Homeಮುಖಪುಟಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

- Advertisement -
- Advertisement -

ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳು ಕಳೆದರೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಚಿತ್ರದ ದೃಶ್ಯಗಳು ಪ್ರಸಾರವಾಗುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಮಂಗಳವಾರ (ಜ.18) ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ತಮಿಳು ಚಿತ್ರ ಜೈ ಭೀಮ್‌ನ ದೃಶ್ಯಗಳನ್ನು ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ “ಸೀನ್ ಅಟ್ ದಿ ಅಕಾಡೆಮಿ” ವಿಭಾಗದಲ್ಲಿ 12 ನಿಮಿಷ 47 ಸೆಕೆಂಡ್ ಅಪ್‌ಲೋಡ್ ಮಾಡಲಾಗಿದೆ. ಚಿತ್ರದ ನಿರ್ದೇಶಕ ಜ್ಞಾನವೇಲು ಅವರ ನಿರೂಪಣೆಯೊಂದಿಗೆ ಚಿತ್ರದ ಒಂದೊಂದು ದೃಶ್ಯಗಳನ್ನು ತೋರಿಸಲಾಗಿದೆ.

 ’ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ.ಜೆ. ಜ್ಞಾನವೇಲ್, ಜೈ ಭೀಮ್ ಸಿನಿಮಾ ನಿರ್ದೇಶಿಸಿದ್ದರು. ಚಿತ್ರದಲ್ಲಿ ನಟ ಸೂರ್ಯ, ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಕಳೆದ ವರ್ಷ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಡೆಯಾಗಿದ್ದ ಜೈ ಭೀಮ್ ಚಿತ್ರದಲ್ಲಿ ಪ್ರಕಾಶ್ ರಾಜ್, ರಾವ್ ರಮೇಶ್, ರಜಿಶಾ ವಿಜಯನ್, ಕೆ.ಮಣಿಕಂಠನ್ ಮತ್ತು ಲಿಜೋಮೋಲ್ ಜೋಸ್ ಇತರರು ನಟಿಸಿದ್ದಾರೆ.

ಆಸ್ಕರ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿರುವ ವೀಡಿಯೋದಲ್ಲಿ, ನಿರ್ದೇಶಕ ಜ್ಞಾನವೇಲ್ ಕಥೆ ಹುಟ್ಟಿಕೊಂಡಿದ್ದು, ಜಾತಿ ವ್ಯವಸ್ಥೆ, ಅದನ್ನು ಸಿನಿಮಾಗೆ ಹೊಂದಿಸಿದ್ದು, ಸಿನಿಮಾ ಏನನ್ನು ಹೇಳಲು ಹೊರಟಿದೆ ಎಂಬ ಬಗ್ಗೆ ಮಾತನಾಡಿದ್ದಾರೆ. ಜೊತೆ ಜೊತೆಯಲ್ಲಿ ಸಿನಿಮಾದ ದೃಶ್ಯಗಳನ್ನು ತೋರಿಸಲಾಗಿದೆ.

“ಈ ಸಿನಿಮಾ ಕೇವಲ ಬುಡಕಟ್ಟು ಸಮುದಾಯದ ಮೇಲಿನ ಪೊಲೀಸರ ದೌರ್ಜನ್ಯದ ಕುರಿತು ಮಾತಾಡುವುದಿಲ್ಲ ಇದು ಜಾತಿ ತಾರತಮ್ಯದ ಅಡಿಯಲ್ಲಿ ನಡೆಯುವ ಪೊಲೀಸ್ ದೌರ್ಜನ್ಯ, ತಾರತಮ್ಯದ ಕುರಿತು ಮಾತಾಡುತ್ತದೆ” ಎಂದು ಟಿ.ಜೆ.ಜ್ಞಾನವೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...