Homeಮುಖಪುಟಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

- Advertisement -
- Advertisement -

ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳು ಕಳೆದರೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಚಿತ್ರದ ದೃಶ್ಯಗಳು ಪ್ರಸಾರವಾಗುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಮಂಗಳವಾರ (ಜ.18) ಆಸ್ಕರ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ತಮಿಳು ಚಿತ್ರ ಜೈ ಭೀಮ್‌ನ ದೃಶ್ಯಗಳನ್ನು ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ “ಸೀನ್ ಅಟ್ ದಿ ಅಕಾಡೆಮಿ” ವಿಭಾಗದಲ್ಲಿ 12 ನಿಮಿಷ 47 ಸೆಕೆಂಡ್ ಅಪ್‌ಲೋಡ್ ಮಾಡಲಾಗಿದೆ. ಚಿತ್ರದ ನಿರ್ದೇಶಕ ಜ್ಞಾನವೇಲು ಅವರ ನಿರೂಪಣೆಯೊಂದಿಗೆ ಚಿತ್ರದ ಒಂದೊಂದು ದೃಶ್ಯಗಳನ್ನು ತೋರಿಸಲಾಗಿದೆ.

 ’ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ.ಜೆ. ಜ್ಞಾನವೇಲ್, ಜೈ ಭೀಮ್ ಸಿನಿಮಾ ನಿರ್ದೇಶಿಸಿದ್ದರು. ಚಿತ್ರದಲ್ಲಿ ನಟ ಸೂರ್ಯ, ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಕಳೆದ ವರ್ಷ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಡೆಯಾಗಿದ್ದ ಜೈ ಭೀಮ್ ಚಿತ್ರದಲ್ಲಿ ಪ್ರಕಾಶ್ ರಾಜ್, ರಾವ್ ರಮೇಶ್, ರಜಿಶಾ ವಿಜಯನ್, ಕೆ.ಮಣಿಕಂಠನ್ ಮತ್ತು ಲಿಜೋಮೋಲ್ ಜೋಸ್ ಇತರರು ನಟಿಸಿದ್ದಾರೆ.

ಆಸ್ಕರ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿರುವ ವೀಡಿಯೋದಲ್ಲಿ, ನಿರ್ದೇಶಕ ಜ್ಞಾನವೇಲ್ ಕಥೆ ಹುಟ್ಟಿಕೊಂಡಿದ್ದು, ಜಾತಿ ವ್ಯವಸ್ಥೆ, ಅದನ್ನು ಸಿನಿಮಾಗೆ ಹೊಂದಿಸಿದ್ದು, ಸಿನಿಮಾ ಏನನ್ನು ಹೇಳಲು ಹೊರಟಿದೆ ಎಂಬ ಬಗ್ಗೆ ಮಾತನಾಡಿದ್ದಾರೆ. ಜೊತೆ ಜೊತೆಯಲ್ಲಿ ಸಿನಿಮಾದ ದೃಶ್ಯಗಳನ್ನು ತೋರಿಸಲಾಗಿದೆ.

“ಈ ಸಿನಿಮಾ ಕೇವಲ ಬುಡಕಟ್ಟು ಸಮುದಾಯದ ಮೇಲಿನ ಪೊಲೀಸರ ದೌರ್ಜನ್ಯದ ಕುರಿತು ಮಾತಾಡುವುದಿಲ್ಲ ಇದು ಜಾತಿ ತಾರತಮ್ಯದ ಅಡಿಯಲ್ಲಿ ನಡೆಯುವ ಪೊಲೀಸ್ ದೌರ್ಜನ್ಯ, ತಾರತಮ್ಯದ ಕುರಿತು ಮಾತಾಡುತ್ತದೆ” ಎಂದು ಟಿ.ಜೆ.ಜ್ಞಾನವೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...