HomeUncategorizedಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ - “ಜೈ ಶ್ರೀರಾಮ್”

ಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ – “ಜೈ ಶ್ರೀರಾಮ್”

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು. ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಭೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿತು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು 15 ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ. ಕ್ಷಣಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ. ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ಧಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲುದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು. ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡೆಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು ಇಲ್ಲಿ (ಭೂಲೋಕದಲ್ಲಿ) ಬದುಕುವುದು ಕಷ್ಟ, ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ವೈದ್ಯರು ಸಲಹೆ ನೀಡಿದರು. ಸೀತೆ ರಾಮನನ್ನು ಕೈಲಾಸಕ್ಕೆ ಕರೆದುಕೊಂಡುಹೋದಳು. ಇಂದಿಗೂ ಗುಂಪುಗಳು ಜೈ ಶ್ರೀರಾಮ್ ಎಂದು ರಾಮನ ಹೆಸರಲ್ಲಿ ನರಮಾನವರ ಮೇಲೆ ಹೊಡೆಯುವ ಒಂದೊಂದು ಏಟುಗಳು ಕೈಲಾಸದ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಮನ ಮೈ ಮೇಲೆ ಪವಾಡದ ರೀತಿಯಲ್ಲಿ ಬೀಳುತ್ತಿದೆ. ಹಾಗಾಗಿ ರಾಮ ಗುಣಮುಖವಾಗದೆ ಆಸ್ಪತ್ರೆಯಲ್ಲಿಯೇ ನರಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...