HomeUncategorizedಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ - “ಜೈ ಶ್ರೀರಾಮ್”

ಸರೋವರ್ ಬೆಂಕೀಕೆರೆಯವರ ಸಣ್ಣ ಕಥೆ – “ಜೈ ಶ್ರೀರಾಮ್”

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು. ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಭೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿತು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು 15 ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ. ಕ್ಷಣಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ. ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ಧಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲುದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು. ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡೆಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು ಇಲ್ಲಿ (ಭೂಲೋಕದಲ್ಲಿ) ಬದುಕುವುದು ಕಷ್ಟ, ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ವೈದ್ಯರು ಸಲಹೆ ನೀಡಿದರು. ಸೀತೆ ರಾಮನನ್ನು ಕೈಲಾಸಕ್ಕೆ ಕರೆದುಕೊಂಡುಹೋದಳು. ಇಂದಿಗೂ ಗುಂಪುಗಳು ಜೈ ಶ್ರೀರಾಮ್ ಎಂದು ರಾಮನ ಹೆಸರಲ್ಲಿ ನರಮಾನವರ ಮೇಲೆ ಹೊಡೆಯುವ ಒಂದೊಂದು ಏಟುಗಳು ಕೈಲಾಸದ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಮನ ಮೈ ಮೇಲೆ ಪವಾಡದ ರೀತಿಯಲ್ಲಿ ಬೀಳುತ್ತಿದೆ. ಹಾಗಾಗಿ ರಾಮ ಗುಣಮುಖವಾಗದೆ ಆಸ್ಪತ್ರೆಯಲ್ಲಿಯೇ ನರಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...