HomeUncategorizedಜೈ ಶ್ರೀರಾಮ್ ಬದಲು 'ಜೈ ಜಗನ್ನಾಥ್'..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

ಜೈ ಶ್ರೀರಾಮ್ ಬದಲು ‘ಜೈ ಜಗನ್ನಾಥ್’..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ.

ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ ವಿಜಯ ಭಾಷಣದಲ್ಲಿ ‘ಜೈ ಜಗನ್ನಾಥ್’ ಎಂದು ಹೇಳುವ ಮೂಲಕ ತನ್ನ ಡೈಲಾಗ್ ಬದಲಾಯಿಸಿಕೊಂಡಿದ್ದರು. ಅಲ್ಲದೆ, ತನ್ನ ಭಾಷಣದಲ್ಲಿ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದ ಕುರಿತು ಮಾತೇ ಎತ್ತಿಲ್ಲ.

“ಭಾರತ್ ಮಾತಾ ಕಿ ಜೈ” ಮತ್ತು “ಜೈ ಜಗನ್ನಾಥ್” ಎಂದು ಹೇಳುವ ಮೂಲಕ ಮೋದಿ 34 ನಿಮಿಷಗಳ ತನ್ನ ಭಾಷಣ ಪ್ರಾರಂಭಿಸಿದರು. ಮುಂದೆ ಸೇರಿದ್ದ ಜನರು ಜೈ ಶ್ರೀರಾಮ್ ಎಂದರೂ, ಮೋದಿ ಆ ಘೋಷಣೆ ಕೂಗಿಲ್ಲ.

ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವಾಗಿದ್ದ ರಾಮ ಮಂದಿರವನ್ನು ನಿರ್ಮಾಣ ಮಾಡಿದರೂ, ಈ ಬಾರಿಯ ಚುನಾವಣೆಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಮಾಜವಾದಿ ಪಕ್ಷದ ದಲಿತ ನಾಯಕ ಅವಧೇಶ್ ಪ್ರಸಾದ್ ಗೆದ್ದಿದ್ದಾರೆ.

ಒಡಿಶಾದಲ್ಲಿ ಬಿಜೆಪಿ ತನ್ನ ಮೊದಲ ರಾಜ್ಯ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಅಲ್ಲಿ ವಿಧಾನಸಭೆಯ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆಡಳಿತರೂಢ ಬಿಜು ಜನತಾ ದಳ (ಬಿಜೆಡಿ) 51 ಸ್ಥಾನಗಳಿಗೆ ಇಳಿದಿದೆ ಮತ್ತು ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ 2000 ದಿಂದ ಅಧಿಕಾರದಲ್ಲಿರುವ ನವೀನ್ ಪಟ್ನಾಯಕ್ ಅಧಿಕಾರ ಕೊನೆಗೊಂಡಿದೆ.

ಲೋಕಸಭೆ ಚುನಾವಣೆಯ ವಿಷಯಕ್ಕೆ ಬಂದರೆ, 2014 ಮತ್ತು 2019ರಲ್ಲಿ ಒಡಿಶಾದಲ್ಲಿ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ, 2024ರ ಚುನಾವಣೆಯಲ್ಲಿ 21 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ. ಆಡಳಿತರೂಢ ಬಿಜೆಡಿ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ.

ಮೋದಿ ತಮ್ಮ ಭಾಷಣದಲ್ಲಿ ಒಡಿಶಾ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಕೇರಳ, ಬಿಹಾರ ಮತ್ತು ವಿಧಾನಸಭೆ ಚುನಾವಣೆಗಳನ್ನು ಗೆದ್ದಿರುವ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಅನ್ನು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿಯ ಪ್ರಮುಖ ರಾಜ್ಯ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಬಗ್ಗೆ ಮಾತೆತಿಲ್ಲ.

“1962ರ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರ ತನ್ನ ಎರಡು ಅವಧಿಗಳನ್ನು ಪೂರ್ಣಗೊಳಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ನನ್ನ ಬಳಿ ವಿವರಗಳಿಲ್ಲ. ಆದರೆ, ಅವರು ತಮ್ಮ ಠೇವಣಿಯನ್ನೂ ಉಳಿಸಿಕೊಂಡಿಲ್ಲ ಅನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಸ್ತಾಪವಿಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಬದಲಾವಣೆಯು ಉತ್ತರ ಪ್ರದೇಶದಲ್ಲಿ ಆಗಿದೆ. ಅಲ್ಲಿ ಬಿಜೆಪಿ ತನ್ನ ಗುರಿಯಾದ “400 ಪಾರ್” ತಲುಪಲು 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. 2019ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದರೆ ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ಇಂಡಿಯಾ ಮೂತ್ರಿಕೂಟದ ಮುಂದೆ ಬಿಜೆಪಿ ಮಂಕಾಗಿದೆ.

ಎನ್‌ಡಿಎ (ಬಿಜೆಪಿ ಮತ್ತು ಆರ್‌ಎಲ್‌ಡಿ) ಕೇವಲ 35 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಏಕಾಂಗಿಯಾಗಿ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 33, ಕಾಂಗ್ರೆಸ್ 6, ಆರ್‌ಎಲ್‌ಡಿ 2 ಮತ್ತು ಅಪ್ನಾ ದಳ (ಸೋನಿಲಾಲ್) ಮತ್ತು ಆಜಾದ್ ಸಮಾಜ ಪಕ್ಷ ತಲಾ 1 ಸ್ಥಾನ ಗಳಿಸಿದೆ.

ಮೋದಿ ತನ್ನ  ವಿಜಯ ಭಾಷಣದಲ್ಲಿ ಉತ್ತರ ಪ್ರದೇಶವನ್ನು ಒಮ್ಮೆಯೂ ಪ್ರಸ್ತಾಪಿಸಿಲ್ಲ. 2019 ರಲ್ಲಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ ಈ ಬಾರಿ ತನ್ನ ‘400 ಪಾರ್’ ಗುರಿಯನ್ನು ತಲುಪಲು ಏನು ಅಡ್ಡಿಯಾಯಿತು ಎಂಬುವುದರ ಕುರಿತು ಏನನ್ನೂ ಹೇಳಿಲ್ಲ.

ನಮ್ಮ ವಿರೋಧಿಗಳು ಎಲ್ಲರೂ ಒಗ್ಗೂಡಿದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ ಎಂದಷ್ಟೇ ಹೇಳಿ ಮೋದಿ ಜಾರಿಕೊಂಡಿದ್ದಾರೆ.

ಬಿಜೆಪಿಯ ಮತ್ತೊಂದು ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದ ಬಗ್ಗೆಯೂ ಯಾವುದೇ ಪ್ರಸ್ತಾಪವನ್ನು ಮೋದಿ ತನ್ನ ಭಾಷಣದಲ್ಲಿ ಮಾಡಿಲ್ಲ. ಅಲ್ಲಿ ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಒಡೆದು ಹೋದ ಬಣಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಮುನ್ನಡೆ ಸಾಧಿಸಲು ವಿಫಲವಾಗಿದೆ.

ಎರಡನೇ ದೊಡ್ಡ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪಕ್ಷ ವಿಭಜನೆ, ಹೆಸರು ಮತ್ತು ಚಿಹ್ನೆ ಬದಲಾವಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ಬಿಜೆಪಿಗೆ ಮುಳುವಾಗಿದೆ. ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ರಾಜ್ಯದ 48 ಸ್ಥಾನಗಳಲ್ಲಿ 30ನ್ನು ಗೆದ್ದಿದೆ.

ಮಾಹಾರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಛತ್ರಪತಿ ಶಿವಾಜಿಯ 350ನೇ ಜನ್ಮದಿವನ್ನು ಆಚರಿಸುವ ಕುರಿತು ಮಾತ್ರ ಮೋದಿ ಪ್ರಸ್ತಾಪಿಸಿದ್ದು, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಮಾರ್ಗದರ್ಶಕರಾಗಿದ್ದಾರೆ ಮತ್ತು ಅವರ 350ನೇ ಜನ್ಮ ದಿನಾಚರಣೆ ಈ ವರ್ಷ ಬರಲಿದೆ ಎಂದು ಮಾತ್ರ ಹೇಳಿದ್ದಾರೆ.

ಒಡಿಶ್ಶಾದಲ್ಲಿ ಗೆಲುವು ದಾಖಲಿಸಿದ್ದಕ್ಕೆ ಮೋದಿ ಜೈ ಜಗನ್ನಾಥ ಎಂದು ಹೇಳಿದ್ದಾರೆ ಅಂದುಕೊಂಡರೂ, ಅವರು ಇದುವರೆಗೆ ಚುನಾವಣೆಯ ಅಸ್ತ್ರವಾಗಿಸಿದ್ದ ಜೈಶ್ರೀರಾಮ್ ಘೋಷಣೆ, ತನ್ನ ಆಪ್ತ ಯೋಗಿಯ ಉತ್ತರ ಪ್ರದೇಶದ ಬಗ್ಗೆ ಉಲ್ಲೇಖಿಸದಿರುವುದು ವಿಶೇಷ.

ಇದನ್ನೂ ಓದಿ : ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...