Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

’ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಜಾತ್ಯತೀತ ಪ್ರಜಾಪ್ರಭುತ್ವ ಇರುವವರೆಗೂ ನೀವು ಧರ್ಮ ಪಠಣಗಳನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ನೇತಾಜಿ ವಾರ್ಷಿಕೋತ್ಸವದಂದು ನಡೆದ ಕೇಂದ್ರದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ಮೊದಲು ಕೇಳಿ ಬಂದ ಜೈ ಶ್ರೀರಾಮ್ ಘೋಷಣೆಗಳಿಗೆ ವೇದಿಕೆಯಲ್ಲೇ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ. ಕೇಂದ್ರ ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಸಂಸದೆ ಮೆಹುವಾ ಮೊಯಿತ್ರಾ, “ಕೇಂದ್ರ ಸರ್ಕಾರವು ಬಹು-ನಂಬಿಕೆಯ ಪ್ರಜಾಪ್ರಭುತ್ವದ ಎಲ್ಲಾ ಪಾವಿತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಅಧಿಕೃತ ಕಾರ್ಯಕ್ರಮವೊಂದರಲ್ಲಿ ಜಾತ್ಯತೀತ ಪ್ರಜಾಪ್ರಭುತ್ವದ ಈ ನೆಲದಲ್ಲಿ ಧರ್ಮದ ಪಠಣಗಳನ್ನು ಚೀರುವುದು ಅಕ್ಷಮ್ಯ. ಬಿಜೆಪಿಯ ಅಶಿಕ್ಷಿತ/ಹುಂಬ ಜನರು ಮಾತ್ರ ಈ ರೀತಿಯ ಅಸಂಬದ್ಧತೆಯನ್ನು ಪ್ರದರ್ಶಿಸಬಲ್ಲರು’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಂಸದೆ ಮೆಹುವಾ, “ಧರ್ಮವು ಸರ್ಕಾರಕ್ಕೆ ಸಮನಾಗಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಅಥವಾ ಭಾರತವು ನಾಶವಾಗುತ್ತಿರುವ ಈ ದೊಡ್ಡ ವಿನಾಶವಾದಿ ಕೆಲಸ ನಿಲ್ಲಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ಹಿಂದೂಗಳು ಇತರ ಧರ್ಮಗಳಿಗೆ ಅಸಹಿಷ್ಣುತೆ ತೋರುವುದನ್ನು ತನ್ನ ತಂದೆ ಒಪ್ಪುತ್ತಿರಲಿಲ್ಲ ಎಂದು ನೇತಾಜಿ ಮಗಳು ಅನಿತಾ ಬೋಸ್ ಹೇಳಿದ್ದಾರೆ ಎಂದು ಮೆಹುವಾ ಹೇಳಿದ್ದಾರೆ. ತಮ್ಮ ಟ್ವೀಟ್‌ನ ಕೊನೆಯಲ್ಲಿ ಅವರು, ಜೈ ಶ್ರೀ ಸಂವಿಧಾನ್ ಎಂಬ ಮಹತ್ವದ ಘೋಷಣೆ ಹಾಕಿದ್ದಾರೆ.

ಮತ್ತೊಬ್ಬ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್, ಆ ಸಭೆಯಲ್ಲಿ ಮಮತಾ ಬ್ಯಾನರ್ಜಿಯವರ ಭಾಷಣಕ್ಕೆ ಅಡೆತಡೆ ಮಾಡಿದ್ದನ್ನು ಖಂಡಿಸಿದ್ದಾರೆ, ಅನಾಗರಿಕರಿಗೆ ಘನತೆಯನ್ನು ಕಲಿಸಲಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮಮತಾ ಅವರ ಕ್ರಮವು ತನ್ನ ಹತಾಶೆಯನ್ನು ತೋರಿಸಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯ ವರ್ಗಿಯಾ ಹೇಳಿದ್ದಾರೆ. “ಜೈ ಶ್ರೀ ರಾಮ್ ಜಪಿಸುವುದರಲ್ಲಿ ಏನು ಸಮಸ್ಯೆ ಇದೆ ಮತ್ತು ಮಮತಾ ಅದರ ಬಗ್ಗೆ ಏಕೆ ಸಿಟ್ಟಾಗುತ್ತಾರೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ. ಮಮತಾ ಅವರು ಎದ್ದುನಿಂತಾಗ ಅವರ ಗೌರವಾರ್ಥವಾಗಿ ಘೋಷಣೆ ಕೂಗಲಾಗಿದೆ ಎಂದು ನಾನು ಭಾವಿಸುತ್ತೇನೆ. ಘೋಷಣೆಯಿಂದಾಗಿ ವೇದಿಕೆಯಿಂದ ಹೊರನಡೆಯುವುದು ಹತಾಶೆಯನ್ನು ಸೂಚಿಸುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವೇಗ ಹೆಚ್ಚುತ್ತಿದೆ. ಉನ್ನತ ನಾಯಕರು, ಮಂತ್ರಿಗಳು ತೃಣಮೂಲ ಪಕ್ಷವನ್ನು ತೊರೆದಿದ್ದು, ಪಕ್ಷದೊಳಗಿನ ಬಿರುಕುಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ. ಈ ಪಕ್ಷಾಂತರ ಬಿಜೆಪಿಯಲ್ಲೂ ಸಮಸ್ಯೆಯನ್ನು ತಂದಿದೆ.

ನೇತಾಜಿ ಜನ್ಮದಿನಾಚರಣೆಯು ಬಿಜೆಪಿ ಮತ್ತು ತೃಣಮೂಲ ನಡುವೆ ಘರ್ಷಣೆಯ ಹಂತ ತಲುಪಿದೆ. ಈ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಈ ಕಾರ್ಯಕ್ರಮದಲ್ಲಿ ಜಂಟಿಯಾಗಿ ಕಾಣಿಸಿಕೊಂಡಿರುವುದು ಆಶ್ಚರ್ಯಕರವಾಗಿತ್ತು! ಆದರೆ ಮಮತಾ ಅವರು ತಮಗೆ ಅವಮಾನಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಭಾಷಣ ಮಾಡಲು ನಿರಾಕರಿಸಿ ವೇದಿಕೆಯಿಂದ ಹೊರನಡೆದಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...