HomeUncategorizedಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ - “ಜೈ ಶ್ರೀರಾಮ್”

ಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ – “ಜೈ ಶ್ರೀರಾಮ್”

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು. ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಭೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿತು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು 15 ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ. ಕ್ಷಣಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ. ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ಧಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲುದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು. ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡೆಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು ಇಲ್ಲಿ (ಭೂಲೋಕದಲ್ಲಿ) ಬದುಕುವುದು ಕಷ್ಟ, ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ವೈದ್ಯರು ಸಲಹೆ ನೀಡಿದರು. ಸೀತೆ ರಾಮನನ್ನು ಕೈಲಾಸಕ್ಕೆ ಕರೆದುಕೊಂಡುಹೋದಳು. ಇಂದಿಗೂ ಗುಂಪುಗಳು ಜೈ ಶ್ರೀರಾಮ್ ಎಂದು ರಾಮನ ಹೆಸರಲ್ಲಿ ನರಮಾನವರ ಮೇಲೆ ಹೊಡೆಯುವ ಒಂದೊಂದು ಏಟುಗಳು ಕೈಲಾಸದ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಮನ ಮೈ ಮೇಲೆ ಪವಾಡದ ರೀತಿಯಲ್ಲಿ ಬೀಳುತ್ತಿದೆ. ಹಾಗಾಗಿ ರಾಮ ಗುಣಮುಖವಾಗದೆ ಆಸ್ಪತ್ರೆಯಲ್ಲಿಯೇ ನರಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...