Homeಮುಖಪುಟಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

- Advertisement -
- Advertisement -

ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳು ಕಳೆದರೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಚಿತ್ರದ ದೃಶ್ಯಗಳು ಪ್ರಸಾರವಾಗುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಮಂಗಳವಾರ (ಜ.18) ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ತಮಿಳು ಚಿತ್ರ ಜೈ ಭೀಮ್‌ನ ದೃಶ್ಯಗಳನ್ನು ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ “ಸೀನ್ ಅಟ್ ದಿ ಅಕಾಡೆಮಿ” ವಿಭಾಗದಲ್ಲಿ 12 ನಿಮಿಷ 47 ಸೆಕೆಂಡ್ ಅಪ್‌ಲೋಡ್ ಮಾಡಲಾಗಿದೆ. ಚಿತ್ರದ ನಿರ್ದೇಶಕ ಜ್ಞಾನವೇಲು ಅವರ ನಿರೂಪಣೆಯೊಂದಿಗೆ ಚಿತ್ರದ ಒಂದೊಂದು ದೃಶ್ಯಗಳನ್ನು ತೋರಿಸಲಾಗಿದೆ.

 ’ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ.ಜೆ. ಜ್ಞಾನವೇಲ್, ಜೈ ಭೀಮ್ ಸಿನಿಮಾ ನಿರ್ದೇಶಿಸಿದ್ದರು. ಚಿತ್ರದಲ್ಲಿ ನಟ ಸೂರ್ಯ, ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಕಳೆದ ವರ್ಷ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಡೆಯಾಗಿದ್ದ ಜೈ ಭೀಮ್ ಚಿತ್ರದಲ್ಲಿ ಪ್ರಕಾಶ್ ರಾಜ್, ರಾವ್ ರಮೇಶ್, ರಜಿಶಾ ವಿಜಯನ್, ಕೆ.ಮಣಿಕಂಠನ್ ಮತ್ತು ಲಿಜೋಮೋಲ್ ಜೋಸ್ ಇತರರು ನಟಿಸಿದ್ದಾರೆ.

ಆಸ್ಕರ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿರುವ ವೀಡಿಯೋದಲ್ಲಿ, ನಿರ್ದೇಶಕ ಜ್ಞಾನವೇಲ್ ಕಥೆ ಹುಟ್ಟಿಕೊಂಡಿದ್ದು, ಜಾತಿ ವ್ಯವಸ್ಥೆ, ಅದನ್ನು ಸಿನಿಮಾಗೆ ಹೊಂದಿಸಿದ್ದು, ಸಿನಿಮಾ ಏನನ್ನು ಹೇಳಲು ಹೊರಟಿದೆ ಎಂಬ ಬಗ್ಗೆ ಮಾತನಾಡಿದ್ದಾರೆ. ಜೊತೆ ಜೊತೆಯಲ್ಲಿ ಸಿನಿಮಾದ ದೃಶ್ಯಗಳನ್ನು ತೋರಿಸಲಾಗಿದೆ.

“ಈ ಸಿನಿಮಾ ಕೇವಲ ಬುಡಕಟ್ಟು ಸಮುದಾಯದ ಮೇಲಿನ ಪೊಲೀಸರ ದೌರ್ಜನ್ಯದ ಕುರಿತು ಮಾತಾಡುವುದಿಲ್ಲ ಇದು ಜಾತಿ ತಾರತಮ್ಯದ ಅಡಿಯಲ್ಲಿ ನಡೆಯುವ ಪೊಲೀಸ್ ದೌರ್ಜನ್ಯ, ತಾರತಮ್ಯದ ಕುರಿತು ಮಾತಾಡುತ್ತದೆ” ಎಂದು ಟಿ.ಜೆ.ಜ್ಞಾನವೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...