HomeUncategorizedಜೈ ಶ್ರೀರಾಮ್ ಬದಲು 'ಜೈ ಜಗನ್ನಾಥ್'..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

ಜೈ ಶ್ರೀರಾಮ್ ಬದಲು ‘ಜೈ ಜಗನ್ನಾಥ್’..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ.

ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ ವಿಜಯ ಭಾಷಣದಲ್ಲಿ ‘ಜೈ ಜಗನ್ನಾಥ್’ ಎಂದು ಹೇಳುವ ಮೂಲಕ ತನ್ನ ಡೈಲಾಗ್ ಬದಲಾಯಿಸಿಕೊಂಡಿದ್ದರು. ಅಲ್ಲದೆ, ತನ್ನ ಭಾಷಣದಲ್ಲಿ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದ ಕುರಿತು ಮಾತೇ ಎತ್ತಿಲ್ಲ.

“ಭಾರತ್ ಮಾತಾ ಕಿ ಜೈ” ಮತ್ತು “ಜೈ ಜಗನ್ನಾಥ್” ಎಂದು ಹೇಳುವ ಮೂಲಕ ಮೋದಿ 34 ನಿಮಿಷಗಳ ತನ್ನ ಭಾಷಣ ಪ್ರಾರಂಭಿಸಿದರು. ಮುಂದೆ ಸೇರಿದ್ದ ಜನರು ಜೈ ಶ್ರೀರಾಮ್ ಎಂದರೂ, ಮೋದಿ ಆ ಘೋಷಣೆ ಕೂಗಿಲ್ಲ.

ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವಾಗಿದ್ದ ರಾಮ ಮಂದಿರವನ್ನು ನಿರ್ಮಾಣ ಮಾಡಿದರೂ, ಈ ಬಾರಿಯ ಚುನಾವಣೆಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಮಾಜವಾದಿ ಪಕ್ಷದ ದಲಿತ ನಾಯಕ ಅವಧೇಶ್ ಪ್ರಸಾದ್ ಗೆದ್ದಿದ್ದಾರೆ.

ಒಡಿಶಾದಲ್ಲಿ ಬಿಜೆಪಿ ತನ್ನ ಮೊದಲ ರಾಜ್ಯ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಅಲ್ಲಿ ವಿಧಾನಸಭೆಯ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆಡಳಿತರೂಢ ಬಿಜು ಜನತಾ ದಳ (ಬಿಜೆಡಿ) 51 ಸ್ಥಾನಗಳಿಗೆ ಇಳಿದಿದೆ ಮತ್ತು ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ 2000 ದಿಂದ ಅಧಿಕಾರದಲ್ಲಿರುವ ನವೀನ್ ಪಟ್ನಾಯಕ್ ಅಧಿಕಾರ ಕೊನೆಗೊಂಡಿದೆ.

ಲೋಕಸಭೆ ಚುನಾವಣೆಯ ವಿಷಯಕ್ಕೆ ಬಂದರೆ, 2014 ಮತ್ತು 2019ರಲ್ಲಿ ಒಡಿಶಾದಲ್ಲಿ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ, 2024ರ ಚುನಾವಣೆಯಲ್ಲಿ 21 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ. ಆಡಳಿತರೂಢ ಬಿಜೆಡಿ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ.

ಮೋದಿ ತಮ್ಮ ಭಾಷಣದಲ್ಲಿ ಒಡಿಶಾ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಕೇರಳ, ಬಿಹಾರ ಮತ್ತು ವಿಧಾನಸಭೆ ಚುನಾವಣೆಗಳನ್ನು ಗೆದ್ದಿರುವ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಅನ್ನು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿಯ ಪ್ರಮುಖ ರಾಜ್ಯ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಬಗ್ಗೆ ಮಾತೆತಿಲ್ಲ.

“1962ರ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರ ತನ್ನ ಎರಡು ಅವಧಿಗಳನ್ನು ಪೂರ್ಣಗೊಳಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ನನ್ನ ಬಳಿ ವಿವರಗಳಿಲ್ಲ. ಆದರೆ, ಅವರು ತಮ್ಮ ಠೇವಣಿಯನ್ನೂ ಉಳಿಸಿಕೊಂಡಿಲ್ಲ ಅನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಸ್ತಾಪವಿಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಬದಲಾವಣೆಯು ಉತ್ತರ ಪ್ರದೇಶದಲ್ಲಿ ಆಗಿದೆ. ಅಲ್ಲಿ ಬಿಜೆಪಿ ತನ್ನ ಗುರಿಯಾದ “400 ಪಾರ್” ತಲುಪಲು 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. 2019ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದರೆ ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ಇಂಡಿಯಾ ಮೂತ್ರಿಕೂಟದ ಮುಂದೆ ಬಿಜೆಪಿ ಮಂಕಾಗಿದೆ.

ಎನ್‌ಡಿಎ (ಬಿಜೆಪಿ ಮತ್ತು ಆರ್‌ಎಲ್‌ಡಿ) ಕೇವಲ 35 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಏಕಾಂಗಿಯಾಗಿ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 33, ಕಾಂಗ್ರೆಸ್ 6, ಆರ್‌ಎಲ್‌ಡಿ 2 ಮತ್ತು ಅಪ್ನಾ ದಳ (ಸೋನಿಲಾಲ್) ಮತ್ತು ಆಜಾದ್ ಸಮಾಜ ಪಕ್ಷ ತಲಾ 1 ಸ್ಥಾನ ಗಳಿಸಿದೆ.

ಮೋದಿ ತನ್ನ  ವಿಜಯ ಭಾಷಣದಲ್ಲಿ ಉತ್ತರ ಪ್ರದೇಶವನ್ನು ಒಮ್ಮೆಯೂ ಪ್ರಸ್ತಾಪಿಸಿಲ್ಲ. 2019 ರಲ್ಲಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ ಈ ಬಾರಿ ತನ್ನ ‘400 ಪಾರ್’ ಗುರಿಯನ್ನು ತಲುಪಲು ಏನು ಅಡ್ಡಿಯಾಯಿತು ಎಂಬುವುದರ ಕುರಿತು ಏನನ್ನೂ ಹೇಳಿಲ್ಲ.

ನಮ್ಮ ವಿರೋಧಿಗಳು ಎಲ್ಲರೂ ಒಗ್ಗೂಡಿದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ ಎಂದಷ್ಟೇ ಹೇಳಿ ಮೋದಿ ಜಾರಿಕೊಂಡಿದ್ದಾರೆ.

ಬಿಜೆಪಿಯ ಮತ್ತೊಂದು ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದ ಬಗ್ಗೆಯೂ ಯಾವುದೇ ಪ್ರಸ್ತಾಪವನ್ನು ಮೋದಿ ತನ್ನ ಭಾಷಣದಲ್ಲಿ ಮಾಡಿಲ್ಲ. ಅಲ್ಲಿ ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಒಡೆದು ಹೋದ ಬಣಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಮುನ್ನಡೆ ಸಾಧಿಸಲು ವಿಫಲವಾಗಿದೆ.

ಎರಡನೇ ದೊಡ್ಡ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪಕ್ಷ ವಿಭಜನೆ, ಹೆಸರು ಮತ್ತು ಚಿಹ್ನೆ ಬದಲಾವಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ಬಿಜೆಪಿಗೆ ಮುಳುವಾಗಿದೆ. ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ರಾಜ್ಯದ 48 ಸ್ಥಾನಗಳಲ್ಲಿ 30ನ್ನು ಗೆದ್ದಿದೆ.

ಮಾಹಾರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಛತ್ರಪತಿ ಶಿವಾಜಿಯ 350ನೇ ಜನ್ಮದಿವನ್ನು ಆಚರಿಸುವ ಕುರಿತು ಮಾತ್ರ ಮೋದಿ ಪ್ರಸ್ತಾಪಿಸಿದ್ದು, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಮಾರ್ಗದರ್ಶಕರಾಗಿದ್ದಾರೆ ಮತ್ತು ಅವರ 350ನೇ ಜನ್ಮ ದಿನಾಚರಣೆ ಈ ವರ್ಷ ಬರಲಿದೆ ಎಂದು ಮಾತ್ರ ಹೇಳಿದ್ದಾರೆ.

ಒಡಿಶ್ಶಾದಲ್ಲಿ ಗೆಲುವು ದಾಖಲಿಸಿದ್ದಕ್ಕೆ ಮೋದಿ ಜೈ ಜಗನ್ನಾಥ ಎಂದು ಹೇಳಿದ್ದಾರೆ ಅಂದುಕೊಂಡರೂ, ಅವರು ಇದುವರೆಗೆ ಚುನಾವಣೆಯ ಅಸ್ತ್ರವಾಗಿಸಿದ್ದ ಜೈಶ್ರೀರಾಮ್ ಘೋಷಣೆ, ತನ್ನ ಆಪ್ತ ಯೋಗಿಯ ಉತ್ತರ ಪ್ರದೇಶದ ಬಗ್ಗೆ ಉಲ್ಲೇಖಿಸದಿರುವುದು ವಿಶೇಷ.

ಇದನ್ನೂ ಓದಿ : ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...