Homeಮುಖಪುಟಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

- Advertisement -
- Advertisement -

ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳು ಕಳೆದರೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಚಿತ್ರದ ದೃಶ್ಯಗಳು ಪ್ರಸಾರವಾಗುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಮಂಗಳವಾರ (ಜ.18) ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ತಮಿಳು ಚಿತ್ರ ಜೈ ಭೀಮ್‌ನ ದೃಶ್ಯಗಳನ್ನು ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ “ಸೀನ್ ಅಟ್ ದಿ ಅಕಾಡೆಮಿ” ವಿಭಾಗದಲ್ಲಿ 12 ನಿಮಿಷ 47 ಸೆಕೆಂಡ್ ಅಪ್‌ಲೋಡ್ ಮಾಡಲಾಗಿದೆ. ಚಿತ್ರದ ನಿರ್ದೇಶಕ ಜ್ಞಾನವೇಲು ಅವರ ನಿರೂಪಣೆಯೊಂದಿಗೆ ಚಿತ್ರದ ಒಂದೊಂದು ದೃಶ್ಯಗಳನ್ನು ತೋರಿಸಲಾಗಿದೆ.

 ’ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ.ಜೆ. ಜ್ಞಾನವೇಲ್, ಜೈ ಭೀಮ್ ಸಿನಿಮಾ ನಿರ್ದೇಶಿಸಿದ್ದರು. ಚಿತ್ರದಲ್ಲಿ ನಟ ಸೂರ್ಯ, ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಕಳೆದ ವರ್ಷ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಡೆಯಾಗಿದ್ದ ಜೈ ಭೀಮ್ ಚಿತ್ರದಲ್ಲಿ ಪ್ರಕಾಶ್ ರಾಜ್, ರಾವ್ ರಮೇಶ್, ರಜಿಶಾ ವಿಜಯನ್, ಕೆ.ಮಣಿಕಂಠನ್ ಮತ್ತು ಲಿಜೋಮೋಲ್ ಜೋಸ್ ಇತರರು ನಟಿಸಿದ್ದಾರೆ.

ಆಸ್ಕರ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿರುವ ವೀಡಿಯೋದಲ್ಲಿ, ನಿರ್ದೇಶಕ ಜ್ಞಾನವೇಲ್ ಕಥೆ ಹುಟ್ಟಿಕೊಂಡಿದ್ದು, ಜಾತಿ ವ್ಯವಸ್ಥೆ, ಅದನ್ನು ಸಿನಿಮಾಗೆ ಹೊಂದಿಸಿದ್ದು, ಸಿನಿಮಾ ಏನನ್ನು ಹೇಳಲು ಹೊರಟಿದೆ ಎಂಬ ಬಗ್ಗೆ ಮಾತನಾಡಿದ್ದಾರೆ. ಜೊತೆ ಜೊತೆಯಲ್ಲಿ ಸಿನಿಮಾದ ದೃಶ್ಯಗಳನ್ನು ತೋರಿಸಲಾಗಿದೆ.

“ಈ ಸಿನಿಮಾ ಕೇವಲ ಬುಡಕಟ್ಟು ಸಮುದಾಯದ ಮೇಲಿನ ಪೊಲೀಸರ ದೌರ್ಜನ್ಯದ ಕುರಿತು ಮಾತಾಡುವುದಿಲ್ಲ ಇದು ಜಾತಿ ತಾರತಮ್ಯದ ಅಡಿಯಲ್ಲಿ ನಡೆಯುವ ಪೊಲೀಸ್ ದೌರ್ಜನ್ಯ, ತಾರತಮ್ಯದ ಕುರಿತು ಮಾತಾಡುತ್ತದೆ” ಎಂದು ಟಿ.ಜೆ.ಜ್ಞಾನವೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...