HomeUncategorizedಜೈ ಶ್ರೀರಾಮ್ ಬದಲು 'ಜೈ ಜಗನ್ನಾಥ್'..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

ಜೈ ಶ್ರೀರಾಮ್ ಬದಲು ‘ಜೈ ಜಗನ್ನಾಥ್’..ವಿಜಯ ಭಾಷಣದಲ್ಲಿ ಯುಪಿ, ಮಹಾರಾಷ್ಟ್ರದ ಹೆಸರೇ ಎತ್ತದ ಮೋದಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ.

ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ ವಿಜಯ ಭಾಷಣದಲ್ಲಿ ‘ಜೈ ಜಗನ್ನಾಥ್’ ಎಂದು ಹೇಳುವ ಮೂಲಕ ತನ್ನ ಡೈಲಾಗ್ ಬದಲಾಯಿಸಿಕೊಂಡಿದ್ದರು. ಅಲ್ಲದೆ, ತನ್ನ ಭಾಷಣದಲ್ಲಿ ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದ ಕುರಿತು ಮಾತೇ ಎತ್ತಿಲ್ಲ.

“ಭಾರತ್ ಮಾತಾ ಕಿ ಜೈ” ಮತ್ತು “ಜೈ ಜಗನ್ನಾಥ್” ಎಂದು ಹೇಳುವ ಮೂಲಕ ಮೋದಿ 34 ನಿಮಿಷಗಳ ತನ್ನ ಭಾಷಣ ಪ್ರಾರಂಭಿಸಿದರು. ಮುಂದೆ ಸೇರಿದ್ದ ಜನರು ಜೈ ಶ್ರೀರಾಮ್ ಎಂದರೂ, ಮೋದಿ ಆ ಘೋಷಣೆ ಕೂಗಿಲ್ಲ.

ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವಾಗಿದ್ದ ರಾಮ ಮಂದಿರವನ್ನು ನಿರ್ಮಾಣ ಮಾಡಿದರೂ, ಈ ಬಾರಿಯ ಚುನಾವಣೆಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಮಾಜವಾದಿ ಪಕ್ಷದ ದಲಿತ ನಾಯಕ ಅವಧೇಶ್ ಪ್ರಸಾದ್ ಗೆದ್ದಿದ್ದಾರೆ.

ಒಡಿಶಾದಲ್ಲಿ ಬಿಜೆಪಿ ತನ್ನ ಮೊದಲ ರಾಜ್ಯ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಅಲ್ಲಿ ವಿಧಾನಸಭೆಯ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆಡಳಿತರೂಢ ಬಿಜು ಜನತಾ ದಳ (ಬಿಜೆಡಿ) 51 ಸ್ಥಾನಗಳಿಗೆ ಇಳಿದಿದೆ ಮತ್ತು ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜ್ಯದಲ್ಲಿ 2000 ದಿಂದ ಅಧಿಕಾರದಲ್ಲಿರುವ ನವೀನ್ ಪಟ್ನಾಯಕ್ ಅಧಿಕಾರ ಕೊನೆಗೊಂಡಿದೆ.

ಲೋಕಸಭೆ ಚುನಾವಣೆಯ ವಿಷಯಕ್ಕೆ ಬಂದರೆ, 2014 ಮತ್ತು 2019ರಲ್ಲಿ ಒಡಿಶಾದಲ್ಲಿ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ, 2024ರ ಚುನಾವಣೆಯಲ್ಲಿ 21 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ. ಆಡಳಿತರೂಢ ಬಿಜೆಡಿ ಒಂದು ಸ್ಥಾನವನ್ನು ಗೆಲ್ಲಲೂ ವಿಫಲವಾಗಿದೆ.

ಮೋದಿ ತಮ್ಮ ಭಾಷಣದಲ್ಲಿ ಒಡಿಶಾ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಕೇರಳ, ಬಿಹಾರ ಮತ್ತು ವಿಧಾನಸಭೆ ಚುನಾವಣೆಗಳನ್ನು ಗೆದ್ದಿರುವ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಅನ್ನು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿಯ ಪ್ರಮುಖ ರಾಜ್ಯ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಬಗ್ಗೆ ಮಾತೆತಿಲ್ಲ.

“1962ರ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರ ತನ್ನ ಎರಡು ಅವಧಿಗಳನ್ನು ಪೂರ್ಣಗೊಳಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ನನ್ನ ಬಳಿ ವಿವರಗಳಿಲ್ಲ. ಆದರೆ, ಅವರು ತಮ್ಮ ಠೇವಣಿಯನ್ನೂ ಉಳಿಸಿಕೊಂಡಿಲ್ಲ ಅನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಸ್ತಾಪವಿಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ನಿರ್ಣಾಯಕ ಬದಲಾವಣೆಯು ಉತ್ತರ ಪ್ರದೇಶದಲ್ಲಿ ಆಗಿದೆ. ಅಲ್ಲಿ ಬಿಜೆಪಿ ತನ್ನ ಗುರಿಯಾದ “400 ಪಾರ್” ತಲುಪಲು 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. 2019ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದರೆ ಈ ಬಾರಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ಇಂಡಿಯಾ ಮೂತ್ರಿಕೂಟದ ಮುಂದೆ ಬಿಜೆಪಿ ಮಂಕಾಗಿದೆ.

ಎನ್‌ಡಿಎ (ಬಿಜೆಪಿ ಮತ್ತು ಆರ್‌ಎಲ್‌ಡಿ) ಕೇವಲ 35 ಸ್ಥಾನಗಳನ್ನು ಗೆದ್ದರೆ, ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷ ಏಕಾಂಗಿಯಾಗಿ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 33, ಕಾಂಗ್ರೆಸ್ 6, ಆರ್‌ಎಲ್‌ಡಿ 2 ಮತ್ತು ಅಪ್ನಾ ದಳ (ಸೋನಿಲಾಲ್) ಮತ್ತು ಆಜಾದ್ ಸಮಾಜ ಪಕ್ಷ ತಲಾ 1 ಸ್ಥಾನ ಗಳಿಸಿದೆ.

ಮೋದಿ ತನ್ನ  ವಿಜಯ ಭಾಷಣದಲ್ಲಿ ಉತ್ತರ ಪ್ರದೇಶವನ್ನು ಒಮ್ಮೆಯೂ ಪ್ರಸ್ತಾಪಿಸಿಲ್ಲ. 2019 ರಲ್ಲಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದ ಬಿಜೆಪಿ ಈ ಬಾರಿ ತನ್ನ ‘400 ಪಾರ್’ ಗುರಿಯನ್ನು ತಲುಪಲು ಏನು ಅಡ್ಡಿಯಾಯಿತು ಎಂಬುವುದರ ಕುರಿತು ಏನನ್ನೂ ಹೇಳಿಲ್ಲ.

ನಮ್ಮ ವಿರೋಧಿಗಳು ಎಲ್ಲರೂ ಒಗ್ಗೂಡಿದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾತ್ರ ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ ಎಂದಷ್ಟೇ ಹೇಳಿ ಮೋದಿ ಜಾರಿಕೊಂಡಿದ್ದಾರೆ.

ಬಿಜೆಪಿಯ ಮತ್ತೊಂದು ಪ್ರಮುಖ ರಾಜ್ಯವಾಗಿರುವ ಮಹಾರಾಷ್ಟ್ರದ ಬಗ್ಗೆಯೂ ಯಾವುದೇ ಪ್ರಸ್ತಾಪವನ್ನು ಮೋದಿ ತನ್ನ ಭಾಷಣದಲ್ಲಿ ಮಾಡಿಲ್ಲ. ಅಲ್ಲಿ ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಒಡೆದು ಹೋದ ಬಣಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಮುನ್ನಡೆ ಸಾಧಿಸಲು ವಿಫಲವಾಗಿದೆ.

ಎರಡನೇ ದೊಡ್ಡ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪಕ್ಷ ವಿಭಜನೆ, ಹೆಸರು ಮತ್ತು ಚಿಹ್ನೆ ಬದಲಾವಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ಬಿಜೆಪಿಗೆ ಮುಳುವಾಗಿದೆ. ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ರಾಜ್ಯದ 48 ಸ್ಥಾನಗಳಲ್ಲಿ 30ನ್ನು ಗೆದ್ದಿದೆ.

ಮಾಹಾರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಛತ್ರಪತಿ ಶಿವಾಜಿಯ 350ನೇ ಜನ್ಮದಿವನ್ನು ಆಚರಿಸುವ ಕುರಿತು ಮಾತ್ರ ಮೋದಿ ಪ್ರಸ್ತಾಪಿಸಿದ್ದು, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಮಾರ್ಗದರ್ಶಕರಾಗಿದ್ದಾರೆ ಮತ್ತು ಅವರ 350ನೇ ಜನ್ಮ ದಿನಾಚರಣೆ ಈ ವರ್ಷ ಬರಲಿದೆ ಎಂದು ಮಾತ್ರ ಹೇಳಿದ್ದಾರೆ.

ಒಡಿಶ್ಶಾದಲ್ಲಿ ಗೆಲುವು ದಾಖಲಿಸಿದ್ದಕ್ಕೆ ಮೋದಿ ಜೈ ಜಗನ್ನಾಥ ಎಂದು ಹೇಳಿದ್ದಾರೆ ಅಂದುಕೊಂಡರೂ, ಅವರು ಇದುವರೆಗೆ ಚುನಾವಣೆಯ ಅಸ್ತ್ರವಾಗಿಸಿದ್ದ ಜೈಶ್ರೀರಾಮ್ ಘೋಷಣೆ, ತನ್ನ ಆಪ್ತ ಯೋಗಿಯ ಉತ್ತರ ಪ್ರದೇಶದ ಬಗ್ಗೆ ಉಲ್ಲೇಖಿಸದಿರುವುದು ವಿಶೇಷ.

ಇದನ್ನೂ ಓದಿ : ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...