HomeUncategorizedಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ - “ಜೈ ಶ್ರೀರಾಮ್”

ಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ – “ಜೈ ಶ್ರೀರಾಮ್”

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು. ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಭೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿತು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು 15 ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ. ಕ್ಷಣಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ. ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ಧಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲುದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು. ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡೆಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು ಇಲ್ಲಿ (ಭೂಲೋಕದಲ್ಲಿ) ಬದುಕುವುದು ಕಷ್ಟ, ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ವೈದ್ಯರು ಸಲಹೆ ನೀಡಿದರು. ಸೀತೆ ರಾಮನನ್ನು ಕೈಲಾಸಕ್ಕೆ ಕರೆದುಕೊಂಡುಹೋದಳು. ಇಂದಿಗೂ ಗುಂಪುಗಳು ಜೈ ಶ್ರೀರಾಮ್ ಎಂದು ರಾಮನ ಹೆಸರಲ್ಲಿ ನರಮಾನವರ ಮೇಲೆ ಹೊಡೆಯುವ ಒಂದೊಂದು ಏಟುಗಳು ಕೈಲಾಸದ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಮನ ಮೈ ಮೇಲೆ ಪವಾಡದ ರೀತಿಯಲ್ಲಿ ಬೀಳುತ್ತಿದೆ. ಹಾಗಾಗಿ ರಾಮ ಗುಣಮುಖವಾಗದೆ ಆಸ್ಪತ್ರೆಯಲ್ಲಿಯೇ ನರಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...