HomeUncategorizedಜೈ ಶ್ರೀರಾಮ್ ಬದಲು 'ಜೈ ಜಗನ್ನಾಥ್'..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

ಜೈ ಶ್ರೀರಾಮ್ ಬದಲು ‘ಜೈ ಜಗನ್ನಾಥ್’..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ.

ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ ವಿಜಯ ಭಾಷಣದಲ್ಲಿ ‘ಜೈ ಜಗನ್ನಾಥ್’ ಎಂದು ಹೇಳುವ ಮೂಲಕ ತನ್ನ ಡೈಲಾಗ್ ಬದಲಾಯಿಸಿಕೊಂಡಿದ್ದರು. ಅಲ್ಲದೆ, ತನ್ನ ಭಾಷಣದಲ್ಲಿ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದ ಕುರಿತು ಮಾತೇ ಎತ್ತಿಲ್ಲ.

“ಭಾರತ್ ಮಾತಾ ಕಿ ಜೈ” ಮತ್ತು “ಜೈ ಜಗನ್ನಾಥ್” ಎಂದು ಹೇಳುವ ಮೂಲಕ ಮೋದಿ 34 ನಿಮಿಷಗಳ ತನ್ನ ಭಾಷಣ ಪ್ರಾರಂಭಿಸಿದರು. ಮುಂದೆ ಸೇರಿದ್ದ ಜನರು ಜೈ ಶ್ರೀರಾಮ್ ಎಂದರೂ, ಮೋದಿ ಆ ಘೋಷಣೆ ಕೂಗಿಲ್ಲ.

ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವಾಗಿದ್ದ ರಾಮ ಮಂದಿರವನ್ನು ನಿರ್ಮಾಣ ಮಾಡಿದರೂ, ಈ ಬಾರಿಯ ಚುನಾವಣೆಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಮಾಜವಾದಿ ಪಕ್ಷದ ದಲಿತ ನಾಯಕ ಅವಧೇಶ್ ಪ್ರಸಾದ್ ಗೆದ್ದಿದ್ದಾರೆ.

ಒಡಿಶಾದಲ್ಲಿ ಬಿಜೆಪಿ ತನ್ನ ಮೊದಲ ರಾಜ್ಯ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಅಲ್ಲಿ ವಿಧಾನಸಭೆಯ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆಡಳಿತರೂಢ ಬಿಜು ಜನತಾ ದಳ (ಬಿಜೆಡಿ) 51 ಸ್ಥಾನಗಳಿಗೆ ಇಳಿದಿದೆ ಮತ್ತು ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ 2000 ದಿಂದ ಅಧಿಕಾರದಲ್ಲಿರುವ ನವೀನ್ ಪಟ್ನಾಯಕ್ ಅಧಿಕಾರ ಕೊನೆಗೊಂಡಿದೆ.

ಲೋಕಸಭೆ ಚುನಾವಣೆಯ ವಿಷಯಕ್ಕೆ ಬಂದರೆ, 2014 ಮತ್ತು 2019ರಲ್ಲಿ ಒಡಿಶಾದಲ್ಲಿ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ, 2024ರ ಚುನಾವಣೆಯಲ್ಲಿ 21 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ. ಆಡಳಿತರೂಢ ಬಿಜೆಡಿ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ.

ಮೋದಿ ತಮ್ಮ ಭಾಷಣದಲ್ಲಿ ಒಡಿಶಾ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಕೇರಳ, ಬಿಹಾರ ಮತ್ತು ವಿಧಾನಸಭೆ ಚುನಾವಣೆಗಳನ್ನು ಗೆದ್ದಿರುವ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಅನ್ನು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿಯ ಪ್ರಮುಖ ರಾಜ್ಯ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಬಗ್ಗೆ ಮಾತೆತಿಲ್ಲ.

“1962ರ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರ ತನ್ನ ಎರಡು ಅವಧಿಗಳನ್ನು ಪೂರ್ಣಗೊಳಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ನನ್ನ ಬಳಿ ವಿವರಗಳಿಲ್ಲ. ಆದರೆ, ಅವರು ತಮ್ಮ ಠೇವಣಿಯನ್ನೂ ಉಳಿಸಿಕೊಂಡಿಲ್ಲ ಅನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಸ್ತಾಪವಿಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಬದಲಾವಣೆಯು ಉತ್ತರ ಪ್ರದೇಶದಲ್ಲಿ ಆಗಿದೆ. ಅಲ್ಲಿ ಬಿಜೆಪಿ ತನ್ನ ಗುರಿಯಾದ “400 ಪಾರ್” ತಲುಪಲು 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. 2019ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದರೆ ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ಇಂಡಿಯಾ ಮೂತ್ರಿಕೂಟದ ಮುಂದೆ ಬಿಜೆಪಿ ಮಂಕಾಗಿದೆ.

ಎನ್‌ಡಿಎ (ಬಿಜೆಪಿ ಮತ್ತು ಆರ್‌ಎಲ್‌ಡಿ) ಕೇವಲ 35 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಏಕಾಂಗಿಯಾಗಿ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 33, ಕಾಂಗ್ರೆಸ್ 6, ಆರ್‌ಎಲ್‌ಡಿ 2 ಮತ್ತು ಅಪ್ನಾ ದಳ (ಸೋನಿಲಾಲ್) ಮತ್ತು ಆಜಾದ್ ಸಮಾಜ ಪಕ್ಷ ತಲಾ 1 ಸ್ಥಾನ ಗಳಿಸಿದೆ.

ಮೋದಿ ತನ್ನ  ವಿಜಯ ಭಾಷಣದಲ್ಲಿ ಉತ್ತರ ಪ್ರದೇಶವನ್ನು ಒಮ್ಮೆಯೂ ಪ್ರಸ್ತಾಪಿಸಿಲ್ಲ. 2019 ರಲ್ಲಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ ಈ ಬಾರಿ ತನ್ನ ‘400 ಪಾರ್’ ಗುರಿಯನ್ನು ತಲುಪಲು ಏನು ಅಡ್ಡಿಯಾಯಿತು ಎಂಬುವುದರ ಕುರಿತು ಏನನ್ನೂ ಹೇಳಿಲ್ಲ.

ನಮ್ಮ ವಿರೋಧಿಗಳು ಎಲ್ಲರೂ ಒಗ್ಗೂಡಿದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ ಎಂದಷ್ಟೇ ಹೇಳಿ ಮೋದಿ ಜಾರಿಕೊಂಡಿದ್ದಾರೆ.

ಬಿಜೆಪಿಯ ಮತ್ತೊಂದು ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದ ಬಗ್ಗೆಯೂ ಯಾವುದೇ ಪ್ರಸ್ತಾಪವನ್ನು ಮೋದಿ ತನ್ನ ಭಾಷಣದಲ್ಲಿ ಮಾಡಿಲ್ಲ. ಅಲ್ಲಿ ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಒಡೆದು ಹೋದ ಬಣಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಮುನ್ನಡೆ ಸಾಧಿಸಲು ವಿಫಲವಾಗಿದೆ.

ಎರಡನೇ ದೊಡ್ಡ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪಕ್ಷ ವಿಭಜನೆ, ಹೆಸರು ಮತ್ತು ಚಿಹ್ನೆ ಬದಲಾವಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ಬಿಜೆಪಿಗೆ ಮುಳುವಾಗಿದೆ. ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ರಾಜ್ಯದ 48 ಸ್ಥಾನಗಳಲ್ಲಿ 30ನ್ನು ಗೆದ್ದಿದೆ.

ಮಾಹಾರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಛತ್ರಪತಿ ಶಿವಾಜಿಯ 350ನೇ ಜನ್ಮದಿವನ್ನು ಆಚರಿಸುವ ಕುರಿತು ಮಾತ್ರ ಮೋದಿ ಪ್ರಸ್ತಾಪಿಸಿದ್ದು, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಮಾರ್ಗದರ್ಶಕರಾಗಿದ್ದಾರೆ ಮತ್ತು ಅವರ 350ನೇ ಜನ್ಮ ದಿನಾಚರಣೆ ಈ ವರ್ಷ ಬರಲಿದೆ ಎಂದು ಮಾತ್ರ ಹೇಳಿದ್ದಾರೆ.

ಒಡಿಶ್ಶಾದಲ್ಲಿ ಗೆಲುವು ದಾಖಲಿಸಿದ್ದಕ್ಕೆ ಮೋದಿ ಜೈ ಜಗನ್ನಾಥ ಎಂದು ಹೇಳಿದ್ದಾರೆ ಅಂದುಕೊಂಡರೂ, ಅವರು ಇದುವರೆಗೆ ಚುನಾವಣೆಯ ಅಸ್ತ್ರವಾಗಿಸಿದ್ದ ಜೈಶ್ರೀರಾಮ್ ಘೋಷಣೆ, ತನ್ನ ಆಪ್ತ ಯೋಗಿಯ ಉತ್ತರ ಪ್ರದೇಶದ ಬಗ್ಗೆ ಉಲ್ಲೇಖಿಸದಿರುವುದು ವಿಶೇಷ.

ಇದನ್ನೂ ಓದಿ : ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...