HomeUncategorizedಜೈ ಶ್ರೀರಾಮ್ ಬದಲು 'ಜೈ ಜಗನ್ನಾಥ್'..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

ಜೈ ಶ್ರೀರಾಮ್ ಬದಲು ‘ಜೈ ಜಗನ್ನಾಥ್’..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ.

ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ ವಿಜಯ ಭಾಷಣದಲ್ಲಿ ‘ಜೈ ಜಗನ್ನಾಥ್’ ಎಂದು ಹೇಳುವ ಮೂಲಕ ತನ್ನ ಡೈಲಾಗ್ ಬದಲಾಯಿಸಿಕೊಂಡಿದ್ದರು. ಅಲ್ಲದೆ, ತನ್ನ ಭಾಷಣದಲ್ಲಿ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದ ಕುರಿತು ಮಾತೇ ಎತ್ತಿಲ್ಲ.

“ಭಾರತ್ ಮಾತಾ ಕಿ ಜೈ” ಮತ್ತು “ಜೈ ಜಗನ್ನಾಥ್” ಎಂದು ಹೇಳುವ ಮೂಲಕ ಮೋದಿ 34 ನಿಮಿಷಗಳ ತನ್ನ ಭಾಷಣ ಪ್ರಾರಂಭಿಸಿದರು. ಮುಂದೆ ಸೇರಿದ್ದ ಜನರು ಜೈ ಶ್ರೀರಾಮ್ ಎಂದರೂ, ಮೋದಿ ಆ ಘೋಷಣೆ ಕೂಗಿಲ್ಲ.

ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವಾಗಿದ್ದ ರಾಮ ಮಂದಿರವನ್ನು ನಿರ್ಮಾಣ ಮಾಡಿದರೂ, ಈ ಬಾರಿಯ ಚುನಾವಣೆಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಮಾಜವಾದಿ ಪಕ್ಷದ ದಲಿತ ನಾಯಕ ಅವಧೇಶ್ ಪ್ರಸಾದ್ ಗೆದ್ದಿದ್ದಾರೆ.

ಒಡಿಶಾದಲ್ಲಿ ಬಿಜೆಪಿ ತನ್ನ ಮೊದಲ ರಾಜ್ಯ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಅಲ್ಲಿ ವಿಧಾನಸಭೆಯ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆಡಳಿತರೂಢ ಬಿಜು ಜನತಾ ದಳ (ಬಿಜೆಡಿ) 51 ಸ್ಥಾನಗಳಿಗೆ ಇಳಿದಿದೆ ಮತ್ತು ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ 2000 ದಿಂದ ಅಧಿಕಾರದಲ್ಲಿರುವ ನವೀನ್ ಪಟ್ನಾಯಕ್ ಅಧಿಕಾರ ಕೊನೆಗೊಂಡಿದೆ.

ಲೋಕಸಭೆ ಚುನಾವಣೆಯ ವಿಷಯಕ್ಕೆ ಬಂದರೆ, 2014 ಮತ್ತು 2019ರಲ್ಲಿ ಒಡಿಶಾದಲ್ಲಿ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ, 2024ರ ಚುನಾವಣೆಯಲ್ಲಿ 21 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ. ಆಡಳಿತರೂಢ ಬಿಜೆಡಿ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ.

ಮೋದಿ ತಮ್ಮ ಭಾಷಣದಲ್ಲಿ ಒಡಿಶಾ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಕೇರಳ, ಬಿಹಾರ ಮತ್ತು ವಿಧಾನಸಭೆ ಚುನಾವಣೆಗಳನ್ನು ಗೆದ್ದಿರುವ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಅನ್ನು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿಯ ಪ್ರಮುಖ ರಾಜ್ಯ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಬಗ್ಗೆ ಮಾತೆತಿಲ್ಲ.

“1962ರ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರ ತನ್ನ ಎರಡು ಅವಧಿಗಳನ್ನು ಪೂರ್ಣಗೊಳಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ನನ್ನ ಬಳಿ ವಿವರಗಳಿಲ್ಲ. ಆದರೆ, ಅವರು ತಮ್ಮ ಠೇವಣಿಯನ್ನೂ ಉಳಿಸಿಕೊಂಡಿಲ್ಲ ಅನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಸ್ತಾಪವಿಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಬದಲಾವಣೆಯು ಉತ್ತರ ಪ್ರದೇಶದಲ್ಲಿ ಆಗಿದೆ. ಅಲ್ಲಿ ಬಿಜೆಪಿ ತನ್ನ ಗುರಿಯಾದ “400 ಪಾರ್” ತಲುಪಲು 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. 2019ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದರೆ ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ಇಂಡಿಯಾ ಮೂತ್ರಿಕೂಟದ ಮುಂದೆ ಬಿಜೆಪಿ ಮಂಕಾಗಿದೆ.

ಎನ್‌ಡಿಎ (ಬಿಜೆಪಿ ಮತ್ತು ಆರ್‌ಎಲ್‌ಡಿ) ಕೇವಲ 35 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಏಕಾಂಗಿಯಾಗಿ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 33, ಕಾಂಗ್ರೆಸ್ 6, ಆರ್‌ಎಲ್‌ಡಿ 2 ಮತ್ತು ಅಪ್ನಾ ದಳ (ಸೋನಿಲಾಲ್) ಮತ್ತು ಆಜಾದ್ ಸಮಾಜ ಪಕ್ಷ ತಲಾ 1 ಸ್ಥಾನ ಗಳಿಸಿದೆ.

ಮೋದಿ ತನ್ನ  ವಿಜಯ ಭಾಷಣದಲ್ಲಿ ಉತ್ತರ ಪ್ರದೇಶವನ್ನು ಒಮ್ಮೆಯೂ ಪ್ರಸ್ತಾಪಿಸಿಲ್ಲ. 2019 ರಲ್ಲಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ ಈ ಬಾರಿ ತನ್ನ ‘400 ಪಾರ್’ ಗುರಿಯನ್ನು ತಲುಪಲು ಏನು ಅಡ್ಡಿಯಾಯಿತು ಎಂಬುವುದರ ಕುರಿತು ಏನನ್ನೂ ಹೇಳಿಲ್ಲ.

ನಮ್ಮ ವಿರೋಧಿಗಳು ಎಲ್ಲರೂ ಒಗ್ಗೂಡಿದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ ಎಂದಷ್ಟೇ ಹೇಳಿ ಮೋದಿ ಜಾರಿಕೊಂಡಿದ್ದಾರೆ.

ಬಿಜೆಪಿಯ ಮತ್ತೊಂದು ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದ ಬಗ್ಗೆಯೂ ಯಾವುದೇ ಪ್ರಸ್ತಾಪವನ್ನು ಮೋದಿ ತನ್ನ ಭಾಷಣದಲ್ಲಿ ಮಾಡಿಲ್ಲ. ಅಲ್ಲಿ ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಒಡೆದು ಹೋದ ಬಣಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಮುನ್ನಡೆ ಸಾಧಿಸಲು ವಿಫಲವಾಗಿದೆ.

ಎರಡನೇ ದೊಡ್ಡ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪಕ್ಷ ವಿಭಜನೆ, ಹೆಸರು ಮತ್ತು ಚಿಹ್ನೆ ಬದಲಾವಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ಬಿಜೆಪಿಗೆ ಮುಳುವಾಗಿದೆ. ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ರಾಜ್ಯದ 48 ಸ್ಥಾನಗಳಲ್ಲಿ 30ನ್ನು ಗೆದ್ದಿದೆ.

ಮಾಹಾರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಛತ್ರಪತಿ ಶಿವಾಜಿಯ 350ನೇ ಜನ್ಮದಿವನ್ನು ಆಚರಿಸುವ ಕುರಿತು ಮಾತ್ರ ಮೋದಿ ಪ್ರಸ್ತಾಪಿಸಿದ್ದು, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಮಾರ್ಗದರ್ಶಕರಾಗಿದ್ದಾರೆ ಮತ್ತು ಅವರ 350ನೇ ಜನ್ಮ ದಿನಾಚರಣೆ ಈ ವರ್ಷ ಬರಲಿದೆ ಎಂದು ಮಾತ್ರ ಹೇಳಿದ್ದಾರೆ.

ಒಡಿಶ್ಶಾದಲ್ಲಿ ಗೆಲುವು ದಾಖಲಿಸಿದ್ದಕ್ಕೆ ಮೋದಿ ಜೈ ಜಗನ್ನಾಥ ಎಂದು ಹೇಳಿದ್ದಾರೆ ಅಂದುಕೊಂಡರೂ, ಅವರು ಇದುವರೆಗೆ ಚುನಾವಣೆಯ ಅಸ್ತ್ರವಾಗಿಸಿದ್ದ ಜೈಶ್ರೀರಾಮ್ ಘೋಷಣೆ, ತನ್ನ ಆಪ್ತ ಯೋಗಿಯ ಉತ್ತರ ಪ್ರದೇಶದ ಬಗ್ಗೆ ಉಲ್ಲೇಖಿಸದಿರುವುದು ವಿಶೇಷ.

ಇದನ್ನೂ ಓದಿ : ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...