Homeಮುಖಪುಟಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಪಾಲಕ್ಕಾಡ್ ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ತನ್ನ ಬಿಜೆಪಿ ಆಡಳಿತ ನಡೆಸುತ್ತಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

- Advertisement -
- Advertisement -

ಕೇರಳದ ಸ್ಥಳೀಯ ಚುನಾವಣೆಯಲ್ಲಿ ಪಾಲಕ್ಕಾಡ್ ಪಟ್ಟಣದಲ್ಲಿ ಸತತ ಎರಡನೇ ಗೆಲುವು ಸಾಧಿಸಿರುವ ಬಿಜೆಪಿಯ ಸಂಭ್ರಮಾಚರಣೆಯಲ್ಲಿ ಪುರಸಭೆ ಕಟ್ಟಡದ ಮೇಲೆ ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಗಳೊಂದಿಗೆ ಭಾರಿ ಪೋಸ್ಟರ್‌ಗಳನ್ನು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪಾಲಕ್ಕಾಡ್ ಮುನ್ಸಿಪಲ್ ಕಾರ್ಯದರ್ಶಿ ನೀಡಿದ ದೂರಿನ ಹಿನ್ನೆಲೆ ಪೊಲೀಸರು ಗುರುವಾರ ತಡರಾತ್ರಿ, ಘಟನೆಯಲ್ಲಿ ಭಾಗಿಯಾಗಿದ್ದ ಕೆಲವು ಬಿಜೆಪಿ ಕಾರ್ಯಕರ್ತರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ.

“ನಾವು ಸರ್ಕಾರಿ ಅಧಿಕಾರಿಯೂ ಆಗಿರುವ ಪುರಸಭೆ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಗಲಭೆಗೆ ಕಾರಣವಾಗುವ ಪ್ರಚೋದನೆ ಮೇಲೆ ಸೆಕ್ಷನ್ 153 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ” ಎಂದು ಪಾಲಕ್ಕಾಡ್ ಪೊಲೀಸ್ ಮುಖ್ಯಸ್ಥ ಸುಜಿದಾಸ್ ಎಸ್. ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೇರಳದಾದ್ಯಂತ ಈ ಡಿಸೆಂಬರ್‌ನಲ್ಲಿ ಹಂತ ಹಂತವಾಗಿ ನಡೆದ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ,    ಪಾಲಕ್ಕಾಡ್ ಮುನ್ಸಿಪಲ್‌ನಲ್ಲಿ ಬಿಜೆಪಿ ಎರಡನೇ ಬಾರಿಯೂ ಜಯಗಳಿಸಿತು. ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

ಡಿಸೆಂಬರ್ 16 ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಬೆಂಬಲಿಗರ ಗುಂಪೊಂದು ಪಾಲಕ್ಕಾಡ್ ಪುರಸಭೆಯ ಕಟ್ಟಡದ ಮೇಲಕ್ಕೆ ಏರಿ, ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಅನಾವರಣಗೊಳಿಸಿತು. ಈ ಪೋಸ್ಟರ್‌ಗಳಲ್ಲಿ ಒಂದರಲ್ಲಿ “ಜೈ ಶ್ರೀ ರಾಮ್” ಘೋಷಣೆಯೊಂದಿಗೆ ಮರಾಠ ರಾಜ ಶಿವಾಜಿಯ ಚಿತ್ರವಿತ್ತು. ಮತ್ತೊಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದರು.

ಈ ಘಟನೆಯ ವಿಡಿಯೋ ಸ್ಥಳೀಯ ಸಾಮಾಜಿಕ ಮಾಧ್ಯಮ ವಲಯಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ನಾಂದಿ ಹಾಡಿದೆ. ಇದಕ್ಕೆ ತುಪ್ಪ ಸುರಿದಂತೆ ಬಿಜೆಪಿ ವಕ್ತಾರ ಸಂದೀಪ್ ವಾರಿಯರ್ ಅವರ ಸಂಭ್ರಮಾಚರಣೆಯ ಫೇಸ್‌ಬುಕ್ ಪೋಸ್ಟ್ ಈ ವಿವಾದವನ್ನು ಮತ್ತಷ್ಟು ಉಲ್ಬಣಗೊಳಿಸಿತು. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಪಾಲಕ್ಕಾಡ್ ಪಟ್ಟಣ ಕೇರಳದ ಗುಜರಾತ್” ಎಂದು ಹೇಳಿದ್ದರು.


ಇದನ್ನೂ ಓದಿ: ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...