Homeಮುಖಪುಟಸಂಸತ್ತಿನಲ್ಲಿ 'ಜೈ ಪ್ಯಾಲೆಸ್ತೀನ್' ಘೋಷಣೆ | ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯದಿಂದ ಸಮನ್ಸ್

ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ | ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯದಿಂದ ಸಮನ್ಸ್

- Advertisement -
- Advertisement -

ಸಂಸತ್ತಿನಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವು ಸಮನ್ಸ್‌ ನೀಡಿದೆ.ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಲೋಕಸಭೆ ಸಂಸದರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರುದಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ

ಜೂನ್‌ ತಿಂಗಳಲ್ಲಿ ಸಂಸತ್ತಿನ ಕೆಳಮನೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಓವೈಸಿ ಅವರು, ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಸಾಂವಿಧಾನಿಕ ಮತ್ತು ಕಾನೂನು ನಂಬಿಕೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ ವಕೀಲ ವೀರೇಂದ್ರ ಗುಪ್ತಾ ಆರೋಪಿಸಿದ್ದಾರೆ. ಅವರು ಜುಲೈನಲ್ಲಿ ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾದ ನಂತರ ಗುಪ್ತಾ ಅವರು ಬರೇಲಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು. ಓವೈಸಿ ಕೂಗಿದ ಘೋಷಣೆಯಿಂದ ತನಗೆ ನೋವಾಗಿದೆ ಎಂದು ವಕೀಲರು ಹೇಳಿದ್ದಾರೆ. ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಧೀಶರು ಜನವರಿ 7 ರಂದು ಓವೈಸಿ ಅವರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಓವೈಸಿ ಅವರು 2004 ರಿಂದ ಹೈದರಾಬಾದ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಜೂನ್ 25 ರಂದು 18 ನೇ ಲೋಕಸಭೆಯಲ್ಲಿ ಹೈದರಾಬಾದ್ ಸಂಸದರಾಗಿ ಓವೈಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಮುತ್ತಿಗೆ ಹಾಕಲ್ಪಟ್ಟ ಪ್ಯಾಲೆಸ್ತೀನ್ ಪ್ರದೇಶದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧದ ವಿರುದ್ಧ “ಜೈ ಪ್ಯಾಲೆಸ್ತೀನ್” ಎಂದು ಹೇಳುವ ಮೂಲಕ ಓವೈಸಿ ಅವರು ತಮ್ಮ ಪ್ರಮಾಣವಚನವನ್ನು ಮುಕ್ತಾಯಗೊಳಿಸಿದ್ದರು.

ಇದರ ನಂತರ ಜೂನ್ 27 ರಂದು, ಅಪರಿಚಿತ ದುಷ್ಕರ್ಮಿಗಳು ಓವೈಸಿ ಅವರ ದೆಹಲಿಯ ಮನೆಗೆ ಧ್ವಂಸಗೊಳಿಸಿದ್ದರು ಮತ್ತು ಪ್ರವೇಶ ದ್ವಾರದಲ್ಲಿ ಮತ್ತು ಮನೆಯ ಗೋಡೆಯ ಮೇಲೆ ಇಸ್ರೇಲ್ ಪರ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಪೋಸ್ಟರ್‌ಗಳಲ್ಲಿ “ನಾನು ಇಸ್ರೇಲ್‌ ಪರ” ಮತ್ತು “ಒವೈಸಿಯನ್ನು ಅಮಾನತುಗೊಳಿಸಿ” ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.

ಇದನ್ನೂ ಓದಿ: ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...