Homeಮುಖಪುಟಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

- Advertisement -
- Advertisement -

ನವೆಂಬರ್ 2 ರಂದು ಅಮೆಜಾನ್ ಪ್ರೈಮ್‌ ವೀಡಿಯೋದಲ್ಲಿ ಬಿಡುಗಡೆಯಾದ ತಮಿಳು ಸೂಪರ್‌ ಸ್ಟಾರ್‌ ಸೂರಿಯಾ ನಟಿಸಿರುವ ಚಿತ್ರ ‘ಜೈ ಭೀಮ್’ ದೇಶಾದ್ಯಂತ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನಡುವೆ, ತಮಿಳುನಾಡು ಬಿಜೆಪಿ ನಾಯಕ ಎಚ್. ರಾಜಾ ಟ್ವಿಟರ್‌ನಲ್ಲಿ ಸೂರಿಯಾ ಅವರನ್ನು ಟೀಕಿಸಿದ್ದು, ಅವರನ್ನು “ಸ್ವಾರ್ಥಿ” ಎಂದು ಕರೆದಿದ್ದಾರೆ.

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್‌ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬಿಜೆಪಿ ನಾಯಕ ಎಚ್‌. ರಾಜಾ ಸಿನಿಮಾ ಬಗ್ಗೆ ತಕರಾರು ತೆಗೆದಿದ್ದಾರೆ. ಟ್ವಟರ್‌ನಲ್ಲಿ ಅವರು, “ನಮ್ಮ ಮಕ್ಕಳು 3 ಭಾಷೆಗಳನ್ನು ಓದಬಾರದು ಎಂದು ಹೇಳುವವರು, ತನ್ನ ಚಿತ್ರವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ವಾರ್ಥವನ್ನು ಅರ್ಥಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.

2019 ರಲ್ಲಿ, ನರೇಂದ್ರ ಮೋದಿ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನಟ ಸೂರಿಯಾ ಟೀಕಿಸಿದ್ದರು. ಅದರಲ್ಲಿನ ಕೆಲವು ನಿಬಂಧನೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡುತ್ತವೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಸೂರಿಯಾ ಅಂದು, “NEP ಯ ಗಮನವು ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾತ್ರವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ನೀಡುವಲ್ಲಿ ಇದರ ಗಮನ ಇಲ್ಲ. ಹಾಗಾಗಿಯೆ ಎಲ್ಲರೂ ಕೋಪಗೊಂಡಿದ್ದಾರೆ, ದುಃಖಿತರಾಗಿದ್ದಾರೆ ಮತ್ತು ಭಯಪಡುತ್ತಾರೆ. ಇದು ದೇಶದ 30 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಅವರು ತರಗತಿಗಳಿಗೆ ಹಾಜರಾಗುವುದು ಹೇಗೆ? ನನ್ನ ಮಕ್ಕಳಿಗೆ ತೃತೀಯ ಭಾಷೆಯನ್ನು ಕಲಿಸುವುದು ನನಗೆ ಸವಾಲಾಗಿದೆ” ಎಂದು ಹೇಳಿದ್ದರು.

ತಮ್ಮ ಸಿನಿಮಾ ಕುರಿತು ಬಿಜೆಪಿ ನಾಯಕನ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಸೂರಿಯಾ ತಕ್ಕ ಉತ್ತರ ಕೊಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದರು. ಆದರೆ ಸೂರಿಯಾ ಮಾತ್ರ ಯಾವುದೆ ಪ್ರತಿಕ್ರಿಯೆ ನೀಡದೆ, ಅವರ ಟ್ವೀಟ್‌ ಅನ್ನು ‘ಲೈಕ್’ ಮಾಡಿ ಸುಮ್ಮನಾಗಿದ್ದಾರೆ.

ನಟನ ಈ ಪ್ರಬುದ್ಧ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರು ಅವರನ್ನು ಬೆಂಬಲಿಸಿ ಕಾಮೆಂಟ್ ಮಾಡಿದ್ದಾರೆ. ಸೂರಿಯಾ ಅವರು ಎಚ್. ರಾಜಾ ಅವರ ಟ್ವೀಟ್ ಅನ್ನು ಲೈಕ್‌ ಮಾಡಿ ಟ್ರೋಲ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಟ್ವಿಟರ್‌ನಲ್ಲಿನ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಟಿಜೆ ಜ್ಞಾನವೇಲ್ ಚಿತ್ರವನ್ನು ಬರೆದು ನಿರ್ದೇಶಿಸಿದರೆ, ಸೂರ್ಯ ಮತ್ತು ಜ್ಯೋತಿಕಾ ತಮ್ಮ ಬ್ಯಾನರ್ 2D ಎಂಟರ್ಟೈನ್ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ಸೂರಿಯಾ ಅವರನ್ನು ಚಿತ್ರಿಸಲಾಗಿದ್ದು. ಚಿತ್ರದಲ್ಲಿ ರಜಿಶಾ ವಿಜಯನ್, ಪ್ರಕಾಶ್ ರಾಜ್, ಲಿಜೋ ಮೋಲ್ ಜೋಸ್, ಕೆ ಮಣಿಕಂದನ್ ಕೂಡ ನಟಿಸಿದ್ದಾರೆ. ಸೀನ್ ರೋಲ್ಡನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ನೋಡಿದ, ನೈಜ ಘಟನೆಗಳನ್ನು ಆಧರಿಸಿದ ಅತ್ಯುತ್ತಮ ಸಿನಿಮಾ.! ಆ ಬಗ್ಗೆ, ರಾಜಾ ಅವರ ತಕರಾರನ್ನು ಬದಿಗಿಡಿ. ಸುರಿಯಾ ಅವರ ಪ್ರತಿಕ್ರಿಯೆ ಪ್ರಬುದ್ಧವಾದುದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....