Homeಮುಖಪುಟಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ಪಾಲಕ್ಕಾಡ್ ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ತನ್ನ ಬಿಜೆಪಿ ಆಡಳಿತ ನಡೆಸುತ್ತಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

- Advertisement -
- Advertisement -

ಕೇರಳದ ಸ್ಥಳೀಯ ಚುನಾವಣೆಯಲ್ಲಿ ಪಾಲಕ್ಕಾಡ್ ಪಟ್ಟಣದಲ್ಲಿ ಸತತ ಎರಡನೇ ಗೆಲುವು ಸಾಧಿಸಿರುವ ಬಿಜೆಪಿಯ ಸಂಭ್ರಮಾಚರಣೆಯಲ್ಲಿ ಪುರಸಭೆ ಕಟ್ಟಡದ ಮೇಲೆ ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಗಳೊಂದಿಗೆ ಭಾರಿ ಪೋಸ್ಟರ್‌ಗಳನ್ನು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪಾಲಕ್ಕಾಡ್ ಮುನ್ಸಿಪಲ್ ಕಾರ್ಯದರ್ಶಿ ನೀಡಿದ ದೂರಿನ ಹಿನ್ನೆಲೆ ಪೊಲೀಸರು ಗುರುವಾರ ತಡರಾತ್ರಿ, ಘಟನೆಯಲ್ಲಿ ಭಾಗಿಯಾಗಿದ್ದ ಕೆಲವು ಬಿಜೆಪಿ ಕಾರ್ಯಕರ್ತರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ.

“ನಾವು ಸರ್ಕಾರಿ ಅಧಿಕಾರಿಯೂ ಆಗಿರುವ ಪುರಸಭೆ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಗಲಭೆಗೆ ಕಾರಣವಾಗುವ ಪ್ರಚೋದನೆ ಮೇಲೆ ಸೆಕ್ಷನ್ 153 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ” ಎಂದು ಪಾಲಕ್ಕಾಡ್ ಪೊಲೀಸ್ ಮುಖ್ಯಸ್ಥ ಸುಜಿದಾಸ್ ಎಸ್. ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೇರಳದಾದ್ಯಂತ ಈ ಡಿಸೆಂಬರ್‌ನಲ್ಲಿ ಹಂತ ಹಂತವಾಗಿ ನಡೆದ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ,    ಪಾಲಕ್ಕಾಡ್ ಮುನ್ಸಿಪಲ್‌ನಲ್ಲಿ ಬಿಜೆಪಿ ಎರಡನೇ ಬಾರಿಯೂ ಜಯಗಳಿಸಿತು. ಪುರಸಭೆಯ ಒಟ್ಟು 52 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಪಡೆದು ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಕೇರಳದಲ್ಲಿ ಬಿಜೆಪಿ ಆಡಳಿತದಲ್ಲಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ.

ಡಿಸೆಂಬರ್ 16 ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಬೆಂಬಲಿಗರ ಗುಂಪೊಂದು ಪಾಲಕ್ಕಾಡ್ ಪುರಸಭೆಯ ಕಟ್ಟಡದ ಮೇಲಕ್ಕೆ ಏರಿ, ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಅನಾವರಣಗೊಳಿಸಿತು. ಈ ಪೋಸ್ಟರ್‌ಗಳಲ್ಲಿ ಒಂದರಲ್ಲಿ “ಜೈ ಶ್ರೀ ರಾಮ್” ಘೋಷಣೆಯೊಂದಿಗೆ ಮರಾಠ ರಾಜ ಶಿವಾಜಿಯ ಚಿತ್ರವಿತ್ತು. ಮತ್ತೊಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದರು.

ಈ ಘಟನೆಯ ವಿಡಿಯೋ ಸ್ಥಳೀಯ ಸಾಮಾಜಿಕ ಮಾಧ್ಯಮ ವಲಯಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ನಾಂದಿ ಹಾಡಿದೆ. ಇದಕ್ಕೆ ತುಪ್ಪ ಸುರಿದಂತೆ ಬಿಜೆಪಿ ವಕ್ತಾರ ಸಂದೀಪ್ ವಾರಿಯರ್ ಅವರ ಸಂಭ್ರಮಾಚರಣೆಯ ಫೇಸ್‌ಬುಕ್ ಪೋಸ್ಟ್ ಈ ವಿವಾದವನ್ನು ಮತ್ತಷ್ಟು ಉಲ್ಬಣಗೊಳಿಸಿತು. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಪಾಲಕ್ಕಾಡ್ ಪಟ್ಟಣ ಕೇರಳದ ಗುಜರಾತ್” ಎಂದು ಹೇಳಿದ್ದರು.


ಇದನ್ನೂ ಓದಿ: ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...