ನವೆಂಬರ್ 2 ರಂದು ಅಮೆಜಾನ್ ಪ್ರೈಮ್ ವೀಡಿಯೋದಲ್ಲಿ ಬಿಡುಗಡೆಯಾದ ತಮಿಳು ಸೂಪರ್ ಸ್ಟಾರ್ ಸೂರಿಯಾ ನಟಿಸಿರುವ ಚಿತ್ರ ‘ಜೈ ಭೀಮ್’ ದೇಶಾದ್ಯಂತ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನಡುವೆ, ತಮಿಳುನಾಡು ಬಿಜೆಪಿ ನಾಯಕ ಎಚ್. ರಾಜಾ ಟ್ವಿಟರ್ನಲ್ಲಿ ಸೂರಿಯಾ ಅವರನ್ನು ಟೀಕಿಸಿದ್ದು, ಅವರನ್ನು “ಸ್ವಾರ್ಥಿ” ಎಂದು ಕರೆದಿದ್ದಾರೆ.
‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ರಾಸ್ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.
ಇದನ್ನೂ ಓದಿ: ‘ಜೈ ಭೀಮ್’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?
ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬಿಜೆಪಿ ನಾಯಕ ಎಚ್. ರಾಜಾ ಸಿನಿಮಾ ಬಗ್ಗೆ ತಕರಾರು ತೆಗೆದಿದ್ದಾರೆ. ಟ್ವಟರ್ನಲ್ಲಿ ಅವರು, “ನಮ್ಮ ಮಕ್ಕಳು 3 ಭಾಷೆಗಳನ್ನು ಓದಬಾರದು ಎಂದು ಹೇಳುವವರು, ತನ್ನ ಚಿತ್ರವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ವಾರ್ಥವನ್ನು ಅರ್ಥಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.
நம் குழந்தை 3 மொழி படிக்கக் கூடாது என்றவர் தன் படத்தை 5 மொழிகளில் வெளியிடுவாராம். சுயநலமிகளை புரிந்து கொள்வோம். pic.twitter.com/nHRXKw4sjj
— H Raja (@HRajaBJP) November 3, 2021
2019 ರಲ್ಲಿ, ನರೇಂದ್ರ ಮೋದಿ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ನಟ ಸೂರಿಯಾ ಟೀಕಿಸಿದ್ದರು. ಅದರಲ್ಲಿನ ಕೆಲವು ನಿಬಂಧನೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡುತ್ತವೆ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ
ಸೂರಿಯಾ ಅಂದು, “NEP ಯ ಗಮನವು ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾತ್ರವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ನೀಡುವಲ್ಲಿ ಇದರ ಗಮನ ಇಲ್ಲ. ಹಾಗಾಗಿಯೆ ಎಲ್ಲರೂ ಕೋಪಗೊಂಡಿದ್ದಾರೆ, ದುಃಖಿತರಾಗಿದ್ದಾರೆ ಮತ್ತು ಭಯಪಡುತ್ತಾರೆ. ಇದು ದೇಶದ 30 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಅವರು ತರಗತಿಗಳಿಗೆ ಹಾಜರಾಗುವುದು ಹೇಗೆ? ನನ್ನ ಮಕ್ಕಳಿಗೆ ತೃತೀಯ ಭಾಷೆಯನ್ನು ಕಲಿಸುವುದು ನನಗೆ ಸವಾಲಾಗಿದೆ” ಎಂದು ಹೇಳಿದ್ದರು.
ತಮ್ಮ ಸಿನಿಮಾ ಕುರಿತು ಬಿಜೆಪಿ ನಾಯಕನ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಸೂರಿಯಾ ತಕ್ಕ ಉತ್ತರ ಕೊಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದರು. ಆದರೆ ಸೂರಿಯಾ ಮಾತ್ರ ಯಾವುದೆ ಪ್ರತಿಕ್ರಿಯೆ ನೀಡದೆ, ಅವರ ಟ್ವೀಟ್ ಅನ್ನು ‘ಲೈಕ್’ ಮಾಡಿ ಸುಮ್ಮನಾಗಿದ್ದಾರೆ.
ನಟನ ಈ ಪ್ರಬುದ್ಧ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರು ಅವರನ್ನು ಬೆಂಬಲಿಸಿ ಕಾಮೆಂಟ್ ಮಾಡಿದ್ದಾರೆ. ಸೂರಿಯಾ ಅವರು ಎಚ್. ರಾಜಾ ಅವರ ಟ್ವೀಟ್ ಅನ್ನು ಲೈಕ್ ಮಾಡಿ ಟ್ರೋಲ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಟ್ವಿಟರ್ನಲ್ಲಿನ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.
Surya sir liked! ❤
H Raja be like…???? pic.twitter.com/wLSHDh6cll— Sanjay Dass (@nameis_sanjay) November 3, 2021
ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ
Suriya Anna liked the tweet???
— வெங்கி@Chozhas (@am_venki_) November 3, 2021
Language forcing is offence which is Suriya's point he doesn't says "not to learn language "
— Newzealand Suriya fans Team (@Seshatri6) November 3, 2021
Amazon la language choose panra option இருக்கு…
Govt school la language option eh இல்லையே..
அது என்ன private schoola மட்டும் option கொடுக்கிரீங்க?— SidhuTwits ? (@SidhuTwits) November 3, 2021
ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ
ಟಿಜೆ ಜ್ಞಾನವೇಲ್ ಚಿತ್ರವನ್ನು ಬರೆದು ನಿರ್ದೇಶಿಸಿದರೆ, ಸೂರ್ಯ ಮತ್ತು ಜ್ಯೋತಿಕಾ ತಮ್ಮ ಬ್ಯಾನರ್ 2D ಎಂಟರ್ಟೈನ್ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.
ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ಸೂರಿಯಾ ಅವರನ್ನು ಚಿತ್ರಿಸಲಾಗಿದ್ದು. ಚಿತ್ರದಲ್ಲಿ ರಜಿಶಾ ವಿಜಯನ್, ಪ್ರಕಾಶ್ ರಾಜ್, ಲಿಜೋ ಮೋಲ್ ಜೋಸ್, ಕೆ ಮಣಿಕಂದನ್ ಕೂಡ ನಟಿಸಿದ್ದಾರೆ. ಸೀನ್ ರೋಲ್ಡನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ.
ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ
ನಾನು ನೋಡಿದ, ನೈಜ ಘಟನೆಗಳನ್ನು ಆಧರಿಸಿದ ಅತ್ಯುತ್ತಮ ಸಿನಿಮಾ.! ಆ ಬಗ್ಗೆ, ರಾಜಾ ಅವರ ತಕರಾರನ್ನು ಬದಿಗಿಡಿ. ಸುರಿಯಾ ಅವರ ಪ್ರತಿಕ್ರಿಯೆ ಪ್ರಬುದ್ಧವಾದುದು.