Homeಮುಖಪುಟಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಪಾಲಕ್ಕಾಡ್ ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ತನ್ನ ಬಿಜೆಪಿ ಆಡಳಿತ ನಡೆಸುತ್ತಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

- Advertisement -
- Advertisement -

ಕೇರಳದ ಸ್ಥಳೀಯ ಚುನಾವಣೆಯಲ್ಲಿ ಪಾಲಕ್ಕಾಡ್ ಪಟ್ಟಣದಲ್ಲಿ ಸತತ ಎರಡನೇ ಗೆಲುವು ಸಾಧಿಸಿರುವ ಬಿಜೆಪಿಯ ಸಂಭ್ರಮಾಚರಣೆಯಲ್ಲಿ ಪುರಸಭೆ ಕಟ್ಟಡದ ಮೇಲೆ ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಗಳೊಂದಿಗೆ ಭಾರಿ ಪೋಸ್ಟರ್‌ಗಳನ್ನು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪಾಲಕ್ಕಾಡ್ ಮುನ್ಸಿಪಲ್ ಕಾರ್ಯದರ್ಶಿ ನೀಡಿದ ದೂರಿನ ಹಿನ್ನೆಲೆ ಪೊಲೀಸರು ಗುರುವಾರ ತಡರಾತ್ರಿ, ಘಟನೆಯಲ್ಲಿ ಭಾಗಿಯಾಗಿದ್ದ ಕೆಲವು ಬಿಜೆಪಿ ಕಾರ್ಯಕರ್ತರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ.

“ನಾವು ಸರ್ಕಾರಿ ಅಧಿಕಾರಿಯೂ ಆಗಿರುವ ಪುರಸಭೆ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಗಲಭೆಗೆ ಕಾರಣವಾಗುವ ಪ್ರಚೋದನೆ ಮೇಲೆ ಸೆಕ್ಷನ್ 153 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ” ಎಂದು ಪಾಲಕ್ಕಾಡ್ ಪೊಲೀಸ್ ಮುಖ್ಯಸ್ಥ ಸುಜಿದಾಸ್ ಎಸ್. ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೇರಳದಾದ್ಯಂತ ಈ ಡಿಸೆಂಬರ್‌ನಲ್ಲಿ ಹಂತ ಹಂತವಾಗಿ ನಡೆದ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ,    ಪಾಲಕ್ಕಾಡ್ ಮುನ್ಸಿಪಲ್‌ನಲ್ಲಿ ಬಿಜೆಪಿ ಎರಡನೇ ಬಾರಿಯೂ ಜಯಗಳಿಸಿತು. ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

ಡಿಸೆಂಬರ್ 16 ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಬೆಂಬಲಿಗರ ಗುಂಪೊಂದು ಪಾಲಕ್ಕಾಡ್ ಪುರಸಭೆಯ ಕಟ್ಟಡದ ಮೇಲಕ್ಕೆ ಏರಿ, ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಅನಾವರಣಗೊಳಿಸಿತು. ಈ ಪೋಸ್ಟರ್‌ಗಳಲ್ಲಿ ಒಂದರಲ್ಲಿ “ಜೈ ಶ್ರೀ ರಾಮ್” ಘೋಷಣೆಯೊಂದಿಗೆ ಮರಾಠ ರಾಜ ಶಿವಾಜಿಯ ಚಿತ್ರವಿತ್ತು. ಮತ್ತೊಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದರು.

ಈ ಘಟನೆಯ ವಿಡಿಯೋ ಸ್ಥಳೀಯ ಸಾಮಾಜಿಕ ಮಾಧ್ಯಮ ವಲಯಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ನಾಂದಿ ಹಾಡಿದೆ. ಇದಕ್ಕೆ ತುಪ್ಪ ಸುರಿದಂತೆ ಬಿಜೆಪಿ ವಕ್ತಾರ ಸಂದೀಪ್ ವಾರಿಯರ್ ಅವರ ಸಂಭ್ರಮಾಚರಣೆಯ ಫೇಸ್‌ಬುಕ್ ಪೋಸ್ಟ್ ಈ ವಿವಾದವನ್ನು ಮತ್ತಷ್ಟು ಉಲ್ಬಣಗೊಳಿಸಿತು. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಪಾಲಕ್ಕಾಡ್ ಪಟ್ಟಣ ಕೇರಳದ ಗುಜರಾತ್” ಎಂದು ಹೇಳಿದ್ದರು.


ಇದನ್ನೂ ಓದಿ: ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...