌ ರಾಜ್‌, ಕೆ.ಮಣಿಕಂದನ್‌, ಲಿಜೊಮೊಲ್‌ ಜೋಸ್‌‌, ರಾವ್‌ ರಮೇಶ್‌, ರಜಿಶಾ ವಿಜಯನ್‌ ಮೊದಲಾದವರು ನಟಿಸಿರುವ ಜೈ ಭೀಮ್‌, ನ್ಯಾಯಾಂಗದ ಸುತ್ತ ನಡೆಯುವ ಕಥೆಯನ್ನು ಒಳಗೊಂಡಿದೆ. ಅಧಿಕಾರಶಾಹಿ ಕ್ರೌರ್ಯವನ್ನು ಬಿಚ್ಚಿಡುತ್ತಾ ನ್ಯಾಯಾಂಗದ ಮೇಲಿನ ಭರವಸೆಯನ್ನು ಎತ್ತಿ ಹಿಡಿಯುತ್ತದೆ. ಸಿನಿಮಾ ನೋಡಿದವರು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿನಂದನೆಯ ಮಹಾಪೂರವನ್ನೇ ಹರಿಸಿದ್ದಾರೆ. ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಮೂಡಿಬರಬೇಕೆಂದು ಪ್ರೋತ್ಸಾಹಿಸಿದ್ದಾರೆ.

ಅಲಕ್ಷಿತ ಸಮುದಾಯಗಳ ಕುರಿತು ತಮಿಳು ಚಿತ್ರದಲ್ಲಿ ಮೂಡಿಬರುತ್ತಿರುವ ಸಾಲು ಸಾಲು ಸಿನಿಮಾಗಳ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಪ.ರಂಜಿತ್‌ ಅವರ ‘ಕಾಲಾ’, ‘ಮದ್ರಾಸ್‌’, ‘ಸರಪಟ್ಟ ಪರಂಬರೈ’, ವೆಟ್ಟಿಮಾರನ್‌ ಅವರ ‘ಅಸುರನ್‌’, ‘ವಿಸಾರಣೈ’, ಮಾರಿ ಸೆಲ್ವರಾಜ್‌ ಅವರ ‘ಪೆರಿಯೇರುಮ್‌ ಪೆರುಮಾಳ್‌’, ‘ಕರ್ಣ‌ನ್‌’ ಸಾಲಿಗೆ ಟಿ.ಜೆ.ಜ್ಞಾನವೇಲ್‌‌ ಅವರ ‘ಜೈಭೀಮ್‌’ ಸೇರಿದೆ ಎಂದು ಕನ್ನಡದ ಮನಸ್ಸುಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದ್ದು, ಸಾಂಕೇತಿಕವಾಗಿ ಕೆಲವು ಲೇಖಕರ ಟಿಪ್ಪಣಿಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ಜಗದೀಶ್‌ ಕೊಪ್ಪ ಅವರ ಅಭಿಪ್ರಾಯ

“…. ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ತಮಿಳು ಚಿತ್ರ ಜೈ ಭೀಮ್ ನಾಯಕ ನಟ ಸೂರ್ಯನ ಪ್ರತಿಭೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ತಮಿಳು ಚಿತ್ರರಂಗದಲ್ಲಿ ದುಬಾರಿ ಎನಿಸಬಹುದಾದ ಸಂಭಾವನೆ ಪಡೆಯುವ ನಟರಲ್ಲಿ ಧನುಷ್ ಮತ್ತು ಸೂರ್ಯ ಮುಖ್ಯರಾದವರು. ಆದರೆ, ಚಿತ್ರಕಥೆಗೆ ಸರಿ ಸಮಾನರಾಗಿ ತಮ್ಮ ಸ್ಟಾರ್ ಗಿರಿಯ ಇಮೇಜ್ ಅನ್ನು ಪಕ್ಕಕ್ಕೆ ಇಟ್ಟು ಅಭಿನಯಿಸುವುದರಲ್ಲಿ ಈ ಇಬ್ಬರು ನಾಯಕರು ಇಡೀ ದಕ್ಷಿಣ ಭಾರತಕ್ಕೆ ಮಾದರಿಯಾಗಿದ್ದಾರೆ. ಇತ್ತೀಚೆಗೆ ವಿಜಯ್ ಸೇತುಪತಿ ಹೆಸರನ್ನು ಸಹ ಸೇರಿಸಬಹುದು.”

ನಿನ್ನೆ ಬೆಳಿಗ್ಗೆ ಚೆನ್ನೈ ನಗರದಲ್ಲಿ ನಡೆದ ಪ್ರೀಮಿಯರ್ ಷೋ ನಂತರ ಸಂಜೆ ವೇಳೆಗೆ ದಿ ಹಿಂದೂ, ಟೈಮ್ಸ್ ಆಫ್ ಇಂಡಿಯಾ, ಇಂಡಿಯನ್ ಎಕ್ಸ್‌ಪ್ರೆಸ್‌ ಹಾಗೂ ಎನ್.ಡಿ.ಟಿ.ವಿ. ಮಾಧ್ಯಮಗಳ ಜಾಲತಾಣಗಳಲ್ಲಿ ಹರಿದು ಬಂದ ವಿಮರ್ಶೆ ನೋಡಿ ಆಶ್ಚರ್ಯಪಟ್ಟೆ. ಇತ್ತೀಚಿನ ದಿನಗಳಲ್ಲಿ ಬಂದ ಶ್ರೇಷ್ಠ ಮಟ್ಟದ ವಿಮರ್ಶೆ ಅದಾಗಿತ್ತು. ಕಳೆದ ವರ್ಷ ನಮ್ಮ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಕಥೆ ಆದರಿಸಿದ ಸಿನಿಮಾ ನಿರ್ಮಿಸಿ ಯಶಸ್ವಿಯಾಗಿದ್ದ ಸೂರಿಯ, ಈಗ 1995ರ ನೈಜ ಘಟನೆ ಆದರಿಸಿದ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರಶಂಸೆಗೆ ಪಾತ್ರನಾಗಿದ್ದಾನೆ. ನಮ್ಮ ಅಪ್ಪುವಿನ ವಯಸ್ಸು ಸೂರ್ಯನದು. (46) ಆದರೆ, ಪೇರಳಗನ್ ಹಾಗೂ ಸಿಂಘಂ ಸರಣಿಯ ಚಿತ್ರಗಳ ಮೂಲಕ ತಮಿಳು ರಸಿಕರ ಮನಗೆದ್ದ ನಟ.

ಇಲಿ, ಹಾವು ಹಿಡಿದು ಬದುಕುವ ಇರುಳರು ಎಂಬ ಮುಗ್ದ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ ಇತಿಹಾಸವನ್ನು ಈ ಚಿತ್ರದಲ್ಲಿ ನಿರ್ದೇಶಕ ಜ್ಞಾನವೇಲ್ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾನೆ. ಈ ಹಿಂದೆ ರಾಷ್ಟ್ರಪ್ರಶಸ್ತಿ ಪಡೆದ ವಿಸಾರಣೈ ಸಿನಿಮಾದ ಹಾಗೆ ಈ ಸಿನಿಮಾ ಕೂಡ ಪ್ರೇಕ್ಷರನ್ನು ಗಂಭೀರ ಚಿಂತನೆಗೆ ದೂಡುತ್ತದೆ.

ನತದೃಷ್ಟರಿಗೆ ನ್ಯಾಯ ದೊರಕಿಸಿಕೊಡುವ ವಕೀಲನ ಪಾತ್ರದಲ್ಲಿ ಸೂರಿಯ ಅಭಿನಯ ಬಹುಕಾಲ ನಮ್ಮಲ್ಲಿ ಉಳಿಯುವಂತಹದ್ದು. ನಾಯಕಿ, ಹಾಡು, ಡ್ಯಾನ್ಸ್ , ಪೈಟಿಂಗ್ ಗಳಿಲ್ಲದ ಚಿತ್ರಗಳಲ್ಲಿ ಸ್ಟಾರ್ ನಟರು ಅಭಿನಯಿಸಬಲ್ಲರೆ? ಎಂಬ ಪ್ರಶ್ನೆಗೆ ಈ ಸಿನಿಮಾ ಸಾಕ್ಷಿಯಾಗಿದೆ.

ಧನುಷ್ ಅಭಿನಯದ ಅಸುರನ್ ಸಿನಿಮಾ ನಂತರ ನಾನು ನೋಡಿದ ಅತ್ಯುತ್ತಮ ತಮಿಳು ಚಿತ್ರಗಳಲ್ಲಿ ಜೈ ಭೀಮ್ ಒಂದು. ತಪ್ಪದೇ ಪ್ರಜ್ಞಾವಂತರು ನೋಡಬೇಕಾದ ಸಿನಿಮಾ ಇದು.

ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ರಘೋತ್ತಮ ಹೋ.ಬ. ಅವರ ಅಭಿಪ್ರಾಯ

“…ಬುಡಕಟ್ಟು ಸಮುದಾಯದ ಆ ವ್ಯಕ್ತಿಯ ಹತ್ಯೆಯ ಆ ಪ್ರಕರಣವನ್ನು ಚಿತ್ರದುದ್ದಕ್ಕು ವಕೀಲ ಚಂದ್ರು ಎತ್ತಿಕೊಂಡು ಸಾಗುವ ಪರಿ ಸಿಂಪ್ಲಿ ಥ್ರಿಲ್ಲಿಂಗ್, ನ್ಯಾಯಾಲಯದ ಹೋರಾಟದ ಜೊತೆಗೆ ಕಮ್ಯುನಿಸ್ಟ್ ಪಕ್ಷವೊಂದರ ಅಡಿಯಲ್ಲು ಚಂದ್ರು ಹೋರಾಟಕ್ಕೆ ಅಣಿಯಾಗುತ್ತಾರೆ ಎಂದರೆ ಚಿತ್ರದ ಬಿರುಸು ಎಂತಹದ್ದು ಎಂಬುದನ್ನು ಯಾರಾದರೂ ಊಹಿಸಬಹುದು. ಈ ನಡುವೆ ಹಾದಿ ತಪ್ಪುತ್ತಿದ್ದ ತನಿಖೆಯನ್ನು ಸರಿ ದಾರಿಗೆ ತರುವ ಮೂಲಕ ಚಂದ್ರು ತನಿಖೆಯನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಯೊಬ್ಬರ ಕೈಗೆ ಕೊಡಿಸುವಲ್ಲಿ ಯಶಸ್ವಿಯಾಗುತ್ತಾನೆ. ಆ ಉನ್ನತ ಅಧಿಕಾರಿಯ ಪಾತ್ರ ನಮ್ಮ ಕನ್ನಡದ ಪ್ರಕಾಶ್ ರೈ ರದ್ದು ಎಂದರೆ ಅದರ ಕಟ್ಟುವಿಕೆ ಹೇಗಿರುತ್ತದೆ ಎಂಬುದನ್ನು ಇಲ್ಲಿ ಬಿಡಿಸಿ ಹೇಳುವ ಅಗತ್ಯವಿಲ್ಲ…”

***

ವಿ.ಎಲ್‌.ನರಸಿಂಹಮೂರ್ತಿಯವರ ಅಭಿಪ್ರಾಯ

“Felt ashamed and guilty after watching this movie. Hats off to ‘Jai Bhim’ team. ಇಂತಹ ಎಷ್ಟು ತಬ್ಬಲಿ ಸಮುದಾಯಗಳ ಅಸಹಾಯಕತೆಯ ನಿಟ್ಟುಸಿರನ್ನ ಉಸಿರಾಡಿಕೊಂಡು ಬದುಕಿದೆ ಈ ದೇಶ !”

***

ಹರ್ಷಕುಮಾರ್‌ ಕುಗ್ವೆ ಹೀಗೆ ಬರೆಯುತ್ತಾರೆ:

“ಬುಡಕಟ್ಟು ಅಲೆಮಾರಿ ಜನರಿಗೂ ಸುಂದರವಾದ ಕನಸುಗಳಿರುತ್ತವೆ ಮತ್ತು ಆ ಕನಸುಗಳನ್ನು ನಮ್ಮ ಸೋ ಕಾಲ್ಡ್ ನಾಗರಿಕ ವ್ಯವಸ್ಥೆ ಮತ್ತು ಪ್ರಭುತ್ವಗಳು ಕ್ರೂರವಾಗಿ ಹೊಸಕಿ ಹಾಕುತ್ತವೆ ಎಂಬ ಸಾಮಾಜಿಕ ವಾಸ್ತವವನ್ನು ತೋರಿಸುವ ಸಿನಿಮಾ. ಬಹುದಿನಗಳ ವರೆಗೆ ನಮ್ಮನ್ನು ಕಾಡಬಲ್ಲ ಸಿನಿಮಾ ಇದು.

ಸಿನಿಮೀಯ ಹೀರೋಯಿಸಂನಿಂದಾಚೆಗೆ ನಿಜ ಜೀವನದ ನಿಜವಾದ ಹೀರೋ ಒಬ್ಬನ ಕೆಚ್ಚೆದೆಯ ಹೋರಾಟವನ್ನು ತಮಿಳು ಸೂಪರ್ ಸ್ಟಾರ್ ಸೂರ್ಯ ತೆರೆಯ ಮೇಲೆ ಅಭಿನಯಿಸಿ ತೋರಿಸಿರುವ ರೀತಿಯೂ ಅನನ್ಯ. ನಿರ್ದೇಶಕ ಟಿ ಜೆ ಜ್ಞಾನವೇಲುಗೆ ಕೋಟಿ ವಂದನೆ. ಪರಭಾಷೆಯ ಅದ್ಭುತ ಸಿನಿಮಾವೊಂದನ್ನು ಅಷ್ಟೇ ಒರಿಜಿನಲ್ ಆದ ರೀತಿಯಲ್ಲಿ ಡಬ್ಬಿಂಗ್ ನಿಂದಾಗಿ ಕನ್ನಡದಲ್ಲೇ ನೋಡುವಂತಾಗಿದ್ದು ಬಹಳ ಖುಷಿ. ಅಮೇಜಾನ್ ಪ್ರೈಂ ನಲ್ಲಿ JAI BHIM ಸಿನಿಮಾವನ್ನು ಕನ್ನಡದಲ್ಲೇ ನೋಡಿ. (Audio Language – ಕನ್ನಡ ಆಯ್ಕೆ ಮಾಡಿಕೊಳ್ಳಬೇಕು) ಇಂದು ಸಂಜೆ 6.30 ಕ್ಕೆ ಈ ಸಿನಿಮಾ ಕುರಿತು ಒಂದು ಕ್ಲಬ್ ಹೌಸ್ ಚರ್ಚೆ ಇದೆ. ಭಾಗವಹಿಸಿ.

***

ನಾಗೇಗೌಡ ಕೀಲಾರ ಅವರ ಅಭಿಪ್ರಾಯ

ಕನ್ನಡ ಪಿಚ್ಚರ್ ಬಂದರೆ ಮೂಗು ಮುರಿಯುತ್ತಾರೆ ಅದೇ ತಮಿಳು, ಮಲಯಾಳಂ ಪಿಚ್ಚರ್ ಬರಲಿ ಅಪ್ಪಿ ಮುದ್ದಾಡುತ್ತಾರೆ ಅಂತ ಒಂದು ಕಂಪ್ಲೈಂಟ್ ಇದೆ. ಹಿಂಗೇ ಕಂಪ್ಲೈಂಟ್ ಮಾಡುವವರು ಈ ಸಿನಿಮಾ ನೋಡ್ರಪ್ಪಾ ಆಮೇಲೆ ಅರ್ಥ ಆಗುತ್ತೆ ಕನ್ನಡ ಸಿನಿಮಾ ಮೇಲೆ ಕಂಪ್ಲೈಂಟ್ ಮಾಡುವವರು ನಮ್ಮ ಕನ್ನಡದಲ್ಲೂ ಏಕೆ ಇಂತಹ ಸಿನಿಮಾಗಳು ಬರುತ್ತಿಲ್ಲ ಅನ್ನುವ ನೋವು ಹತಾಶೆಯಿಂದ ಕಂಪ್ಲೈಂಟ್ ಮಾಡುತ್ತಾರೆ ಅನ್ನುವುದು.


ಇದನ್ನೂ ಓದಿರಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...