Homeಮುಖಪುಟಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಪಾಲಕ್ಕಾಡ್ ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ತನ್ನ ಬಿಜೆಪಿ ಆಡಳಿತ ನಡೆಸುತ್ತಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

- Advertisement -
- Advertisement -

ಕೇರಳದ ಸ್ಥಳೀಯ ಚುನಾವಣೆಯಲ್ಲಿ ಪಾಲಕ್ಕಾಡ್ ಪಟ್ಟಣದಲ್ಲಿ ಸತತ ಎರಡನೇ ಗೆಲುವು ಸಾಧಿಸಿರುವ ಬಿಜೆಪಿಯ ಸಂಭ್ರಮಾಚರಣೆಯಲ್ಲಿ ಪುರಸಭೆ ಕಟ್ಟಡದ ಮೇಲೆ ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಗಳೊಂದಿಗೆ ಭಾರಿ ಪೋಸ್ಟರ್‌ಗಳನ್ನು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪಾಲಕ್ಕಾಡ್ ಮುನ್ಸಿಪಲ್ ಕಾರ್ಯದರ್ಶಿ ನೀಡಿದ ದೂರಿನ ಹಿನ್ನೆಲೆ ಪೊಲೀಸರು ಗುರುವಾರ ತಡರಾತ್ರಿ, ಘಟನೆಯಲ್ಲಿ ಭಾಗಿಯಾಗಿದ್ದ ಕೆಲವು ಬಿಜೆಪಿ ಕಾರ್ಯಕರ್ತರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ.

“ನಾವು ಸರ್ಕಾರಿ ಅಧಿಕಾರಿಯೂ ಆಗಿರುವ ಪುರಸಭೆ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಗಲಭೆಗೆ ಕಾರಣವಾಗುವ ಪ್ರಚೋದನೆ ಮೇಲೆ ಸೆಕ್ಷನ್ 153 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ” ಎಂದು ಪಾಲಕ್ಕಾಡ್ ಪೊಲೀಸ್ ಮುಖ್ಯಸ್ಥ ಸುಜಿದಾಸ್ ಎಸ್. ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೇರಳದಾದ್ಯಂತ ಈ ಡಿಸೆಂಬರ್‌ನಲ್ಲಿ ಹಂತ ಹಂತವಾಗಿ ನಡೆದ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ,    ಪಾಲಕ್ಕಾಡ್ ಮುನ್ಸಿಪಲ್‌ನಲ್ಲಿ ಬಿಜೆಪಿ ಎರಡನೇ ಬಾರಿಯೂ ಜಯಗಳಿಸಿತು. ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

ಡಿಸೆಂಬರ್ 16 ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಬೆಂಬಲಿಗರ ಗುಂಪೊಂದು ಪಾಲಕ್ಕಾಡ್ ಪುರಸಭೆಯ ಕಟ್ಟಡದ ಮೇಲಕ್ಕೆ ಏರಿ, ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಅನಾವರಣಗೊಳಿಸಿತು. ಈ ಪೋಸ್ಟರ್‌ಗಳಲ್ಲಿ ಒಂದರಲ್ಲಿ “ಜೈ ಶ್ರೀ ರಾಮ್” ಘೋಷಣೆಯೊಂದಿಗೆ ಮರಾಠ ರಾಜ ಶಿವಾಜಿಯ ಚಿತ್ರವಿತ್ತು. ಮತ್ತೊಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದರು.

ಈ ಘಟನೆಯ ವಿಡಿಯೋ ಸ್ಥಳೀಯ ಸಾಮಾಜಿಕ ಮಾಧ್ಯಮ ವಲಯಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ನಾಂದಿ ಹಾಡಿದೆ. ಇದಕ್ಕೆ ತುಪ್ಪ ಸುರಿದಂತೆ ಬಿಜೆಪಿ ವಕ್ತಾರ ಸಂದೀಪ್ ವಾರಿಯರ್ ಅವರ ಸಂಭ್ರಮಾಚರಣೆಯ ಫೇಸ್‌ಬುಕ್ ಪೋಸ್ಟ್ ಈ ವಿವಾದವನ್ನು ಮತ್ತಷ್ಟು ಉಲ್ಬಣಗೊಳಿಸಿತು. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಪಾಲಕ್ಕಾಡ್ ಪಟ್ಟಣ ಕೇರಳದ ಗುಜರಾತ್” ಎಂದು ಹೇಳಿದ್ದರು.


ಇದನ್ನೂ ಓದಿ: ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...