Homeಕ್ರೀಡೆಕ್ರಿಕೆಟ್ಪಾಕ್ ಆಟಗಾರ ರಿಜ್ವಾನ್ ಎದುರು 'ಜೈ ಶ್ರೀ ರಾಮ್' ಘೋಷಣೆ ವಿಡಿಯೋ ವೈರಲ್: ಸ್ವೀಕಾರಾರ್ಹವಲ್ಲ ಎಂದ...

ಪಾಕ್ ಆಟಗಾರ ರಿಜ್ವಾನ್ ಎದುರು ‘ಜೈ ಶ್ರೀ ರಾಮ್’ ಘೋಷಣೆ ವಿಡಿಯೋ ವೈರಲ್: ಸ್ವೀಕಾರಾರ್ಹವಲ್ಲ ಎಂದ ಉದಯನಿಧಿ

- Advertisement -
- Advertisement -

ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ ಕೆಲ ಪ್ರೇಕ್ಷಕರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುವ ವೀಡಿಯೊಗಳು ವೈರಲ್‌ ಆಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅಭಿಮಾನಿಗಳ ವರ್ತನೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಉದಯನಿಧಿ ಸ್ಟಾಲಿನ್, ಭಾರತವು ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರ ಜೊತೆ ನಡೆದುಕೊಂಡ ರೀತಿ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ದೇಶವನ್ನು ಒಗ್ಗೂಡಿಸಬೇಕು. ದೇಶಗಳ ನಡುವೆ  ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಪಾಕಿಸ್ತಾನದ ವಿಕೆಟ್‌ ಕೀಪರ್ ಹಾಗೂ ಬ್ಯಾಟರ್ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ಕೊಠಡಿಗೆ ಹಿಂತಿರುಗುತ್ತಿದ್ದಾಗ ಪ್ರೇಕ್ಷಕರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದನ್ನು ವೈರಲ್‌ ವೀಡಿಯೊದಲ್ಲಿ ಕಾಣಬಹುದು.

ಈ ವರ್ಷದ ಆರಂಭದಲ್ಲಿ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದರು, ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದರು.

ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಕ್ರಿಕೆಟ್ ಅಭಿಮಾನಿಗಳ ದುರ್ವರ್ತನೆ ಎಂದು ಕರೆದಿದ್ದಾರೆ.

ಚಲನಚಿತ್ರ ವಿಮರ್ಶಕ ಮತ್ತು ಐಐಟಿ ಹಳೆಯ ವಿದ್ಯಾರ್ಥಿ ವೆಂಕಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳ ವರ್ತನೆ ಖಂಡನೀಯ ಎಂದು ಹೇಳಿದರು. ನೀವು ಆಟಗಾರನನ್ನು ಅವಮಾನಿಸಲು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಿದ್ದರೆ, ನೀವು ಆಟಗಾರನನ್ನು ಮಾತ್ರ ಅವಮಾನಿಸುತ್ತಿಲ್ಲ, ನಮ್ಮ ದೇವರಾದ ರಾಮನನ್ನೂ ಅವಮಾನಿಸಿದ್ದೀರಿ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಪಾಕ್‌ ತಂಡವು ಭಾರತೀಯ ಆಟಗಾರರೊಂದಿಗೆ ತುಂಬಾ ಸ್ನೇಹಪರರಾಗಿದ್ದಾರೆ ಮತ್ತು ರಿಜ್ವಾನ್ ಸ್ವತಃ ಒಳ್ಳೆಯ ಮನುಷ್ಯ. ಅವರ ಜೊತೆ ಈ ವರ್ತನೆ ಖಂಡನೀಯ ಎಂದು ಹೇಳಿದ್ದಾರೆ.

ಇನ್ನು ಪಂದ್ಯದಲ್ಲಿ ಭಾರತವು 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಜಮ್‌ಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನು ಓದಿ: ಭಾರತದಲ್ಲಿ ಇರಬೇಕಿದ್ದರೆ ‘ಭಾರತ ಮಾತಾ ಕಿ ಜೈ’ ಹೇಳಬೇಕು: ವಿವಾದಾತ್ಮಕ ಹೇಳಿಕೆ ಕೊಟ್ಟ ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...