Homeಮುಖಪುಟಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

- Advertisement -
- Advertisement -

ನವೆಂಬರ್ 2 ರಂದು ಅಮೆಜಾನ್ ಪ್ರೈಮ್‌ ವೀಡಿಯೋದಲ್ಲಿ ಬಿಡುಗಡೆಯಾದ ತಮಿಳು ಸೂಪರ್‌ ಸ್ಟಾರ್‌ ಸೂರಿಯಾ ನಟಿಸಿರುವ ಚಿತ್ರ ‘ಜೈ ಭೀಮ್’ ದೇಶಾದ್ಯಂತ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನಡುವೆ, ತಮಿಳುನಾಡು ಬಿಜೆಪಿ ನಾಯಕ ಎಚ್. ರಾಜಾ ಟ್ವಿಟರ್‌ನಲ್ಲಿ ಸೂರಿಯಾ ಅವರನ್ನು ಟೀಕಿಸಿದ್ದು, ಅವರನ್ನು “ಸ್ವಾರ್ಥಿ” ಎಂದು ಕರೆದಿದ್ದಾರೆ.

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್‌ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬಿಜೆಪಿ ನಾಯಕ ಎಚ್‌. ರಾಜಾ ಸಿನಿಮಾ ಬಗ್ಗೆ ತಕರಾರು ತೆಗೆದಿದ್ದಾರೆ. ಟ್ವಟರ್‌ನಲ್ಲಿ ಅವರು, “ನಮ್ಮ ಮಕ್ಕಳು 3 ಭಾಷೆಗಳನ್ನು ಓದಬಾರದು ಎಂದು ಹೇಳುವವರು, ತನ್ನ ಚಿತ್ರವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ವಾರ್ಥವನ್ನು ಅರ್ಥಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.

2019 ರಲ್ಲಿ, ನರೇಂದ್ರ ಮೋದಿ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನಟ ಸೂರಿಯಾ ಟೀಕಿಸಿದ್ದರು. ಅದರಲ್ಲಿನ ಕೆಲವು ನಿಬಂಧನೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡುತ್ತವೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಸೂರಿಯಾ ಅಂದು, “NEP ಯ ಗಮನವು ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾತ್ರವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ನೀಡುವಲ್ಲಿ ಇದರ ಗಮನ ಇಲ್ಲ. ಹಾಗಾಗಿಯೆ ಎಲ್ಲರೂ ಕೋಪಗೊಂಡಿದ್ದಾರೆ, ದುಃಖಿತರಾಗಿದ್ದಾರೆ ಮತ್ತು ಭಯಪಡುತ್ತಾರೆ. ಇದು ದೇಶದ 30 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಅವರು ತರಗತಿಗಳಿಗೆ ಹಾಜರಾಗುವುದು ಹೇಗೆ? ನನ್ನ ಮಕ್ಕಳಿಗೆ ತೃತೀಯ ಭಾಷೆಯನ್ನು ಕಲಿಸುವುದು ನನಗೆ ಸವಾಲಾಗಿದೆ” ಎಂದು ಹೇಳಿದ್ದರು.

ತಮ್ಮ ಸಿನಿಮಾ ಕುರಿತು ಬಿಜೆಪಿ ನಾಯಕನ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಸೂರಿಯಾ ತಕ್ಕ ಉತ್ತರ ಕೊಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದರು. ಆದರೆ ಸೂರಿಯಾ ಮಾತ್ರ ಯಾವುದೆ ಪ್ರತಿಕ್ರಿಯೆ ನೀಡದೆ, ಅವರ ಟ್ವೀಟ್‌ ಅನ್ನು ‘ಲೈಕ್’ ಮಾಡಿ ಸುಮ್ಮನಾಗಿದ್ದಾರೆ.

ನಟನ ಈ ಪ್ರಬುದ್ಧ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರು ಅವರನ್ನು ಬೆಂಬಲಿಸಿ ಕಾಮೆಂಟ್ ಮಾಡಿದ್ದಾರೆ. ಸೂರಿಯಾ ಅವರು ಎಚ್. ರಾಜಾ ಅವರ ಟ್ವೀಟ್ ಅನ್ನು ಲೈಕ್‌ ಮಾಡಿ ಟ್ರೋಲ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಟ್ವಿಟರ್‌ನಲ್ಲಿನ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಟಿಜೆ ಜ್ಞಾನವೇಲ್ ಚಿತ್ರವನ್ನು ಬರೆದು ನಿರ್ದೇಶಿಸಿದರೆ, ಸೂರ್ಯ ಮತ್ತು ಜ್ಯೋತಿಕಾ ತಮ್ಮ ಬ್ಯಾನರ್ 2D ಎಂಟರ್ಟೈನ್ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ಸೂರಿಯಾ ಅವರನ್ನು ಚಿತ್ರಿಸಲಾಗಿದ್ದು. ಚಿತ್ರದಲ್ಲಿ ರಜಿಶಾ ವಿಜಯನ್, ಪ್ರಕಾಶ್ ರಾಜ್, ಲಿಜೋ ಮೋಲ್ ಜೋಸ್, ಕೆ ಮಣಿಕಂದನ್ ಕೂಡ ನಟಿಸಿದ್ದಾರೆ. ಸೀನ್ ರೋಲ್ಡನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ನೋಡಿದ, ನೈಜ ಘಟನೆಗಳನ್ನು ಆಧರಿಸಿದ ಅತ್ಯುತ್ತಮ ಸಿನಿಮಾ.! ಆ ಬಗ್ಗೆ, ರಾಜಾ ಅವರ ತಕರಾರನ್ನು ಬದಿಗಿಡಿ. ಸುರಿಯಾ ಅವರ ಪ್ರತಿಕ್ರಿಯೆ ಪ್ರಬುದ್ಧವಾದುದು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...